Homeಅಂತರಾಷ್ಟ್ರೀಯಗಾಜಾ | ಹಮಾಸ್ ಸರ್ಕಾರದ ಪ್ರಮುಖ ಮೂವರ ಹತ್ಯೆ; ಇಸ್ರೇಲ್ ಪ್ರತಿಪಾದನೆ

ಗಾಜಾ | ಹಮಾಸ್ ಸರ್ಕಾರದ ಪ್ರಮುಖ ಮೂವರ ಹತ್ಯೆ; ಇಸ್ರೇಲ್ ಪ್ರತಿಪಾದನೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಗಾಜಾ ಸರ್ಕಾರದ ಮುಖ್ಯಸ್ಥ ರೌಹಿ ಮುಶ್ತಾಹಾ ಸೇರಿದಂತೆ ಹಮಾಸ್‌ನ ಮೂವರು ಹಿರಿಯ ನಾಯಕರನ್ನು ಕೊಂದಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಗುರುವಾರ ಹೇಳಿಕೊಂಡಿದೆ. ಗಾಜಾದಲ್ಲಿ ಬಂಡುಕೋರ ಹಮಾಸ್ ಸಂಘಟನೆಯ ಸರ್ಕಾರ ಆಡಳಿತ ನಡೆಸುತ್ತಿದ್ದು, ಇಸ್ರೇಲ್‌ಗೆ ತೀವ್ರ ಪ್ರತಿರೋಧ ಒಡ್ಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿರುವ ಇಸ್ರೇಲ್‌ ಸೇನೆ, ಉತ್ತರ ಗಾಜಾದಲ್ಲಿ ಭೂಗತ ಕಾಂಪೌಂಡ್‌ನ ಮೇಲೆ ನಡೆದ ದಾಳಿಯಲ್ಲಿ ರಾವಿ ಮುಶ್ತಾಹಾ ಮತ್ತು ಇತರ ಇಬ್ಬರು ಹಮಾಸ್ ಕಮಾಂಡರ್‌ಗಳಾದ ಸಮೇಹ್ ಸಿರಾಜ್ ಮತ್ತು ಸಮೇಹ್ ಔದೆಹ್ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅದಾಗ್ಯೂ, ಹಮಾಸ್‌ನಿಂದ ತಕ್ಷಣವೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮೂವರು ಕಮಾಂಡರ್‌ಗಳು ಉತ್ತರ ಗಾಜಾದಲ್ಲಿ ಭಾರೀ ಭದ್ರತೆ ಹೊಂದಿರುವ ಭೂಗತ ಕಾಂಪೌಂಡ್‌ನಲ್ಲಿ ಆಶ್ರಯ ಪಡೆದಿದ್ದರು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಈ ಕಾಂಪೌಂಡ್‌ ಅವರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತಿತ್ತು ಎಂದು ಅದು ಹೇಳಿದೆ. ಗಾಜಾ

ಇದನ್ನೂಓದಿ: ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರಿಸುಮಾರು 3 ತಿಂಗಳ ಹಿಂದೆ, ಇಸ್ರೇಲ್ ಸೇನೆ ಮತ್ತು ಇಸ್ರೇಲ್ ರಕ್ಷಣಾ ಪ್ರಾಧಿಕಾರ ನಡೆಸಿದ ಜಂಟಿ ದಾಳಿಯಲ್ಲಿ ಗಾಜಾದಲ್ಲಿ ಹಮಾಸ್ ಸರ್ಕಾರದ ಮುಖ್ಯಸ್ಥ ರೌಹಿ ಮುಶ್ತಾಹಾ, ಹಮಾಸ್ ರಾಜಕೀಯ ಬ್ಯೂರೋದಲ್ಲಿ ಭದ್ರತಾ ಖಾತೆ ಮತ್ತು ಹಮಾಸ್‌ನ ಲೇಬರ್ ಕಮಿಟಿ ಖಾತೆಯನ್ನು ಹೊಂದಿದ್ದ ಸಮೆಹ್ ಅಲ್-ಸಿರಾಜ್, ಹಮಾಸ್‌ನ ಜನರಲ್ ಸೆಕ್ಯುರಿಟಿ ಮೆಕ್ಯಾನಿಸಂನ ಕಮಾಂಡರ್ ಸಮಿ ಔದೆಹ್ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ. ಅವರು ಉತ್ತರ ಗಾಜಾದಲ್ಲಿ ಭದ್ರವಾದ ಮತ್ತು ಸುಸಜ್ಜಿತ ಭೂಗತ ಕಾಂಪೌಂಡ್‌ನಲ್ಲಿ ಅಡಗಿಕೊಂಡಿದ್ದರು ಎಂದು ಅದು ಹೇಳಿದೆ.

“ಈ ಕಾಂಪೌಂಡ್‌ ಹಮಾಸ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಆಗಿ ಕಾರ್ಯನಿರ್ವಹಿಸುತ್ತಿತ್ತು. ಜೊತೆಗೆ ಹಮಾಸ್‌ನ ಹಿರಿಯ ಹೋರಾಟಗಾರರಿಗೆ ದೀರ್ಘಕಾಲದವರೆಗೆ ಅದರೊಳಗೆ ಇರಲು ಅನುವು ಮಾಡಿಕೊಟ್ಟಿತ್ತು. ಇಸ್ರೇಲ್ ಸೇನೆ ಅಕ್ಟೋಬರ್ 7 ರ ಹತ್ಯಾಕಾಂಡಕ್ಕೆ ಕಾರಣವಾದ ಎಲ್ಲರನ್ನೂ ಹಿಂಬಾಲಿಸುತ್ತದೆ ಮತ್ತು ಇಸ್ರೇಲ್‌ಗೆ ಬೆದರಿಕೆ ಹಾಕುವ ಎಲ್ಲರ ವಿರುದ್ಧವೂ ಕಾರ್ಯನಿರ್ವಹಿಸುತ್ತದೆ” ಎಂದು ಇಸ್ರೇಲ್ ಸೇನೆ ಹೇಳಿದೆ.

ಪ್ಯಾಲೆಸ್ತೀನಿನ ಪ್ರತಿರೋಧ ಗುಂಪಾದ ಹಮಾಸ್‌ ಸಂಘಟನೆಯು ಇಸ್ರೇಲ್ ದಬ್ಬಾಳಿಕೆ ವಿರೋಧಿಸಿ 2023ರ ಅಕ್ಟೋಬರ್‌ 7ರಂದು ಇಸ್ರೇಲ್ ವಿರುದ್ಧ ರಾಕೇಟ್ ದಾಳಿ ನಡೆಸಿತ್ತು. ಈ ವೇಳೆ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ದಾಳಿಯ ನಂತರ ಇಸ್ರೇಲ್‌ ಸೇನೆಯು ಹಮಾಸ್‌ ಹೆಸರಿನಲ್ಲಿ ಗಾಜಾದ ಸುಮಾರು 50 ಸಾವಿರಕ್ಕೂ ಹೆಚ್ಚಿನ ಜರನ್ನು ಹತ್ಯೆ ಮಾಡಿದೆ. ಇದರಲ್ಲಿ ಹೆಚ್ಚಿನವರು ಮಹಿಳೆ ಮತ್ತು ಮಕ್ಕಳು ಸೇರಿದ್ದಾರೆ.

ಕಳೆದ ವಾರ ಲೆಬನಾನ್‌ನ ಬೈರುತ್‌ ಮೇಲೆ ದಾಳಿ ಮಾಡಿದ್ದ ಇಸ್ರೇಲ್‌ ಸೇನೆಯು ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದಿತ್ತು.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...