Homeಅಂತರಾಷ್ಟ್ರೀಯಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

- Advertisement -
- Advertisement -

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

“ಯಕೀನ್, ಇಸ್ರೇಲ್‌ ಆಕ್ರಮಣದಿಂದ ಸ್ಥಳಾಂತರಗೊಂಡ ಮತ್ತು ಅನಾಥರಾದ ಗಾಝಾದ ಮಕ್ಕಳಿಗೆ ಭರವಸೆಯ ದಾರಿ ದೀಪವಾಗಿದ್ದರು” ಎಂದು ವರದಿಗಳು ಬಣ್ಣಿಸಿವೆ.

“ವಯಸ್ಸು ಕೇವಲ 11 ಆಗಿದ್ದರೂ, ಯಕೀನ್ ಹಮ್ಮದ್ ಗಾಝಾದ ಅತ್ಯಂತ ಕಿರಿಯ ಮಾಧ್ಯಮ ಕಾರ್ಯಕರ್ತೆ ಮತ್ತು ಸ್ಥಳೀಯ ಸ್ವಯಂ ಸೇವಾ ಗುಂಪಿನ ಅತ್ಯಂತ ಕಿರಿಯ ಸದಸ್ಯೆ ಆಗಿದ್ದರು. ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯಿಂದ, ಆಕೆ ಭಯ ಆವರಿಸಿದ್ದ ಕಂದಮ್ಮಗಳ ಮನಸ್ಸಿನಲ್ಲಿ ಭರವಸೆ ಮೂಡಿಸುತ್ತಿದ್ದರು” ಎಂದು ಕೊಂಡಾಡಿವೆ.

ಗಾಝಾದ ನಿರಾಶ್ರಿತ ಶಿಬಿರದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯಕೀನ್, ತಮ್ಮ ಇನ್‌ಸ್ಟಾಗ್ರಾಂ ವಿಡಿಯೋಗಳ ಮೂಲಕ ಹತ್ತಾರು ಸಾವಿರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು.

ಅನಾಥರು ಮತ್ತು ಸ್ಥಳಾಂತರಗೊಂಡ ಕುಟುಂಬಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಮತ್ತು ಅಂತಹ ಕುಟುಂಬಗಳ ಮಕ್ಕಳೊಂದಿಗೆ ನಗುತ್ತಾ ಆಟವಾಡುತ್ತಾ, ಸಂತೋಷದಿಂದ ಉಡುಗೊರೆಗಳನ್ನು ಹಂಚುತ್ತಿರುವುದನ್ನು ಯಕೀನ್ ತನ್ನ ವಿಡಿಯೋಗಳ ಮೂಲಕ ತೋರಿಸುತ್ತಿದ್ದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜನರು ತಮ್ಮ ಜೀವನ ನಡೆಸಲು ಪ್ರತಿದಿನ ಹೇಗೆ ಹೋರಾಟ ಮಾಡುತ್ತಿದ್ದಾರೆ ಎಂಬುವುದನ್ನು ಯಕೀನ್ ತನ್ನ ವಿಡಿಯೋಗಳಲ್ಲಿ ದಾಖಲಿಸಿ ಹೊರ ಜಗತ್ತಿಗೆ ತೊರಿಸುತ್ತಿದ್ದರು. ಪುಟ್ಟ ಬಾಲಕಿಯ ಮಾತುಗಳು ಇಸ್ರೇಲ್‌ ನರಮೇಧ ಗಾಝಾ ಜನತೆಯ ಹಕ್ಕುಗಳನ್ನು ಹೇಗೆ ಹತ್ತಿಕ್ಕಿವೆ ಎಂಬುವುದನ್ನು ಜಗತ್ತಿಗೆ ವಿವರಿಸುತ್ತಿತ್ತು.

ಯಕೀನ್ ತನ್ನ ಅಣ್ಣ, ಮಾನವೀಯ ಕಾರ್ಯಕರ್ತ ಮೊಹಮ್ಮದ್ ಹಮ್ಮದ್ ಜೊತೆ ಸಹಾಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರು. ಒಟ್ಟಿನಲ್ಲಿ ಅವರು ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ, ಬಟ್ಟೆ ಮತ್ತು ಆ ಕುಟುಂಬಗಳ ಮಕ್ಕಳಿಗೆ ಆಟಿಕೆಗಳನ್ನು ತಲುಪಿಸುತ್ತಿದ್ದರು.

ತನ್ನವರನ್ನು ಕಳೆದುಕೊಂಡವರ, ವಿಶೇಷವಾಗಿ ಯುದ್ದದ ಭೀಕರತೆಗೆ ನಲುಗಿದ್ದ ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸುತ್ತಿದ್ದ ಯಕೀನ್, ಈಗ ಸಾವಿಗೀಡಾದ ಸಾವಿರಾರು ಮಕ್ಕಳ ಪಟ್ಟಿಗೆ ಸೇರಿದ್ದಾರೆ. ಆಕೆಯ ಮರಣದಿಂದ ಗಾಝಾ ಅತ್ಯಂತ ಕಿರಿಯ ಮತ್ತು ಅತ್ಯಂತ ಧೈರ್ಯಶಾಲಿ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

ಯಕೀನ್ ಅವರ ಸಾವಿಗೆ ಸಂಪೂರ್ಣ ಗಾಝಾ ಮತ್ತು ಜಗತ್ತಿನ ವಿವಿಧ ಭಾಗಗಳ ಮನುಷ್ಯರು ದುಖಃ ವ್ಯಕ್ತಪಡಿಸಿದ್ದಾರೆ. ಗಾಝಾದ ಕರಾಳ ಅವಧಿಯಲ್ಲಿ ಬೆಳಕನ್ನು ಪಸರಿಸಲು ಬಂದ ಮಗುವಿನ ನಷ್ಟಕ್ಕೆ ಹೋರಾಟಗಾರರು, ಪತ್ರಕರ್ತರು ಮತ್ತು ಆಕೆಯ ಬೆಂಬಲಿಗರು ಕಂಬನಿ ಮಿಡಿದಿದ್ದಾರೆ.

“ದಿಗ್ಬಂಧನಗಳ ನಡುವೆ ಹುಟ್ಟಿ, ಬಾಂಬ್ ದಾಳಿಗಳ ನಡುವೆ ಬೆಳೆದು, ಆಘಾತಗಳಿಂದ ರೂಪುಗೊಂಡ ಯಕೀನ್, ಮೌನವಾಗಿರದೆ ಧ್ವನಿಯಾದಳು. ಆಕೆಯ ಧೈರ್ಯ ಹಲವರ ಮೇಲೆ ಶಾಶ್ವತ ಪ್ರಭಾವ ಬೀರಿತು. ಯಕೀನ್ ಅವಶೇಷಗಳ ನಡುವೆ ಮಾದರಿ ಜೀವನ ನಡೆಸಿ ಪುಟ್ಟ ಹುಡುಗಿ” ಎಂದು palestinechronicle.com ತನ್ನ ವರದಿಯಲ್ಲಿ ಯಕೀನ್ ಕುರಿತು ಹೇಳಿದೆ. 

ದೋಣಿ ದುರಂತದಲ್ಲಿ 427 ರೋಹಿಂಗ್ಯಾ ನಿರಾಶ್ರಿತರು ಮುಳುಗಿರುವ ಶಂಕೆ: UNHCR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...