Homeಮುಖಪುಟಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

ಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆಯ ದಾಳಿ ಮುಂದುವರೆದಿದ್ದು, ಆಸ್ಪತ್ರೆಗಳು ಮೃತದೇಹ ಮತ್ತು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಇಂಧನ, ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಕೊರತೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.

ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಕದನ ವಿರಾಮಕ್ಕೆ ಆಗ್ರಹಿಸಿದೆ. ಇಸ್ರೇಲ್ ಬೆಂಬಲಿಸುವ ಫ್ರಾನ್ಸ್ ಕೂಡ ತುರ್ತು ಕದನ ವಿರಾಮಕ್ಕೆ ಮನವಿ ಮಾಡಿದೆ.

ಉತ್ತರ ಗಾಝಾದ ಅಲ್-ಶಿಫಾ ಆಸ್ಪತ್ರೆಯ ತುರ್ತು ವಿಭಾಗದಲ್ಲಿ “ರಕ್ತಸ್ನಾನ” ನಡೆಯುತ್ತಿದೆ. ಅಲ್ಲಿ ಪರಿಸ್ಥಿತಿ ಸುಧಾರಿಸಲು ತುರ್ತು ಸೌಲಭ್ಯ ಒದಗಿಸುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನೂರಾರು ಸ್ಥಳಾಂತರಗೊಂಡ ಜನರು ಆಸ್ಪತ್ರೆಯ ಕಟ್ಟಡ ಮತ್ತು ಮೈದಾನವನ್ನು ಆಶ್ರಯಕ್ಕಾಗಿ ಬಳಸುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಮತ್ತು ಆಹಾರದ ತೀವ್ರ ಕೊರತೆ ಉಂಟಾಗಿದೆ.

ಇಂಧನ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಆಪರೇಷನ್ ಥಿಯೇಟರ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಡಬ್ಲ್ಯುಹೆಚ್‌ಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್‌ ಶಿಫಾ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ ಹೊಸ ರೋಗಿಗಳು ಬರುತ್ತಿದ್ದಾರೆ. ಅವರ ಅಗತ್ಯಗಳನ್ನು ಪೂರೈಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಅಸಾಧ್ಯವಾಗಿದೆ, ಎಂದು ಡಬ್ಲ್ಯುಹೆಚ್‌ಒ ಹೇಳಿದೆ.

ಗಾಯಗೊಂಡವರಿಗೆ ನೆಲದ ಮೇಲೆ ಮಲಗಿಸಿ ಹೊಲಿಗೆ ಹಾಕಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾವುದೇ ನೋವು ನಿವಾರಕ ಅನಸ್ತೇಶಿಯ ಸೌಲಭ್ಯವಿಲ್ಲ. ಅಲ್-ಶಿಫಾ ಆಸ್ಪತ್ರೆಯನ್ನು ಮೊದಲಿನಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಏಕೆಂದರೆ, ಇದು ಗಾಝಾ ಅತಿದೊಡ್ಡ ಆಸ್ಪತ್ರೆ ಎಂದು ಡಬ್ಲ್ಯುಹೆಚ್‌ಒ ತಿಳಿಸಿದೆ.

ಅಲ್‌ ಶಿಫಾ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಡಬ್ಲ್ಯುಹೆಚ್‌ಒನ ಆದ್ಯತೆ. ಗಾಜಾ ಪಟ್ಟಿಯ ಸಂಪೂರ್ಣ ಉತ್ತರದಲ್ಲಿ, ಅಲ್-ಅಹ್ಲಿ ಅರಬ್ ಆಸ್ಪತ್ರೆ ಮಾತ್ರ ಭಾಗಶಃ ಕಾರ್ಯನಿರ್ವಹಿಸುತ್ತಿದೆ. ಅಲ್-ಶಿಫಾ, ಅಲ್ ಅವ್ದಾ ಮತ್ತು ಅಲ್ ಸಹಬಾ ವೈದ್ಯಕೀಯ ಸಂಕೀರ್ಣಗಳು ಕನಿಷ್ಠ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಎಫ್‌ಪಿ ವರದಿ ಮಾಡಿದೆ.

ಅಲ್-ಶಿಫಾದಲ್ಲಿ, ನಿಯಮಿತ ವೈದ್ಯಕೀಯ ಸರಬರಾಜು ಒದಗಿಸಿದರೆ 20 ಆಪರೇಷನ್ ಥಿಯೇಟರ್‌ಗಳನ್ನು ಸಕ್ರಿಯಗೊಳಿಸಬಹುದು. ಹಾಗೆಯೇ ಶಸ್ತ್ರಚಿಕಿತ್ಸಾ ನಂತರದ ಆರೈಕೆ ಸೇವೆಗಳು, ಇಂಧನ, ಆಮ್ಲಜನಕ, ಔಷಧಿಗಳು, ಆಹಾರ ಮತ್ತು ನೀರಿನ ನಿಯಮಿತ ಪೂರೈಕೆಗಳನ್ನು ಒದಗಿಸಬೇಕಿದೆ.

ಈ ನಡುವೆ, ಪಶ್ಚಿಮ ದಂಡೆಯ ತುಲ್ಕರ್ಮ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಪ್ಯಾಲೆಸ್ತೀನಿಯರು ಭಾನುವಾರ ಕೊಲ್ಲಲ್ಪಟ್ಟರು ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಯುದ್ಧ ಇನ್ನಿಬ್ಬರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದು, ಸೈನಿಕರ ಸಾವಿನ ಸಂಖ್ಯೆ 121 ಕ್ಕೆ ಏರಿದೆ. ‘ಸಂಪೂರ್ಣ ಗೆಲುವು’ ಸಿಗುವವರೆಗೆ ಇಸ್ರೇಲ್ ಯುದ್ಧ ನಡೆಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ತೀವ್ರಗೊಳ್ಳುತ್ತಿರುವ ದಾಳಿಗಳ ಮಧ್ಯೆ, ಫ್ರಾನ್ಸ್ ತುರ್ತು ಕದನ ವಿರಾಮಕ್ಕೆ ಕರೆ ನೀಡಿದೆ. ಫ್ರಾನ್ಸ್‌ನ ವಿದೇಶಾಂಗ ಮಂತ್ರಿ ಕ್ಯಾಥರೀನ್ ಕೊಲೊನ್ನಾ ಇಸ್ರೇಲ್‌ಗೆ ಆಗಮಿಸಿದ್ದು, ಕದನ ವಿರಾಮ ಆಗ್ರಹಿಸಿದ್ದಾರೆ. ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...