Homeಮುಖಪುಟಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

ಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆಯ ದಾಳಿ ಮುಂದುವರೆದಿದ್ದು, ಆಸ್ಪತ್ರೆಗಳು ಮೃತದೇಹ ಮತ್ತು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಇಂಧನ, ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಕೊರತೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.

ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಕದನ ವಿರಾಮಕ್ಕೆ ಆಗ್ರಹಿಸಿದೆ. ಇಸ್ರೇಲ್ ಬೆಂಬಲಿಸುವ ಫ್ರಾನ್ಸ್ ಕೂಡ ತುರ್ತು ಕದನ ವಿರಾಮಕ್ಕೆ ಮನವಿ ಮಾಡಿದೆ.

ಉತ್ತರ ಗಾಝಾದ ಅಲ್-ಶಿಫಾ ಆಸ್ಪತ್ರೆಯ ತುರ್ತು ವಿಭಾಗದಲ್ಲಿ “ರಕ್ತಸ್ನಾನ” ನಡೆಯುತ್ತಿದೆ. ಅಲ್ಲಿ ಪರಿಸ್ಥಿತಿ ಸುಧಾರಿಸಲು ತುರ್ತು ಸೌಲಭ್ಯ ಒದಗಿಸುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನೂರಾರು ಸ್ಥಳಾಂತರಗೊಂಡ ಜನರು ಆಸ್ಪತ್ರೆಯ ಕಟ್ಟಡ ಮತ್ತು ಮೈದಾನವನ್ನು ಆಶ್ರಯಕ್ಕಾಗಿ ಬಳಸುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಮತ್ತು ಆಹಾರದ ತೀವ್ರ ಕೊರತೆ ಉಂಟಾಗಿದೆ.

ಇಂಧನ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಆಪರೇಷನ್ ಥಿಯೇಟರ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಡಬ್ಲ್ಯುಹೆಚ್‌ಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್‌ ಶಿಫಾ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ ಹೊಸ ರೋಗಿಗಳು ಬರುತ್ತಿದ್ದಾರೆ. ಅವರ ಅಗತ್ಯಗಳನ್ನು ಪೂರೈಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಅಸಾಧ್ಯವಾಗಿದೆ, ಎಂದು ಡಬ್ಲ್ಯುಹೆಚ್‌ಒ ಹೇಳಿದೆ.

ಗಾಯಗೊಂಡವರಿಗೆ ನೆಲದ ಮೇಲೆ ಮಲಗಿಸಿ ಹೊಲಿಗೆ ಹಾಕಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾವುದೇ ನೋವು ನಿವಾರಕ ಅನಸ್ತೇಶಿಯ ಸೌಲಭ್ಯವಿಲ್ಲ. ಅಲ್-ಶಿಫಾ ಆಸ್ಪತ್ರೆಯನ್ನು ಮೊದಲಿನಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಏಕೆಂದರೆ, ಇದು ಗಾಝಾ ಅತಿದೊಡ್ಡ ಆಸ್ಪತ್ರೆ ಎಂದು ಡಬ್ಲ್ಯುಹೆಚ್‌ಒ ತಿಳಿಸಿದೆ.

ಅಲ್‌ ಶಿಫಾ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಡಬ್ಲ್ಯುಹೆಚ್‌ಒನ ಆದ್ಯತೆ. ಗಾಜಾ ಪಟ್ಟಿಯ ಸಂಪೂರ್ಣ ಉತ್ತರದಲ್ಲಿ, ಅಲ್-ಅಹ್ಲಿ ಅರಬ್ ಆಸ್ಪತ್ರೆ ಮಾತ್ರ ಭಾಗಶಃ ಕಾರ್ಯನಿರ್ವಹಿಸುತ್ತಿದೆ. ಅಲ್-ಶಿಫಾ, ಅಲ್ ಅವ್ದಾ ಮತ್ತು ಅಲ್ ಸಹಬಾ ವೈದ್ಯಕೀಯ ಸಂಕೀರ್ಣಗಳು ಕನಿಷ್ಠ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಎಫ್‌ಪಿ ವರದಿ ಮಾಡಿದೆ.

ಅಲ್-ಶಿಫಾದಲ್ಲಿ, ನಿಯಮಿತ ವೈದ್ಯಕೀಯ ಸರಬರಾಜು ಒದಗಿಸಿದರೆ 20 ಆಪರೇಷನ್ ಥಿಯೇಟರ್‌ಗಳನ್ನು ಸಕ್ರಿಯಗೊಳಿಸಬಹುದು. ಹಾಗೆಯೇ ಶಸ್ತ್ರಚಿಕಿತ್ಸಾ ನಂತರದ ಆರೈಕೆ ಸೇವೆಗಳು, ಇಂಧನ, ಆಮ್ಲಜನಕ, ಔಷಧಿಗಳು, ಆಹಾರ ಮತ್ತು ನೀರಿನ ನಿಯಮಿತ ಪೂರೈಕೆಗಳನ್ನು ಒದಗಿಸಬೇಕಿದೆ.

ಈ ನಡುವೆ, ಪಶ್ಚಿಮ ದಂಡೆಯ ತುಲ್ಕರ್ಮ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಪ್ಯಾಲೆಸ್ತೀನಿಯರು ಭಾನುವಾರ ಕೊಲ್ಲಲ್ಪಟ್ಟರು ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಯುದ್ಧ ಇನ್ನಿಬ್ಬರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದು, ಸೈನಿಕರ ಸಾವಿನ ಸಂಖ್ಯೆ 121 ಕ್ಕೆ ಏರಿದೆ. ‘ಸಂಪೂರ್ಣ ಗೆಲುವು’ ಸಿಗುವವರೆಗೆ ಇಸ್ರೇಲ್ ಯುದ್ಧ ನಡೆಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ತೀವ್ರಗೊಳ್ಳುತ್ತಿರುವ ದಾಳಿಗಳ ಮಧ್ಯೆ, ಫ್ರಾನ್ಸ್ ತುರ್ತು ಕದನ ವಿರಾಮಕ್ಕೆ ಕರೆ ನೀಡಿದೆ. ಫ್ರಾನ್ಸ್‌ನ ವಿದೇಶಾಂಗ ಮಂತ್ರಿ ಕ್ಯಾಥರೀನ್ ಕೊಲೊನ್ನಾ ಇಸ್ರೇಲ್‌ಗೆ ಆಗಮಿಸಿದ್ದು, ಕದನ ವಿರಾಮ ಆಗ್ರಹಿಸಿದ್ದಾರೆ. ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...