Homeಮುಖಪುಟಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

ಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆಯ ದಾಳಿ ಮುಂದುವರೆದಿದ್ದು, ಆಸ್ಪತ್ರೆಗಳು ಮೃತದೇಹ ಮತ್ತು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಇಂಧನ, ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಕೊರತೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.

ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಕದನ ವಿರಾಮಕ್ಕೆ ಆಗ್ರಹಿಸಿದೆ. ಇಸ್ರೇಲ್ ಬೆಂಬಲಿಸುವ ಫ್ರಾನ್ಸ್ ಕೂಡ ತುರ್ತು ಕದನ ವಿರಾಮಕ್ಕೆ ಮನವಿ ಮಾಡಿದೆ.

ಉತ್ತರ ಗಾಝಾದ ಅಲ್-ಶಿಫಾ ಆಸ್ಪತ್ರೆಯ ತುರ್ತು ವಿಭಾಗದಲ್ಲಿ “ರಕ್ತಸ್ನಾನ” ನಡೆಯುತ್ತಿದೆ. ಅಲ್ಲಿ ಪರಿಸ್ಥಿತಿ ಸುಧಾರಿಸಲು ತುರ್ತು ಸೌಲಭ್ಯ ಒದಗಿಸುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನೂರಾರು ಸ್ಥಳಾಂತರಗೊಂಡ ಜನರು ಆಸ್ಪತ್ರೆಯ ಕಟ್ಟಡ ಮತ್ತು ಮೈದಾನವನ್ನು ಆಶ್ರಯಕ್ಕಾಗಿ ಬಳಸುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಮತ್ತು ಆಹಾರದ ತೀವ್ರ ಕೊರತೆ ಉಂಟಾಗಿದೆ.

ಇಂಧನ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಆಪರೇಷನ್ ಥಿಯೇಟರ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಡಬ್ಲ್ಯುಹೆಚ್‌ಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್‌ ಶಿಫಾ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ ಹೊಸ ರೋಗಿಗಳು ಬರುತ್ತಿದ್ದಾರೆ. ಅವರ ಅಗತ್ಯಗಳನ್ನು ಪೂರೈಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಅಸಾಧ್ಯವಾಗಿದೆ, ಎಂದು ಡಬ್ಲ್ಯುಹೆಚ್‌ಒ ಹೇಳಿದೆ.

ಗಾಯಗೊಂಡವರಿಗೆ ನೆಲದ ಮೇಲೆ ಮಲಗಿಸಿ ಹೊಲಿಗೆ ಹಾಕಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾವುದೇ ನೋವು ನಿವಾರಕ ಅನಸ್ತೇಶಿಯ ಸೌಲಭ್ಯವಿಲ್ಲ. ಅಲ್-ಶಿಫಾ ಆಸ್ಪತ್ರೆಯನ್ನು ಮೊದಲಿನಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಏಕೆಂದರೆ, ಇದು ಗಾಝಾ ಅತಿದೊಡ್ಡ ಆಸ್ಪತ್ರೆ ಎಂದು ಡಬ್ಲ್ಯುಹೆಚ್‌ಒ ತಿಳಿಸಿದೆ.

ಅಲ್‌ ಶಿಫಾ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಡಬ್ಲ್ಯುಹೆಚ್‌ಒನ ಆದ್ಯತೆ. ಗಾಜಾ ಪಟ್ಟಿಯ ಸಂಪೂರ್ಣ ಉತ್ತರದಲ್ಲಿ, ಅಲ್-ಅಹ್ಲಿ ಅರಬ್ ಆಸ್ಪತ್ರೆ ಮಾತ್ರ ಭಾಗಶಃ ಕಾರ್ಯನಿರ್ವಹಿಸುತ್ತಿದೆ. ಅಲ್-ಶಿಫಾ, ಅಲ್ ಅವ್ದಾ ಮತ್ತು ಅಲ್ ಸಹಬಾ ವೈದ್ಯಕೀಯ ಸಂಕೀರ್ಣಗಳು ಕನಿಷ್ಠ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಎಫ್‌ಪಿ ವರದಿ ಮಾಡಿದೆ.

ಅಲ್-ಶಿಫಾದಲ್ಲಿ, ನಿಯಮಿತ ವೈದ್ಯಕೀಯ ಸರಬರಾಜು ಒದಗಿಸಿದರೆ 20 ಆಪರೇಷನ್ ಥಿಯೇಟರ್‌ಗಳನ್ನು ಸಕ್ರಿಯಗೊಳಿಸಬಹುದು. ಹಾಗೆಯೇ ಶಸ್ತ್ರಚಿಕಿತ್ಸಾ ನಂತರದ ಆರೈಕೆ ಸೇವೆಗಳು, ಇಂಧನ, ಆಮ್ಲಜನಕ, ಔಷಧಿಗಳು, ಆಹಾರ ಮತ್ತು ನೀರಿನ ನಿಯಮಿತ ಪೂರೈಕೆಗಳನ್ನು ಒದಗಿಸಬೇಕಿದೆ.

ಈ ನಡುವೆ, ಪಶ್ಚಿಮ ದಂಡೆಯ ತುಲ್ಕರ್ಮ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಪ್ಯಾಲೆಸ್ತೀನಿಯರು ಭಾನುವಾರ ಕೊಲ್ಲಲ್ಪಟ್ಟರು ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಯುದ್ಧ ಇನ್ನಿಬ್ಬರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದು, ಸೈನಿಕರ ಸಾವಿನ ಸಂಖ್ಯೆ 121 ಕ್ಕೆ ಏರಿದೆ. ‘ಸಂಪೂರ್ಣ ಗೆಲುವು’ ಸಿಗುವವರೆಗೆ ಇಸ್ರೇಲ್ ಯುದ್ಧ ನಡೆಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ತೀವ್ರಗೊಳ್ಳುತ್ತಿರುವ ದಾಳಿಗಳ ಮಧ್ಯೆ, ಫ್ರಾನ್ಸ್ ತುರ್ತು ಕದನ ವಿರಾಮಕ್ಕೆ ಕರೆ ನೀಡಿದೆ. ಫ್ರಾನ್ಸ್‌ನ ವಿದೇಶಾಂಗ ಮಂತ್ರಿ ಕ್ಯಾಥರೀನ್ ಕೊಲೊನ್ನಾ ಇಸ್ರೇಲ್‌ಗೆ ಆಗಮಿಸಿದ್ದು, ಕದನ ವಿರಾಮ ಆಗ್ರಹಿಸಿದ್ದಾರೆ. ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...