Homeಅಂತರಾಷ್ಟ್ರೀಯಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

- Advertisement -
- Advertisement -

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

“ಯಕೀನ್, ಇಸ್ರೇಲ್‌ ಆಕ್ರಮಣದಿಂದ ಸ್ಥಳಾಂತರಗೊಂಡ ಮತ್ತು ಅನಾಥರಾದ ಗಾಝಾದ ಮಕ್ಕಳಿಗೆ ಭರವಸೆಯ ದಾರಿ ದೀಪವಾಗಿದ್ದರು” ಎಂದು ವರದಿಗಳು ಬಣ್ಣಿಸಿವೆ.

“ವಯಸ್ಸು ಕೇವಲ 11 ಆಗಿದ್ದರೂ, ಯಕೀನ್ ಹಮ್ಮದ್ ಗಾಝಾದ ಅತ್ಯಂತ ಕಿರಿಯ ಮಾಧ್ಯಮ ಕಾರ್ಯಕರ್ತೆ ಮತ್ತು ಸ್ಥಳೀಯ ಸ್ವಯಂ ಸೇವಾ ಗುಂಪಿನ ಅತ್ಯಂತ ಕಿರಿಯ ಸದಸ್ಯೆ ಆಗಿದ್ದರು. ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯಿಂದ, ಆಕೆ ಭಯ ಆವರಿಸಿದ್ದ ಕಂದಮ್ಮಗಳ ಮನಸ್ಸಿನಲ್ಲಿ ಭರವಸೆ ಮೂಡಿಸುತ್ತಿದ್ದರು” ಎಂದು ಕೊಂಡಾಡಿವೆ.

ಗಾಝಾದ ನಿರಾಶ್ರಿತ ಶಿಬಿರದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯಕೀನ್, ತಮ್ಮ ಇನ್‌ಸ್ಟಾಗ್ರಾಂ ವಿಡಿಯೋಗಳ ಮೂಲಕ ಹತ್ತಾರು ಸಾವಿರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು.

ಅನಾಥರು ಮತ್ತು ಸ್ಥಳಾಂತರಗೊಂಡ ಕುಟುಂಬಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಮತ್ತು ಅಂತಹ ಕುಟುಂಬಗಳ ಮಕ್ಕಳೊಂದಿಗೆ ನಗುತ್ತಾ ಆಟವಾಡುತ್ತಾ, ಸಂತೋಷದಿಂದ ಉಡುಗೊರೆಗಳನ್ನು ಹಂಚುತ್ತಿರುವುದನ್ನು ಯಕೀನ್ ತನ್ನ ವಿಡಿಯೋಗಳ ಮೂಲಕ ತೋರಿಸುತ್ತಿದ್ದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜನರು ತಮ್ಮ ಜೀವನ ನಡೆಸಲು ಪ್ರತಿದಿನ ಹೇಗೆ ಹೋರಾಟ ಮಾಡುತ್ತಿದ್ದಾರೆ ಎಂಬುವುದನ್ನು ಯಕೀನ್ ತನ್ನ ವಿಡಿಯೋಗಳಲ್ಲಿ ದಾಖಲಿಸಿ ಹೊರ ಜಗತ್ತಿಗೆ ತೊರಿಸುತ್ತಿದ್ದರು. ಪುಟ್ಟ ಬಾಲಕಿಯ ಮಾತುಗಳು ಇಸ್ರೇಲ್‌ ನರಮೇಧ ಗಾಝಾ ಜನತೆಯ ಹಕ್ಕುಗಳನ್ನು ಹೇಗೆ ಹತ್ತಿಕ್ಕಿವೆ ಎಂಬುವುದನ್ನು ಜಗತ್ತಿಗೆ ವಿವರಿಸುತ್ತಿತ್ತು.

ಯಕೀನ್ ತನ್ನ ಅಣ್ಣ, ಮಾನವೀಯ ಕಾರ್ಯಕರ್ತ ಮೊಹಮ್ಮದ್ ಹಮ್ಮದ್ ಜೊತೆ ಸಹಾಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರು. ಒಟ್ಟಿನಲ್ಲಿ ಅವರು ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ, ಬಟ್ಟೆ ಮತ್ತು ಆ ಕುಟುಂಬಗಳ ಮಕ್ಕಳಿಗೆ ಆಟಿಕೆಗಳನ್ನು ತಲುಪಿಸುತ್ತಿದ್ದರು.

ತನ್ನವರನ್ನು ಕಳೆದುಕೊಂಡವರ, ವಿಶೇಷವಾಗಿ ಯುದ್ದದ ಭೀಕರತೆಗೆ ನಲುಗಿದ್ದ ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸುತ್ತಿದ್ದ ಯಕೀನ್, ಈಗ ಸಾವಿಗೀಡಾದ ಸಾವಿರಾರು ಮಕ್ಕಳ ಪಟ್ಟಿಗೆ ಸೇರಿದ್ದಾರೆ. ಆಕೆಯ ಮರಣದಿಂದ ಗಾಝಾ ಅತ್ಯಂತ ಕಿರಿಯ ಮತ್ತು ಅತ್ಯಂತ ಧೈರ್ಯಶಾಲಿ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

ಯಕೀನ್ ಅವರ ಸಾವಿಗೆ ಸಂಪೂರ್ಣ ಗಾಝಾ ಮತ್ತು ಜಗತ್ತಿನ ವಿವಿಧ ಭಾಗಗಳ ಮನುಷ್ಯರು ದುಖಃ ವ್ಯಕ್ತಪಡಿಸಿದ್ದಾರೆ. ಗಾಝಾದ ಕರಾಳ ಅವಧಿಯಲ್ಲಿ ಬೆಳಕನ್ನು ಪಸರಿಸಲು ಬಂದ ಮಗುವಿನ ನಷ್ಟಕ್ಕೆ ಹೋರಾಟಗಾರರು, ಪತ್ರಕರ್ತರು ಮತ್ತು ಆಕೆಯ ಬೆಂಬಲಿಗರು ಕಂಬನಿ ಮಿಡಿದಿದ್ದಾರೆ.

“ದಿಗ್ಬಂಧನಗಳ ನಡುವೆ ಹುಟ್ಟಿ, ಬಾಂಬ್ ದಾಳಿಗಳ ನಡುವೆ ಬೆಳೆದು, ಆಘಾತಗಳಿಂದ ರೂಪುಗೊಂಡ ಯಕೀನ್, ಮೌನವಾಗಿರದೆ ಧ್ವನಿಯಾದಳು. ಆಕೆಯ ಧೈರ್ಯ ಹಲವರ ಮೇಲೆ ಶಾಶ್ವತ ಪ್ರಭಾವ ಬೀರಿತು. ಯಕೀನ್ ಅವಶೇಷಗಳ ನಡುವೆ ಮಾದರಿ ಜೀವನ ನಡೆಸಿ ಪುಟ್ಟ ಹುಡುಗಿ” ಎಂದು palestinechronicle.com ತನ್ನ ವರದಿಯಲ್ಲಿ ಯಕೀನ್ ಕುರಿತು ಹೇಳಿದೆ. 

ದೋಣಿ ದುರಂತದಲ್ಲಿ 427 ರೋಹಿಂಗ್ಯಾ ನಿರಾಶ್ರಿತರು ಮುಳುಗಿರುವ ಶಂಕೆ: UNHCR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...