Homeಮುಖಪುಟಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಎರಡು ವಾರಗಳ ಆಕ್ರಮಣದ ಬಳಿಕ ಆಸ್ಪತ್ರೆ ತೊರೆದ ಇಸ್ರೇಲ್ ಸೇನೆ

- Advertisement -
- Advertisement -

ಗಾಝಾದ ಪ್ರಮುಖ ಆಸ್ಪತ್ರೆಯಾಗಿರುವ ಅಲ್- ಶಿಫಾದಲ್ಲಿ ಸತತ ಎರಡು ವಾರಗಳ ಕಾಲ ಆಕ್ರಮಣ ನಡೆಸಿದ ಇಸ್ರೇಲ್ ಸೇನೆ, ಆಸ್ಪತ್ರೆಯನ್ನು ಸಂಪೂರ್ಣ ಧ್ವಂಸಗೊಳಿಸಿ ಬಿಟ್ಟು ತೆರಳಿದೆ.

ಬಿಬಿಸಿ ವರದಿಯ ಪ್ರಕಾರ, ಇಸ್ರೇಲ್ ಸೇನೆ ಅಲ್-ಶಿಫಾ ಆಸ್ಪತ್ರೆ ತೊರೆದ ಬಳಿಕ ಅಲ್ಲಿ ನೂರಾರು ಮೃತದೇಹಗಳು ದೊರೆತಿವೆ ಎಂದು ಹಮಾಸ್‌ ಆಡಳಿತದ ಆರೋಗ್ಯ ಸಚಿವಾಲಯ ತಿಳಿಸಿದೆ.

“ನಾವು 200 ಜನರನ್ನು ಹತ್ಯೆಗೈದಿದ್ದೇವೆ ಮತ್ತು 500 ಮಂದಿಯನ್ನು ಬಂಧಿಸಿದ್ದೇವೆ” ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ. “ಹಮಾಸ್ ಬಂಡುಕೋರರು ಅಲ್‌-ಶಿಫಾದಲ್ಲಿ ಅಡಗಿ ಕುಳಿತಿದ್ದ ಕಾರಣ ದಾಳಿ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಎರಡು ವಾರಗಳ ಕಾಲ ನಡೆಸಿದ ಆಕ್ರಮಣದಲ್ಲಿ ಸಾವಿರಾರು ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದ ಅತಿ ದೊಡ್ಡ ಅಲ್-ಶಿಫಾ ಆಸ್ಪತ್ರೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪಾಲು ಬಿದ್ದ ಕಟ್ಟಡದಂತಾಗಿದೆ.

“ಹಮಾಸ್ ಮತ್ತು ಇತರ ಇಸ್ಲಾಮಿಕ್ ಜಿಹಾದಿಸ್ಟ್‌ಗಳು ಅಸ್ಪತ್ರೆಯೊಳಗೆ ಅಡಗಿ ಕುಳಿತಿದ್ದರು. ಅಲ್ಲಿಂದಲೇ ದಾಳಿಗೆ ಸಂಚು ರೂಪಿಸುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದರು. ಹಾಗಾಗಿ, ವಾರ್ಡ್‌ಗಳ ಮೇಲೆ ದಾಳಿ ನಡೆಸಿದ್ದೇವೆ” ಎಂದು ಇಸ್ರೇಲ್ ತನ್ನ ಆಕ್ರಮಣವನ್ನು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಅಲ್ ಶಿಫಾ ತೊರೆದ ಬಳಿಕ ಪ್ಯಾಲೆಸ್ತೀನ್ ನಾಗರಿಕರು ಆಸ್ಪತ್ರೆಯ ಸುತ್ತ ಜಮಾಯಿಸಿರುವುದು. ಮೃತದೇಹಗಳನ್ನು ಸಾಗಿಸುತ್ತಿರುವ ವಿಡಿಯೋ, ಪೋಟೋಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.

“ಆಸ್ಪತ್ರೆಯ ಒಳಗೆ ಮತ್ತು ಹೊರಗೆ ನೂರಾರು ಕೊಳೆತ ಮೃತದೇಹಗಳು ಪತ್ತೆಯಾಗಿವೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಆಸ್ಪತ್ರೆ ಬಳಿ 20ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾಗಿವೆ. ಕೆಲವನ್ನು ಇಸ್ರೇಲಿ ಸೇನೆ ಜೆಸಿಬಿಯಂತಹ ಯಂತ್ರ ಬಳಸಿ ನಜ್ಜು ಗುಜ್ಜಾಗಿಸಿವೆ” ಎಂದು ವೈದ್ಯರೊಬ್ಬರನ್ನು ಉಲ್ಲೇಖಿಸಿ ಎಎಫ್‌ಫಿ ವರದಿ ಮಾಡಿದೆ.

ಅಲ್-ಶಿಫಾ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಸ್ರೇಲಿ ಪಡೆಗಳು 400 ಪ್ಯಾಲೆಸ್ತೀನಿಯರನ್ನು ಕೊಂದಿವೆ ಇದರಲ್ಲಿ ಒಬ್ಬ ಮಹಿಳಾ ವೈದ್ಯೆ ಮತ್ತು ವೈದ್ಯರಾಗಿರುವ ಅವರ ಮಗ ಸೇರಿದ್ದಾರೆ ಎಂದು ಎಂದು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಸೇನೆ ಗಾಝಾದಲ್ಲಿ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 32,800 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ ಮತ್ತು 75 ಸಾವಿರಕ್ಕೂ ಅಧಿಕರ ಜನರು ಗಾಯಗೊಂಡಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಶೇ.70ರಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಇಸ್ರೇಲ್‌ನಿಂದ ವೈಮಾನಿಕ ದಾಳಿ: ಇರಾನ್‌ನ ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿ 7 ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...