Homeಮುಖಪುಟನಿರಂತರ ಇಸ್ರೇಲಿ ದಾಳಿ; 'ಸಂಪೂರ್ಣ ಸ್ಥಗಿತ'ದ ಭೀತಿ ಎದುರಿಸುತ್ತಿರುವ ಗಾಜಾದ ರಕ್ತನಿಧಿಗಳು

ನಿರಂತರ ಇಸ್ರೇಲಿ ದಾಳಿ; ‘ಸಂಪೂರ್ಣ ಸ್ಥಗಿತ’ದ ಭೀತಿ ಎದುರಿಸುತ್ತಿರುವ ಗಾಜಾದ ರಕ್ತನಿಧಿಗಳು

- Advertisement -
- Advertisement -

ಇಸ್ರೇಲಿ ಆಕ್ರಮಣದ ನಿರಂತರ ದಾಳಿಯಲ್ಲಿ ಗಾಯಗೊಳ್ಳುತ್ತಿರುವ ಪ್ಯಾಲೆಸ್ತೀನಿಯನ್ನರನ್ನು ವೈದ್ಯಕೀಯ ಸೌಲಭ್ಯಗಳ ಕೊರತೆ ಗಂಭಿರವಾಗಿ ಕಾಡುತ್ತಿದೆ. ಗಾಜಾ ಪಟ್ಟಿಯಾದ್ಯಂತದ ಆಸ್ಪತ್ರೆ ಮತ್ತು ರಕ್ತನಿಧಿಗಳು ‘ಸಂಪೂರ್ಣ ಸ್ಥಗಿತ’ದ ಅಂಚಿನಲ್ಲಿವೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಇಂದು ಹೇಳಿಕೆ ನೀಡಿದೆ.

“ರಕ್ತ ಸಂಗ್ರಹಣ ಘಟಕಗಳು , ಪ್ರಯೋಗಾಲಯ ಮತ್ತು ಸಂಗ್ರಹಣೆಗೆ ಅಗತ್ಯವಾದ ಪ್ರಯೋಗಾಲಯ ಸರಬರಾಜುಗಳ ತೀವ್ರ ದಾಳಿಯ ಪರಿಣಾಮವಾಗಿ ಆಸ್ಪತ್ರೆಗಳಲ್ಲಿನ ರಕ್ತನಿಧಿಗಳು ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿವೆ” ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಕ್ತದ ತೀವ್ರ ಕೊರತೆಯೂ ಇದೆ ಎಂದು ಸಚಿವಾಲಯ ಹೇಳಿದೆ. ಇದು ಗಾಯಾಳುಗಳಿಗೆ ಜೀವ ಉಳಿಸುವ ಕೆಲಸ ಮಾಡುವ ಆಸ್ಪತ್ರೆಗಳ ಸಾಮರ್ಥ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಎಚ್ಚರಿಸಿದೆ.

“ನಾನು ಖಾನ್ ಯೂನಿಸ್ ನಗರದ ಪಶ್ಚಿಮದಲ್ಲಿರುವ ನಾಸರ್ ಆಸ್ಪತ್ರೆಯ ಬಳಿ ವಾಸಿಸುತ್ತಿದ್ದೇನೆ. ಬಹುತೇಕ ಪ್ರತಿದಿನ, ಆಸ್ಪತ್ರೆಯಿಂದ ಧ್ವನಿವರ್ಧಕಗಳಲ್ಲಿ ರಕ್ತದಾನಕ್ಕಾಗಿ ಹತಾಶ ಕರೆಗಳನ್ನು ನಾನು ಕೇಳುತ್ತೇನೆ. ಇದು ಒಂದು ವರ್ಷಕ್ಕೂ ಹೆಚ್ಚು ಕಾಲ ಹಾಗೆ ಇದೆ” ಎಂದು ಪ್ಯಾಲೆಸ್ತೀನಿಯನ್ ಬರಹಗಾರ ಡೋನ್ಯಾ ಅಬು ಸಿಟ್ಟಾ ಅವರು ಅಲ್ ಜಜೀರಾದಲ್ಲಿ ಬರೆದಿದ್ದಾರೆ.

ಈ ವರ್ಷದ ಜೂನ್ ಆರಂಭದಲ್ಲಿ, ಪ್ರಯೋಗಾಲಯ ಮತ್ತು ರಕ್ತ ಬ್ಯಾಂಕಿನ ನಿರ್ದೇಶಕಿ ಡಾ. ಸೋಫಿಯಾ ಝಾರಾಬ್ ಮಾಧ್ಯಮಗಳಿಗೆ ತಿಳಿಸಿದ್ದು, ದಾನ ಮಾಡಿದ ರಕ್ತದ ಘಟಕಗಳ ತೀವ್ರ ಕೊರತೆಯು ‘ಗಂಭೀರ’ ಮಟ್ಟವನ್ನು ತಲುಪಿದೆ. ರೋಗಿಗಳ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿದೆ, ಅವರಲ್ಲಿ ಹಲವರಿಗೆ ತುರ್ತು ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ. ಇಡೀ ಗಾಜಾಗೆ ಪ್ರತಿದಿನ 400 ಯೂನಿಟ್‌ಗಳು ರಕ್ತ ಬೇಕಾಗುತ್ತವೆ ಎಂದು ಹೇಳಿದರು.

ಕಳೆದ 24 ಗಂಟೆಗಳಲ್ಲಿ ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ದಾಳಿಯಲ್ಲಿ ನೆರವು ಬಯಸುವವರು ಸೇರಿದಂತೆ ಕನಿಷ್ಠ 50 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. 184 ಜನರು ಗಾಯಗೊಂಡಿದ್ದಾರೆ ಎಂದು ಎನ್ಕ್ಲೇವ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸಿದ ನರಮೇಧ ಯುದ್ಧವು ಒಟ್ಟು 66,055 ಜನರನ್ನು ಕೊಂದಿದೆ. 168,346 ಜನರನ್ನು ಗಾಯಗೊಳಿಸಿದೆ ಎಂದು ಸಚಿವಾಲಯ ಟೆಲಿಗ್ರಾಮ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...