Homeಅಂತರಾಷ್ಟ್ರೀಯಗಾಜಾ | ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ; ಕನಿಷ್ಠ 21 ಜನರು ಸಾವು

ಗಾಜಾ | ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ; ಕನಿಷ್ಠ 21 ಜನರು ಸಾವು

- Advertisement -
- Advertisement -

ಮಧ್ಯ ಗಾಜಾ ಮೇಲೆ ಭಾನುವಾರ ಮುಂಜಾನೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ದೇರ್ ಅಲ್-ಬಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ ನಿರಾಶ್ರಿತ ಜನರಿಗೆ ಆಶ್ರಯ ನೀಡುತ್ತಿರುವ ಮಸೀದಿಗೆ ದಾಳಿ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮಧ್ಯ ಗಾಜಾದ ಡೀರ್ ಅಲ್-ಬಲಾಹ್‌ನಲ್ಲಿರುವ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಗೇಟ್‌ನ ಮುಂದೆ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುವ ಮಸೀದಿಯ ಮೇಲೆ ಆಕ್ರಮಣಕಾರರಾದ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ. ಪರಿಣಾಮವಾಗಿ ಸಾವಿನ ಸಂಖ್ಯೆ 21 ಕ್ಕೆ ಏರಿದ್ದು, ದೊಡ್ಡ ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದಾರೆ” ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಮಸೀದಿಯ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಬಂಡುಕೋರರ ಮೇಲೆ ನಿಖರವಾದ ದಾಳಿ ನಡೆಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ. ಇತ್ತೀಚಿನ ದಾಳಿ ಸೇರಿದಂತೆ ಇಸ್ರೇಲ್ ದಾಳಿಗೆ ಮೃತಪಟ್ಟ ಜನರ ಸಂಖ್ಯೆ 42,000ದ ಸಮೀಪಕ್ಕೆ ತಲುಪುತ್ತಿದೆ ಎಂದು ಪ್ಯಾಲೇಸ್ತೀನಿ ಆರೋಗ್ಯ ಸಚಿವಾಲಯ ಹೇಳಿದೆ.

ಇದನ್ನೂಓದಿ: ಪ್ರವಾದಿ ಮುಹಮ್ಮದರ ಕುರಿತು ದ್ವೇಷ ಭಾಷಣ : ಯತಿ ನರಸಿಂಗಾನಂದ ಬಂಧನ

ಪ್ಯಾಲೇಸ್ತೀನಿ ನಿರಾಶ್ರಿತರು ಸೇರಿದಂತೆ ಲೆಬನಾನ್‌ನಲ್ಲಿ ಸಾವಿರಾರು ಜನರು ಯುದ್ಧ ಪೀಡಿತ ಪ್ರದೇಶದಿಂದ ಪಲಾಯನ ಮಾಡುವುದನ್ನು ಮುಂದುವರೆಸಿದ್ದಾರೆ. 2023ರ ಅಕ್ಟೋಬರ್ ವೇಳೆಗೆ ಪ್ರಾರಂಭವಾದ ಈ ಯುದ್ಧಕ್ಕೆ ವರ್ಷವಾಗುತ್ತಿದ್ದು, ಪ್ಯಾಲೆಸ್ತೀನ್ ಪರ ಪ್ರಪಂಚದಾದ್ಯಂತ ರ್ಯಾಲಿ ನಡಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಶನಿವಾರದಂದು, ಉತ್ತರ ಬೆಡ್ಡಾವಿ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಹಮಾಸ್‌ನ ಮಿಲಿಟರಿ ವಿಭಾಗದ ಅಧಿಕಾರಿ ಮತ್ತು ಅವರ ಹೆಂಡತಿ ಹಾಗೂ ಇಬ್ಬರು ಚಿಕ್ಕ ಹೆಣ್ಣುಮಕ್ಕಳೊಂದಿಗೆ ಕೊಂದಿದೆ ಎಂದು ಪ್ಯಾಲೇಸ್ತೀನಿ ಬಂಡುಕೋರ ಗುಂಪು ಹೇಳಿದೆ. ಗಾಜಾ

ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ಲೆಬನಾನ್‌ನಲ್ಲಿ ಹಲವಾರು ಹಮಾಸ್ ಅಧಿಕಾರಿಗಳನ್ನು ಕೊಂದಿದೆ. ಜೊತೆಗೆ ಲೆಬನಾನ್ ಮೂಲದ ಹೆಜ್ಬೊಲ್ಲಾ ಬಂಡಕೋರ ಗುಂಪಿನ ವಿರುದ್ಧ ಕೂಡಾ ದಾಳಿ ನಡೆಸುತ್ತಿದೆ. ಇಸ್ರೇಲ್ ದಾಳಿಯ ನಂತರ ನಾಗರಿಕರು, ವೈದ್ಯರು ಮತ್ತು ಹೆಜ್ಬೊಲ್ಲಾ ಹೋರಾಟಗಾರರು ಸೇರಿದಂತೆ ಕನಿಷ್ಠ 1,400 ಲೆಬನಾನಿಗರು ಕೊಲ್ಲಲ್ಪಟ್ಟರು ಮತ್ತು ಕಳೆದ ಎರಡು ವಾರಗಳಲ್ಲಿ 1.2 ಮಿಲಿಯನ್ ಜನರು ತಮ್ಮ ಮನೆಗಳಿಂದ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ವಾರ, ಇಸ್ರೇಲ್ ಸೇನೆಯು ದಕ್ಷಿಣ ಲೆಬನಾನ್‌ ಮೇಲೆ ಸೀಮಿತ ನೆಲದ ಕಾರ್ಯಾಚರಣೆ ನಡೆಸುವುದಾಗಿ ಹೇಳಿಕೊಂಡಿತ್ತು. ಈ ವೇಳೆ ನಡೆಸಿದ್ದ ಸರಣಿ ದಾಳಿಗಳಲ್ಲಿ ಹಿಜ್ಬುಲ್ಲಾ ಸಂಘಟನೆಯ ದೀರ್ಘಕಾಲದ ನಾಯಕ ಹಸನ್ ನಸ್ರಲ್ಲಾ ಸೇರಿದಂತೆ ಸಂಘಟನೆಯ ಇತರರನ್ನು ಕೊಂದು ಹಾಕಿತ್ತು.

ವಿಡಿಯೊ ನೋಡಿ: ರೈತ-ಕಾರ್ಮಿಕ ಹಿತ ರಕ್ಷಣಾ ಸಮಿತಿ ಮಲೆನಾಡು: ಪತ್ರಿಕಾಗೋಷ್ಠಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...