Homeಮುಖಪುಟಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

ಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆಯ ದಾಳಿ ಮುಂದುವರೆದಿದ್ದು, ಆಸ್ಪತ್ರೆಗಳು ಮೃತದೇಹ ಮತ್ತು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಇಂಧನ, ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಕೊರತೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.

ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಕದನ ವಿರಾಮಕ್ಕೆ ಆಗ್ರಹಿಸಿದೆ. ಇಸ್ರೇಲ್ ಬೆಂಬಲಿಸುವ ಫ್ರಾನ್ಸ್ ಕೂಡ ತುರ್ತು ಕದನ ವಿರಾಮಕ್ಕೆ ಮನವಿ ಮಾಡಿದೆ.

ಉತ್ತರ ಗಾಝಾದ ಅಲ್-ಶಿಫಾ ಆಸ್ಪತ್ರೆಯ ತುರ್ತು ವಿಭಾಗದಲ್ಲಿ “ರಕ್ತಸ್ನಾನ” ನಡೆಯುತ್ತಿದೆ. ಅಲ್ಲಿ ಪರಿಸ್ಥಿತಿ ಸುಧಾರಿಸಲು ತುರ್ತು ಸೌಲಭ್ಯ ಒದಗಿಸುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನೂರಾರು ಸ್ಥಳಾಂತರಗೊಂಡ ಜನರು ಆಸ್ಪತ್ರೆಯ ಕಟ್ಟಡ ಮತ್ತು ಮೈದಾನವನ್ನು ಆಶ್ರಯಕ್ಕಾಗಿ ಬಳಸುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಮತ್ತು ಆಹಾರದ ತೀವ್ರ ಕೊರತೆ ಉಂಟಾಗಿದೆ.

ಇಂಧನ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಆಪರೇಷನ್ ಥಿಯೇಟರ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಡಬ್ಲ್ಯುಹೆಚ್‌ಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್‌ ಶಿಫಾ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ ಹೊಸ ರೋಗಿಗಳು ಬರುತ್ತಿದ್ದಾರೆ. ಅವರ ಅಗತ್ಯಗಳನ್ನು ಪೂರೈಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಅಸಾಧ್ಯವಾಗಿದೆ, ಎಂದು ಡಬ್ಲ್ಯುಹೆಚ್‌ಒ ಹೇಳಿದೆ.

ಗಾಯಗೊಂಡವರಿಗೆ ನೆಲದ ಮೇಲೆ ಮಲಗಿಸಿ ಹೊಲಿಗೆ ಹಾಕಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾವುದೇ ನೋವು ನಿವಾರಕ ಅನಸ್ತೇಶಿಯ ಸೌಲಭ್ಯವಿಲ್ಲ. ಅಲ್-ಶಿಫಾ ಆಸ್ಪತ್ರೆಯನ್ನು ಮೊದಲಿನಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಏಕೆಂದರೆ, ಇದು ಗಾಝಾ ಅತಿದೊಡ್ಡ ಆಸ್ಪತ್ರೆ ಎಂದು ಡಬ್ಲ್ಯುಹೆಚ್‌ಒ ತಿಳಿಸಿದೆ.

ಅಲ್‌ ಶಿಫಾ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಡಬ್ಲ್ಯುಹೆಚ್‌ಒನ ಆದ್ಯತೆ. ಗಾಜಾ ಪಟ್ಟಿಯ ಸಂಪೂರ್ಣ ಉತ್ತರದಲ್ಲಿ, ಅಲ್-ಅಹ್ಲಿ ಅರಬ್ ಆಸ್ಪತ್ರೆ ಮಾತ್ರ ಭಾಗಶಃ ಕಾರ್ಯನಿರ್ವಹಿಸುತ್ತಿದೆ. ಅಲ್-ಶಿಫಾ, ಅಲ್ ಅವ್ದಾ ಮತ್ತು ಅಲ್ ಸಹಬಾ ವೈದ್ಯಕೀಯ ಸಂಕೀರ್ಣಗಳು ಕನಿಷ್ಠ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಎಫ್‌ಪಿ ವರದಿ ಮಾಡಿದೆ.

ಅಲ್-ಶಿಫಾದಲ್ಲಿ, ನಿಯಮಿತ ವೈದ್ಯಕೀಯ ಸರಬರಾಜು ಒದಗಿಸಿದರೆ 20 ಆಪರೇಷನ್ ಥಿಯೇಟರ್‌ಗಳನ್ನು ಸಕ್ರಿಯಗೊಳಿಸಬಹುದು. ಹಾಗೆಯೇ ಶಸ್ತ್ರಚಿಕಿತ್ಸಾ ನಂತರದ ಆರೈಕೆ ಸೇವೆಗಳು, ಇಂಧನ, ಆಮ್ಲಜನಕ, ಔಷಧಿಗಳು, ಆಹಾರ ಮತ್ತು ನೀರಿನ ನಿಯಮಿತ ಪೂರೈಕೆಗಳನ್ನು ಒದಗಿಸಬೇಕಿದೆ.

ಈ ನಡುವೆ, ಪಶ್ಚಿಮ ದಂಡೆಯ ತುಲ್ಕರ್ಮ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಪ್ಯಾಲೆಸ್ತೀನಿಯರು ಭಾನುವಾರ ಕೊಲ್ಲಲ್ಪಟ್ಟರು ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಯುದ್ಧ ಇನ್ನಿಬ್ಬರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದು, ಸೈನಿಕರ ಸಾವಿನ ಸಂಖ್ಯೆ 121 ಕ್ಕೆ ಏರಿದೆ. ‘ಸಂಪೂರ್ಣ ಗೆಲುವು’ ಸಿಗುವವರೆಗೆ ಇಸ್ರೇಲ್ ಯುದ್ಧ ನಡೆಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ತೀವ್ರಗೊಳ್ಳುತ್ತಿರುವ ದಾಳಿಗಳ ಮಧ್ಯೆ, ಫ್ರಾನ್ಸ್ ತುರ್ತು ಕದನ ವಿರಾಮಕ್ಕೆ ಕರೆ ನೀಡಿದೆ. ಫ್ರಾನ್ಸ್‌ನ ವಿದೇಶಾಂಗ ಮಂತ್ರಿ ಕ್ಯಾಥರೀನ್ ಕೊಲೊನ್ನಾ ಇಸ್ರೇಲ್‌ಗೆ ಆಗಮಿಸಿದ್ದು, ಕದನ ವಿರಾಮ ಆಗ್ರಹಿಸಿದ್ದಾರೆ. ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...