Homeಮುಖಪುಟಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಪಾಳು ಬಿದ್ದ ಅಲ್‌-ಶಿಫಾ: ಇಸ್ರೇಲ್ ಆಕ್ರಮಣಕ್ಕೆ ಧ್ವಂಸಗೊಂಡ ಗಾಝಾದ ಅತಿ ದೊಡ್ಡ ಆಸ್ಪತ್ರೆ

ಎರಡು ವಾರಗಳ ಆಕ್ರಮಣದ ಬಳಿಕ ಆಸ್ಪತ್ರೆ ತೊರೆದ ಇಸ್ರೇಲ್ ಸೇನೆ

- Advertisement -
- Advertisement -

ಗಾಝಾದ ಪ್ರಮುಖ ಆಸ್ಪತ್ರೆಯಾಗಿರುವ ಅಲ್- ಶಿಫಾದಲ್ಲಿ ಸತತ ಎರಡು ವಾರಗಳ ಕಾಲ ಆಕ್ರಮಣ ನಡೆಸಿದ ಇಸ್ರೇಲ್ ಸೇನೆ, ಆಸ್ಪತ್ರೆಯನ್ನು ಸಂಪೂರ್ಣ ಧ್ವಂಸಗೊಳಿಸಿ ಬಿಟ್ಟು ತೆರಳಿದೆ.

ಬಿಬಿಸಿ ವರದಿಯ ಪ್ರಕಾರ, ಇಸ್ರೇಲ್ ಸೇನೆ ಅಲ್-ಶಿಫಾ ಆಸ್ಪತ್ರೆ ತೊರೆದ ಬಳಿಕ ಅಲ್ಲಿ ನೂರಾರು ಮೃತದೇಹಗಳು ದೊರೆತಿವೆ ಎಂದು ಹಮಾಸ್‌ ಆಡಳಿತದ ಆರೋಗ್ಯ ಸಚಿವಾಲಯ ತಿಳಿಸಿದೆ.

“ನಾವು 200 ಜನರನ್ನು ಹತ್ಯೆಗೈದಿದ್ದೇವೆ ಮತ್ತು 500 ಮಂದಿಯನ್ನು ಬಂಧಿಸಿದ್ದೇವೆ” ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ. “ಹಮಾಸ್ ಬಂಡುಕೋರರು ಅಲ್‌-ಶಿಫಾದಲ್ಲಿ ಅಡಗಿ ಕುಳಿತಿದ್ದ ಕಾರಣ ದಾಳಿ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಎರಡು ವಾರಗಳ ಕಾಲ ನಡೆಸಿದ ಆಕ್ರಮಣದಲ್ಲಿ ಸಾವಿರಾರು ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದ ಅತಿ ದೊಡ್ಡ ಅಲ್-ಶಿಫಾ ಆಸ್ಪತ್ರೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪಾಲು ಬಿದ್ದ ಕಟ್ಟಡದಂತಾಗಿದೆ.

“ಹಮಾಸ್ ಮತ್ತು ಇತರ ಇಸ್ಲಾಮಿಕ್ ಜಿಹಾದಿಸ್ಟ್‌ಗಳು ಅಸ್ಪತ್ರೆಯೊಳಗೆ ಅಡಗಿ ಕುಳಿತಿದ್ದರು. ಅಲ್ಲಿಂದಲೇ ದಾಳಿಗೆ ಸಂಚು ರೂಪಿಸುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದರು. ಹಾಗಾಗಿ, ವಾರ್ಡ್‌ಗಳ ಮೇಲೆ ದಾಳಿ ನಡೆಸಿದ್ದೇವೆ” ಎಂದು ಇಸ್ರೇಲ್ ತನ್ನ ಆಕ್ರಮಣವನ್ನು ಸಮರ್ಥಿಸಿಕೊಂಡಿದೆ.

ಇಸ್ರೇಲ್ ಸೇನೆ ಅಲ್ ಶಿಫಾ ತೊರೆದ ಬಳಿಕ ಪ್ಯಾಲೆಸ್ತೀನ್ ನಾಗರಿಕರು ಆಸ್ಪತ್ರೆಯ ಸುತ್ತ ಜಮಾಯಿಸಿರುವುದು. ಮೃತದೇಹಗಳನ್ನು ಸಾಗಿಸುತ್ತಿರುವ ವಿಡಿಯೋ, ಪೋಟೋಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.

“ಆಸ್ಪತ್ರೆಯ ಒಳಗೆ ಮತ್ತು ಹೊರಗೆ ನೂರಾರು ಕೊಳೆತ ಮೃತದೇಹಗಳು ಪತ್ತೆಯಾಗಿವೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಆಸ್ಪತ್ರೆ ಬಳಿ 20ಕ್ಕೂ ಹೆಚ್ಚು ಮೃತದೇಹಗಳು ಪತ್ತೆಯಾಗಿವೆ. ಕೆಲವನ್ನು ಇಸ್ರೇಲಿ ಸೇನೆ ಜೆಸಿಬಿಯಂತಹ ಯಂತ್ರ ಬಳಸಿ ನಜ್ಜು ಗುಜ್ಜಾಗಿಸಿವೆ” ಎಂದು ವೈದ್ಯರೊಬ್ಬರನ್ನು ಉಲ್ಲೇಖಿಸಿ ಎಎಫ್‌ಫಿ ವರದಿ ಮಾಡಿದೆ.

ಅಲ್-ಶಿಫಾ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಸ್ರೇಲಿ ಪಡೆಗಳು 400 ಪ್ಯಾಲೆಸ್ತೀನಿಯರನ್ನು ಕೊಂದಿವೆ ಇದರಲ್ಲಿ ಒಬ್ಬ ಮಹಿಳಾ ವೈದ್ಯೆ ಮತ್ತು ವೈದ್ಯರಾಗಿರುವ ಅವರ ಮಗ ಸೇರಿದ್ದಾರೆ ಎಂದು ಎಂದು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಸೇನೆ ಗಾಝಾದಲ್ಲಿ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 32,800 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ ಮತ್ತು 75 ಸಾವಿರಕ್ಕೂ ಅಧಿಕರ ಜನರು ಗಾಯಗೊಂಡಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಶೇ.70ರಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಇಸ್ರೇಲ್‌ನಿಂದ ವೈಮಾನಿಕ ದಾಳಿ: ಇರಾನ್‌ನ ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿ 7 ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...