Homeಅಂತರಾಷ್ಟ್ರೀಯಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

- Advertisement -
- Advertisement -

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

“ಯಕೀನ್, ಇಸ್ರೇಲ್‌ ಆಕ್ರಮಣದಿಂದ ಸ್ಥಳಾಂತರಗೊಂಡ ಮತ್ತು ಅನಾಥರಾದ ಗಾಝಾದ ಮಕ್ಕಳಿಗೆ ಭರವಸೆಯ ದಾರಿ ದೀಪವಾಗಿದ್ದರು” ಎಂದು ವರದಿಗಳು ಬಣ್ಣಿಸಿವೆ.

“ವಯಸ್ಸು ಕೇವಲ 11 ಆಗಿದ್ದರೂ, ಯಕೀನ್ ಹಮ್ಮದ್ ಗಾಝಾದ ಅತ್ಯಂತ ಕಿರಿಯ ಮಾಧ್ಯಮ ಕಾರ್ಯಕರ್ತೆ ಮತ್ತು ಸ್ಥಳೀಯ ಸ್ವಯಂ ಸೇವಾ ಗುಂಪಿನ ಅತ್ಯಂತ ಕಿರಿಯ ಸದಸ್ಯೆ ಆಗಿದ್ದರು. ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯಿಂದ, ಆಕೆ ಭಯ ಆವರಿಸಿದ್ದ ಕಂದಮ್ಮಗಳ ಮನಸ್ಸಿನಲ್ಲಿ ಭರವಸೆ ಮೂಡಿಸುತ್ತಿದ್ದರು” ಎಂದು ಕೊಂಡಾಡಿವೆ.

ಗಾಝಾದ ನಿರಾಶ್ರಿತ ಶಿಬಿರದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯಕೀನ್, ತಮ್ಮ ಇನ್‌ಸ್ಟಾಗ್ರಾಂ ವಿಡಿಯೋಗಳ ಮೂಲಕ ಹತ್ತಾರು ಸಾವಿರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು.

ಅನಾಥರು ಮತ್ತು ಸ್ಥಳಾಂತರಗೊಂಡ ಕುಟುಂಬಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಮತ್ತು ಅಂತಹ ಕುಟುಂಬಗಳ ಮಕ್ಕಳೊಂದಿಗೆ ನಗುತ್ತಾ ಆಟವಾಡುತ್ತಾ, ಸಂತೋಷದಿಂದ ಉಡುಗೊರೆಗಳನ್ನು ಹಂಚುತ್ತಿರುವುದನ್ನು ಯಕೀನ್ ತನ್ನ ವಿಡಿಯೋಗಳ ಮೂಲಕ ತೋರಿಸುತ್ತಿದ್ದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜನರು ತಮ್ಮ ಜೀವನ ನಡೆಸಲು ಪ್ರತಿದಿನ ಹೇಗೆ ಹೋರಾಟ ಮಾಡುತ್ತಿದ್ದಾರೆ ಎಂಬುವುದನ್ನು ಯಕೀನ್ ತನ್ನ ವಿಡಿಯೋಗಳಲ್ಲಿ ದಾಖಲಿಸಿ ಹೊರ ಜಗತ್ತಿಗೆ ತೊರಿಸುತ್ತಿದ್ದರು. ಪುಟ್ಟ ಬಾಲಕಿಯ ಮಾತುಗಳು ಇಸ್ರೇಲ್‌ ನರಮೇಧ ಗಾಝಾ ಜನತೆಯ ಹಕ್ಕುಗಳನ್ನು ಹೇಗೆ ಹತ್ತಿಕ್ಕಿವೆ ಎಂಬುವುದನ್ನು ಜಗತ್ತಿಗೆ ವಿವರಿಸುತ್ತಿತ್ತು.

ಯಕೀನ್ ತನ್ನ ಅಣ್ಣ, ಮಾನವೀಯ ಕಾರ್ಯಕರ್ತ ಮೊಹಮ್ಮದ್ ಹಮ್ಮದ್ ಜೊತೆ ಸಹಾಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರು. ಒಟ್ಟಿನಲ್ಲಿ ಅವರು ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ, ಬಟ್ಟೆ ಮತ್ತು ಆ ಕುಟುಂಬಗಳ ಮಕ್ಕಳಿಗೆ ಆಟಿಕೆಗಳನ್ನು ತಲುಪಿಸುತ್ತಿದ್ದರು.

ತನ್ನವರನ್ನು ಕಳೆದುಕೊಂಡವರ, ವಿಶೇಷವಾಗಿ ಯುದ್ದದ ಭೀಕರತೆಗೆ ನಲುಗಿದ್ದ ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸುತ್ತಿದ್ದ ಯಕೀನ್, ಈಗ ಸಾವಿಗೀಡಾದ ಸಾವಿರಾರು ಮಕ್ಕಳ ಪಟ್ಟಿಗೆ ಸೇರಿದ್ದಾರೆ. ಆಕೆಯ ಮರಣದಿಂದ ಗಾಝಾ ಅತ್ಯಂತ ಕಿರಿಯ ಮತ್ತು ಅತ್ಯಂತ ಧೈರ್ಯಶಾಲಿ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

ಯಕೀನ್ ಅವರ ಸಾವಿಗೆ ಸಂಪೂರ್ಣ ಗಾಝಾ ಮತ್ತು ಜಗತ್ತಿನ ವಿವಿಧ ಭಾಗಗಳ ಮನುಷ್ಯರು ದುಖಃ ವ್ಯಕ್ತಪಡಿಸಿದ್ದಾರೆ. ಗಾಝಾದ ಕರಾಳ ಅವಧಿಯಲ್ಲಿ ಬೆಳಕನ್ನು ಪಸರಿಸಲು ಬಂದ ಮಗುವಿನ ನಷ್ಟಕ್ಕೆ ಹೋರಾಟಗಾರರು, ಪತ್ರಕರ್ತರು ಮತ್ತು ಆಕೆಯ ಬೆಂಬಲಿಗರು ಕಂಬನಿ ಮಿಡಿದಿದ್ದಾರೆ.

“ದಿಗ್ಬಂಧನಗಳ ನಡುವೆ ಹುಟ್ಟಿ, ಬಾಂಬ್ ದಾಳಿಗಳ ನಡುವೆ ಬೆಳೆದು, ಆಘಾತಗಳಿಂದ ರೂಪುಗೊಂಡ ಯಕೀನ್, ಮೌನವಾಗಿರದೆ ಧ್ವನಿಯಾದಳು. ಆಕೆಯ ಧೈರ್ಯ ಹಲವರ ಮೇಲೆ ಶಾಶ್ವತ ಪ್ರಭಾವ ಬೀರಿತು. ಯಕೀನ್ ಅವಶೇಷಗಳ ನಡುವೆ ಮಾದರಿ ಜೀವನ ನಡೆಸಿ ಪುಟ್ಟ ಹುಡುಗಿ” ಎಂದು palestinechronicle.com ತನ್ನ ವರದಿಯಲ್ಲಿ ಯಕೀನ್ ಕುರಿತು ಹೇಳಿದೆ. 

ದೋಣಿ ದುರಂತದಲ್ಲಿ 427 ರೋಹಿಂಗ್ಯಾ ನಿರಾಶ್ರಿತರು ಮುಳುಗಿರುವ ಶಂಕೆ: UNHCR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...