Homeಮುಖಪುಟನಿರಂತರ ಇಸ್ರೇಲಿ ದಾಳಿ; 'ಸಂಪೂರ್ಣ ಸ್ಥಗಿತ'ದ ಭೀತಿ ಎದುರಿಸುತ್ತಿರುವ ಗಾಜಾದ ರಕ್ತನಿಧಿಗಳು

ನಿರಂತರ ಇಸ್ರೇಲಿ ದಾಳಿ; ‘ಸಂಪೂರ್ಣ ಸ್ಥಗಿತ’ದ ಭೀತಿ ಎದುರಿಸುತ್ತಿರುವ ಗಾಜಾದ ರಕ್ತನಿಧಿಗಳು

- Advertisement -
- Advertisement -

ಇಸ್ರೇಲಿ ಆಕ್ರಮಣದ ನಿರಂತರ ದಾಳಿಯಲ್ಲಿ ಗಾಯಗೊಳ್ಳುತ್ತಿರುವ ಪ್ಯಾಲೆಸ್ತೀನಿಯನ್ನರನ್ನು ವೈದ್ಯಕೀಯ ಸೌಲಭ್ಯಗಳ ಕೊರತೆ ಗಂಭಿರವಾಗಿ ಕಾಡುತ್ತಿದೆ. ಗಾಜಾ ಪಟ್ಟಿಯಾದ್ಯಂತದ ಆಸ್ಪತ್ರೆ ಮತ್ತು ರಕ್ತನಿಧಿಗಳು ‘ಸಂಪೂರ್ಣ ಸ್ಥಗಿತ’ದ ಅಂಚಿನಲ್ಲಿವೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಇಂದು ಹೇಳಿಕೆ ನೀಡಿದೆ.

“ರಕ್ತ ಸಂಗ್ರಹಣ ಘಟಕಗಳು , ಪ್ರಯೋಗಾಲಯ ಮತ್ತು ಸಂಗ್ರಹಣೆಗೆ ಅಗತ್ಯವಾದ ಪ್ರಯೋಗಾಲಯ ಸರಬರಾಜುಗಳ ತೀವ್ರ ದಾಳಿಯ ಪರಿಣಾಮವಾಗಿ ಆಸ್ಪತ್ರೆಗಳಲ್ಲಿನ ರಕ್ತನಿಧಿಗಳು ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿವೆ” ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಕ್ತದ ತೀವ್ರ ಕೊರತೆಯೂ ಇದೆ ಎಂದು ಸಚಿವಾಲಯ ಹೇಳಿದೆ. ಇದು ಗಾಯಾಳುಗಳಿಗೆ ಜೀವ ಉಳಿಸುವ ಕೆಲಸ ಮಾಡುವ ಆಸ್ಪತ್ರೆಗಳ ಸಾಮರ್ಥ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಎಚ್ಚರಿಸಿದೆ.

“ನಾನು ಖಾನ್ ಯೂನಿಸ್ ನಗರದ ಪಶ್ಚಿಮದಲ್ಲಿರುವ ನಾಸರ್ ಆಸ್ಪತ್ರೆಯ ಬಳಿ ವಾಸಿಸುತ್ತಿದ್ದೇನೆ. ಬಹುತೇಕ ಪ್ರತಿದಿನ, ಆಸ್ಪತ್ರೆಯಿಂದ ಧ್ವನಿವರ್ಧಕಗಳಲ್ಲಿ ರಕ್ತದಾನಕ್ಕಾಗಿ ಹತಾಶ ಕರೆಗಳನ್ನು ನಾನು ಕೇಳುತ್ತೇನೆ. ಇದು ಒಂದು ವರ್ಷಕ್ಕೂ ಹೆಚ್ಚು ಕಾಲ ಹಾಗೆ ಇದೆ” ಎಂದು ಪ್ಯಾಲೆಸ್ತೀನಿಯನ್ ಬರಹಗಾರ ಡೋನ್ಯಾ ಅಬು ಸಿಟ್ಟಾ ಅವರು ಅಲ್ ಜಜೀರಾದಲ್ಲಿ ಬರೆದಿದ್ದಾರೆ.

ಈ ವರ್ಷದ ಜೂನ್ ಆರಂಭದಲ್ಲಿ, ಪ್ರಯೋಗಾಲಯ ಮತ್ತು ರಕ್ತ ಬ್ಯಾಂಕಿನ ನಿರ್ದೇಶಕಿ ಡಾ. ಸೋಫಿಯಾ ಝಾರಾಬ್ ಮಾಧ್ಯಮಗಳಿಗೆ ತಿಳಿಸಿದ್ದು, ದಾನ ಮಾಡಿದ ರಕ್ತದ ಘಟಕಗಳ ತೀವ್ರ ಕೊರತೆಯು ‘ಗಂಭೀರ’ ಮಟ್ಟವನ್ನು ತಲುಪಿದೆ. ರೋಗಿಗಳ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿದೆ, ಅವರಲ್ಲಿ ಹಲವರಿಗೆ ತುರ್ತು ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ. ಇಡೀ ಗಾಜಾಗೆ ಪ್ರತಿದಿನ 400 ಯೂನಿಟ್‌ಗಳು ರಕ್ತ ಬೇಕಾಗುತ್ತವೆ ಎಂದು ಹೇಳಿದರು.

ಕಳೆದ 24 ಗಂಟೆಗಳಲ್ಲಿ ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ದಾಳಿಯಲ್ಲಿ ನೆರವು ಬಯಸುವವರು ಸೇರಿದಂತೆ ಕನಿಷ್ಠ 50 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. 184 ಜನರು ಗಾಯಗೊಂಡಿದ್ದಾರೆ ಎಂದು ಎನ್ಕ್ಲೇವ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸಿದ ನರಮೇಧ ಯುದ್ಧವು ಒಟ್ಟು 66,055 ಜನರನ್ನು ಕೊಂದಿದೆ. 168,346 ಜನರನ್ನು ಗಾಯಗೊಳಿಸಿದೆ ಎಂದು ಸಚಿವಾಲಯ ಟೆಲಿಗ್ರಾಮ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...