Homeಅಂತರಾಷ್ಟ್ರೀಯಗಾಜಾ | ಹಮಾಸ್ ಸರ್ಕಾರದ ಪ್ರಮುಖ ಮೂವರ ಹತ್ಯೆ; ಇಸ್ರೇಲ್ ಪ್ರತಿಪಾದನೆ

ಗಾಜಾ | ಹಮಾಸ್ ಸರ್ಕಾರದ ಪ್ರಮುಖ ಮೂವರ ಹತ್ಯೆ; ಇಸ್ರೇಲ್ ಪ್ರತಿಪಾದನೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಗಾಜಾ ಸರ್ಕಾರದ ಮುಖ್ಯಸ್ಥ ರೌಹಿ ಮುಶ್ತಾಹಾ ಸೇರಿದಂತೆ ಹಮಾಸ್‌ನ ಮೂವರು ಹಿರಿಯ ನಾಯಕರನ್ನು ಕೊಂದಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಗುರುವಾರ ಹೇಳಿಕೊಂಡಿದೆ. ಗಾಜಾದಲ್ಲಿ ಬಂಡುಕೋರ ಹಮಾಸ್ ಸಂಘಟನೆಯ ಸರ್ಕಾರ ಆಡಳಿತ ನಡೆಸುತ್ತಿದ್ದು, ಇಸ್ರೇಲ್‌ಗೆ ತೀವ್ರ ಪ್ರತಿರೋಧ ಒಡ್ಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿರುವ ಇಸ್ರೇಲ್‌ ಸೇನೆ, ಉತ್ತರ ಗಾಜಾದಲ್ಲಿ ಭೂಗತ ಕಾಂಪೌಂಡ್‌ನ ಮೇಲೆ ನಡೆದ ದಾಳಿಯಲ್ಲಿ ರಾವಿ ಮುಶ್ತಾಹಾ ಮತ್ತು ಇತರ ಇಬ್ಬರು ಹಮಾಸ್ ಕಮಾಂಡರ್‌ಗಳಾದ ಸಮೇಹ್ ಸಿರಾಜ್ ಮತ್ತು ಸಮೇಹ್ ಔದೆಹ್ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅದಾಗ್ಯೂ, ಹಮಾಸ್‌ನಿಂದ ತಕ್ಷಣವೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮೂವರು ಕಮಾಂಡರ್‌ಗಳು ಉತ್ತರ ಗಾಜಾದಲ್ಲಿ ಭಾರೀ ಭದ್ರತೆ ಹೊಂದಿರುವ ಭೂಗತ ಕಾಂಪೌಂಡ್‌ನಲ್ಲಿ ಆಶ್ರಯ ಪಡೆದಿದ್ದರು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಈ ಕಾಂಪೌಂಡ್‌ ಅವರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತಿತ್ತು ಎಂದು ಅದು ಹೇಳಿದೆ. ಗಾಜಾ

ಇದನ್ನೂಓದಿ: ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರಿಸುಮಾರು 3 ತಿಂಗಳ ಹಿಂದೆ, ಇಸ್ರೇಲ್ ಸೇನೆ ಮತ್ತು ಇಸ್ರೇಲ್ ರಕ್ಷಣಾ ಪ್ರಾಧಿಕಾರ ನಡೆಸಿದ ಜಂಟಿ ದಾಳಿಯಲ್ಲಿ ಗಾಜಾದಲ್ಲಿ ಹಮಾಸ್ ಸರ್ಕಾರದ ಮುಖ್ಯಸ್ಥ ರೌಹಿ ಮುಶ್ತಾಹಾ, ಹಮಾಸ್ ರಾಜಕೀಯ ಬ್ಯೂರೋದಲ್ಲಿ ಭದ್ರತಾ ಖಾತೆ ಮತ್ತು ಹಮಾಸ್‌ನ ಲೇಬರ್ ಕಮಿಟಿ ಖಾತೆಯನ್ನು ಹೊಂದಿದ್ದ ಸಮೆಹ್ ಅಲ್-ಸಿರಾಜ್, ಹಮಾಸ್‌ನ ಜನರಲ್ ಸೆಕ್ಯುರಿಟಿ ಮೆಕ್ಯಾನಿಸಂನ ಕಮಾಂಡರ್ ಸಮಿ ಔದೆಹ್ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ. ಅವರು ಉತ್ತರ ಗಾಜಾದಲ್ಲಿ ಭದ್ರವಾದ ಮತ್ತು ಸುಸಜ್ಜಿತ ಭೂಗತ ಕಾಂಪೌಂಡ್‌ನಲ್ಲಿ ಅಡಗಿಕೊಂಡಿದ್ದರು ಎಂದು ಅದು ಹೇಳಿದೆ.

“ಈ ಕಾಂಪೌಂಡ್‌ ಹಮಾಸ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಆಗಿ ಕಾರ್ಯನಿರ್ವಹಿಸುತ್ತಿತ್ತು. ಜೊತೆಗೆ ಹಮಾಸ್‌ನ ಹಿರಿಯ ಹೋರಾಟಗಾರರಿಗೆ ದೀರ್ಘಕಾಲದವರೆಗೆ ಅದರೊಳಗೆ ಇರಲು ಅನುವು ಮಾಡಿಕೊಟ್ಟಿತ್ತು. ಇಸ್ರೇಲ್ ಸೇನೆ ಅಕ್ಟೋಬರ್ 7 ರ ಹತ್ಯಾಕಾಂಡಕ್ಕೆ ಕಾರಣವಾದ ಎಲ್ಲರನ್ನೂ ಹಿಂಬಾಲಿಸುತ್ತದೆ ಮತ್ತು ಇಸ್ರೇಲ್‌ಗೆ ಬೆದರಿಕೆ ಹಾಕುವ ಎಲ್ಲರ ವಿರುದ್ಧವೂ ಕಾರ್ಯನಿರ್ವಹಿಸುತ್ತದೆ” ಎಂದು ಇಸ್ರೇಲ್ ಸೇನೆ ಹೇಳಿದೆ.

ಪ್ಯಾಲೆಸ್ತೀನಿನ ಪ್ರತಿರೋಧ ಗುಂಪಾದ ಹಮಾಸ್‌ ಸಂಘಟನೆಯು ಇಸ್ರೇಲ್ ದಬ್ಬಾಳಿಕೆ ವಿರೋಧಿಸಿ 2023ರ ಅಕ್ಟೋಬರ್‌ 7ರಂದು ಇಸ್ರೇಲ್ ವಿರುದ್ಧ ರಾಕೇಟ್ ದಾಳಿ ನಡೆಸಿತ್ತು. ಈ ವೇಳೆ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ದಾಳಿಯ ನಂತರ ಇಸ್ರೇಲ್‌ ಸೇನೆಯು ಹಮಾಸ್‌ ಹೆಸರಿನಲ್ಲಿ ಗಾಜಾದ ಸುಮಾರು 50 ಸಾವಿರಕ್ಕೂ ಹೆಚ್ಚಿನ ಜರನ್ನು ಹತ್ಯೆ ಮಾಡಿದೆ. ಇದರಲ್ಲಿ ಹೆಚ್ಚಿನವರು ಮಹಿಳೆ ಮತ್ತು ಮಕ್ಕಳು ಸೇರಿದ್ದಾರೆ.

ಕಳೆದ ವಾರ ಲೆಬನಾನ್‌ನ ಬೈರುತ್‌ ಮೇಲೆ ದಾಳಿ ಮಾಡಿದ್ದ ಇಸ್ರೇಲ್‌ ಸೇನೆಯು ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದಿತ್ತು.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...