Homeಅಂತರಾಷ್ಟ್ರೀಯಗಾಜಾ | ಹಮಾಸ್ ಸರ್ಕಾರದ ಪ್ರಮುಖ ಮೂವರ ಹತ್ಯೆ; ಇಸ್ರೇಲ್ ಪ್ರತಿಪಾದನೆ

ಗಾಜಾ | ಹಮಾಸ್ ಸರ್ಕಾರದ ಪ್ರಮುಖ ಮೂವರ ಹತ್ಯೆ; ಇಸ್ರೇಲ್ ಪ್ರತಿಪಾದನೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಗಾಜಾ ಸರ್ಕಾರದ ಮುಖ್ಯಸ್ಥ ರೌಹಿ ಮುಶ್ತಾಹಾ ಸೇರಿದಂತೆ ಹಮಾಸ್‌ನ ಮೂವರು ಹಿರಿಯ ನಾಯಕರನ್ನು ಕೊಂದಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಗುರುವಾರ ಹೇಳಿಕೊಂಡಿದೆ. ಗಾಜಾದಲ್ಲಿ ಬಂಡುಕೋರ ಹಮಾಸ್ ಸಂಘಟನೆಯ ಸರ್ಕಾರ ಆಡಳಿತ ನಡೆಸುತ್ತಿದ್ದು, ಇಸ್ರೇಲ್‌ಗೆ ತೀವ್ರ ಪ್ರತಿರೋಧ ಒಡ್ಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿರುವ ಇಸ್ರೇಲ್‌ ಸೇನೆ, ಉತ್ತರ ಗಾಜಾದಲ್ಲಿ ಭೂಗತ ಕಾಂಪೌಂಡ್‌ನ ಮೇಲೆ ನಡೆದ ದಾಳಿಯಲ್ಲಿ ರಾವಿ ಮುಶ್ತಾಹಾ ಮತ್ತು ಇತರ ಇಬ್ಬರು ಹಮಾಸ್ ಕಮಾಂಡರ್‌ಗಳಾದ ಸಮೇಹ್ ಸಿರಾಜ್ ಮತ್ತು ಸಮೇಹ್ ಔದೆಹ್ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅದಾಗ್ಯೂ, ಹಮಾಸ್‌ನಿಂದ ತಕ್ಷಣವೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮೂವರು ಕಮಾಂಡರ್‌ಗಳು ಉತ್ತರ ಗಾಜಾದಲ್ಲಿ ಭಾರೀ ಭದ್ರತೆ ಹೊಂದಿರುವ ಭೂಗತ ಕಾಂಪೌಂಡ್‌ನಲ್ಲಿ ಆಶ್ರಯ ಪಡೆದಿದ್ದರು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಈ ಕಾಂಪೌಂಡ್‌ ಅವರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತಿತ್ತು ಎಂದು ಅದು ಹೇಳಿದೆ. ಗಾಜಾ

ಇದನ್ನೂಓದಿ: ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರಿಸುಮಾರು 3 ತಿಂಗಳ ಹಿಂದೆ, ಇಸ್ರೇಲ್ ಸೇನೆ ಮತ್ತು ಇಸ್ರೇಲ್ ರಕ್ಷಣಾ ಪ್ರಾಧಿಕಾರ ನಡೆಸಿದ ಜಂಟಿ ದಾಳಿಯಲ್ಲಿ ಗಾಜಾದಲ್ಲಿ ಹಮಾಸ್ ಸರ್ಕಾರದ ಮುಖ್ಯಸ್ಥ ರೌಹಿ ಮುಶ್ತಾಹಾ, ಹಮಾಸ್ ರಾಜಕೀಯ ಬ್ಯೂರೋದಲ್ಲಿ ಭದ್ರತಾ ಖಾತೆ ಮತ್ತು ಹಮಾಸ್‌ನ ಲೇಬರ್ ಕಮಿಟಿ ಖಾತೆಯನ್ನು ಹೊಂದಿದ್ದ ಸಮೆಹ್ ಅಲ್-ಸಿರಾಜ್, ಹಮಾಸ್‌ನ ಜನರಲ್ ಸೆಕ್ಯುರಿಟಿ ಮೆಕ್ಯಾನಿಸಂನ ಕಮಾಂಡರ್ ಸಮಿ ಔದೆಹ್ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ. ಅವರು ಉತ್ತರ ಗಾಜಾದಲ್ಲಿ ಭದ್ರವಾದ ಮತ್ತು ಸುಸಜ್ಜಿತ ಭೂಗತ ಕಾಂಪೌಂಡ್‌ನಲ್ಲಿ ಅಡಗಿಕೊಂಡಿದ್ದರು ಎಂದು ಅದು ಹೇಳಿದೆ.

“ಈ ಕಾಂಪೌಂಡ್‌ ಹಮಾಸ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಆಗಿ ಕಾರ್ಯನಿರ್ವಹಿಸುತ್ತಿತ್ತು. ಜೊತೆಗೆ ಹಮಾಸ್‌ನ ಹಿರಿಯ ಹೋರಾಟಗಾರರಿಗೆ ದೀರ್ಘಕಾಲದವರೆಗೆ ಅದರೊಳಗೆ ಇರಲು ಅನುವು ಮಾಡಿಕೊಟ್ಟಿತ್ತು. ಇಸ್ರೇಲ್ ಸೇನೆ ಅಕ್ಟೋಬರ್ 7 ರ ಹತ್ಯಾಕಾಂಡಕ್ಕೆ ಕಾರಣವಾದ ಎಲ್ಲರನ್ನೂ ಹಿಂಬಾಲಿಸುತ್ತದೆ ಮತ್ತು ಇಸ್ರೇಲ್‌ಗೆ ಬೆದರಿಕೆ ಹಾಕುವ ಎಲ್ಲರ ವಿರುದ್ಧವೂ ಕಾರ್ಯನಿರ್ವಹಿಸುತ್ತದೆ” ಎಂದು ಇಸ್ರೇಲ್ ಸೇನೆ ಹೇಳಿದೆ.

ಪ್ಯಾಲೆಸ್ತೀನಿನ ಪ್ರತಿರೋಧ ಗುಂಪಾದ ಹಮಾಸ್‌ ಸಂಘಟನೆಯು ಇಸ್ರೇಲ್ ದಬ್ಬಾಳಿಕೆ ವಿರೋಧಿಸಿ 2023ರ ಅಕ್ಟೋಬರ್‌ 7ರಂದು ಇಸ್ರೇಲ್ ವಿರುದ್ಧ ರಾಕೇಟ್ ದಾಳಿ ನಡೆಸಿತ್ತು. ಈ ವೇಳೆ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ದಾಳಿಯ ನಂತರ ಇಸ್ರೇಲ್‌ ಸೇನೆಯು ಹಮಾಸ್‌ ಹೆಸರಿನಲ್ಲಿ ಗಾಜಾದ ಸುಮಾರು 50 ಸಾವಿರಕ್ಕೂ ಹೆಚ್ಚಿನ ಜರನ್ನು ಹತ್ಯೆ ಮಾಡಿದೆ. ಇದರಲ್ಲಿ ಹೆಚ್ಚಿನವರು ಮಹಿಳೆ ಮತ್ತು ಮಕ್ಕಳು ಸೇರಿದ್ದಾರೆ.

ಕಳೆದ ವಾರ ಲೆಬನಾನ್‌ನ ಬೈರುತ್‌ ಮೇಲೆ ದಾಳಿ ಮಾಡಿದ್ದ ಇಸ್ರೇಲ್‌ ಸೇನೆಯು ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದಿತ್ತು.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....