Homeಅಂತರಾಷ್ಟ್ರೀಯಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

- Advertisement -
- Advertisement -

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

“ಯಕೀನ್, ಇಸ್ರೇಲ್‌ ಆಕ್ರಮಣದಿಂದ ಸ್ಥಳಾಂತರಗೊಂಡ ಮತ್ತು ಅನಾಥರಾದ ಗಾಝಾದ ಮಕ್ಕಳಿಗೆ ಭರವಸೆಯ ದಾರಿ ದೀಪವಾಗಿದ್ದರು” ಎಂದು ವರದಿಗಳು ಬಣ್ಣಿಸಿವೆ.

“ವಯಸ್ಸು ಕೇವಲ 11 ಆಗಿದ್ದರೂ, ಯಕೀನ್ ಹಮ್ಮದ್ ಗಾಝಾದ ಅತ್ಯಂತ ಕಿರಿಯ ಮಾಧ್ಯಮ ಕಾರ್ಯಕರ್ತೆ ಮತ್ತು ಸ್ಥಳೀಯ ಸ್ವಯಂ ಸೇವಾ ಗುಂಪಿನ ಅತ್ಯಂತ ಕಿರಿಯ ಸದಸ್ಯೆ ಆಗಿದ್ದರು. ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯಿಂದ, ಆಕೆ ಭಯ ಆವರಿಸಿದ್ದ ಕಂದಮ್ಮಗಳ ಮನಸ್ಸಿನಲ್ಲಿ ಭರವಸೆ ಮೂಡಿಸುತ್ತಿದ್ದರು” ಎಂದು ಕೊಂಡಾಡಿವೆ.

ಗಾಝಾದ ನಿರಾಶ್ರಿತ ಶಿಬಿರದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯಕೀನ್, ತಮ್ಮ ಇನ್‌ಸ್ಟಾಗ್ರಾಂ ವಿಡಿಯೋಗಳ ಮೂಲಕ ಹತ್ತಾರು ಸಾವಿರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು.

ಅನಾಥರು ಮತ್ತು ಸ್ಥಳಾಂತರಗೊಂಡ ಕುಟುಂಬಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಮತ್ತು ಅಂತಹ ಕುಟುಂಬಗಳ ಮಕ್ಕಳೊಂದಿಗೆ ನಗುತ್ತಾ ಆಟವಾಡುತ್ತಾ, ಸಂತೋಷದಿಂದ ಉಡುಗೊರೆಗಳನ್ನು ಹಂಚುತ್ತಿರುವುದನ್ನು ಯಕೀನ್ ತನ್ನ ವಿಡಿಯೋಗಳ ಮೂಲಕ ತೋರಿಸುತ್ತಿದ್ದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜನರು ತಮ್ಮ ಜೀವನ ನಡೆಸಲು ಪ್ರತಿದಿನ ಹೇಗೆ ಹೋರಾಟ ಮಾಡುತ್ತಿದ್ದಾರೆ ಎಂಬುವುದನ್ನು ಯಕೀನ್ ತನ್ನ ವಿಡಿಯೋಗಳಲ್ಲಿ ದಾಖಲಿಸಿ ಹೊರ ಜಗತ್ತಿಗೆ ತೊರಿಸುತ್ತಿದ್ದರು. ಪುಟ್ಟ ಬಾಲಕಿಯ ಮಾತುಗಳು ಇಸ್ರೇಲ್‌ ನರಮೇಧ ಗಾಝಾ ಜನತೆಯ ಹಕ್ಕುಗಳನ್ನು ಹೇಗೆ ಹತ್ತಿಕ್ಕಿವೆ ಎಂಬುವುದನ್ನು ಜಗತ್ತಿಗೆ ವಿವರಿಸುತ್ತಿತ್ತು.

ಯಕೀನ್ ತನ್ನ ಅಣ್ಣ, ಮಾನವೀಯ ಕಾರ್ಯಕರ್ತ ಮೊಹಮ್ಮದ್ ಹಮ್ಮದ್ ಜೊತೆ ಸಹಾಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರು. ಒಟ್ಟಿನಲ್ಲಿ ಅವರು ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ, ಬಟ್ಟೆ ಮತ್ತು ಆ ಕುಟುಂಬಗಳ ಮಕ್ಕಳಿಗೆ ಆಟಿಕೆಗಳನ್ನು ತಲುಪಿಸುತ್ತಿದ್ದರು.

ತನ್ನವರನ್ನು ಕಳೆದುಕೊಂಡವರ, ವಿಶೇಷವಾಗಿ ಯುದ್ದದ ಭೀಕರತೆಗೆ ನಲುಗಿದ್ದ ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸುತ್ತಿದ್ದ ಯಕೀನ್, ಈಗ ಸಾವಿಗೀಡಾದ ಸಾವಿರಾರು ಮಕ್ಕಳ ಪಟ್ಟಿಗೆ ಸೇರಿದ್ದಾರೆ. ಆಕೆಯ ಮರಣದಿಂದ ಗಾಝಾ ಅತ್ಯಂತ ಕಿರಿಯ ಮತ್ತು ಅತ್ಯಂತ ಧೈರ್ಯಶಾಲಿ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

ಯಕೀನ್ ಅವರ ಸಾವಿಗೆ ಸಂಪೂರ್ಣ ಗಾಝಾ ಮತ್ತು ಜಗತ್ತಿನ ವಿವಿಧ ಭಾಗಗಳ ಮನುಷ್ಯರು ದುಖಃ ವ್ಯಕ್ತಪಡಿಸಿದ್ದಾರೆ. ಗಾಝಾದ ಕರಾಳ ಅವಧಿಯಲ್ಲಿ ಬೆಳಕನ್ನು ಪಸರಿಸಲು ಬಂದ ಮಗುವಿನ ನಷ್ಟಕ್ಕೆ ಹೋರಾಟಗಾರರು, ಪತ್ರಕರ್ತರು ಮತ್ತು ಆಕೆಯ ಬೆಂಬಲಿಗರು ಕಂಬನಿ ಮಿಡಿದಿದ್ದಾರೆ.

“ದಿಗ್ಬಂಧನಗಳ ನಡುವೆ ಹುಟ್ಟಿ, ಬಾಂಬ್ ದಾಳಿಗಳ ನಡುವೆ ಬೆಳೆದು, ಆಘಾತಗಳಿಂದ ರೂಪುಗೊಂಡ ಯಕೀನ್, ಮೌನವಾಗಿರದೆ ಧ್ವನಿಯಾದಳು. ಆಕೆಯ ಧೈರ್ಯ ಹಲವರ ಮೇಲೆ ಶಾಶ್ವತ ಪ್ರಭಾವ ಬೀರಿತು. ಯಕೀನ್ ಅವಶೇಷಗಳ ನಡುವೆ ಮಾದರಿ ಜೀವನ ನಡೆಸಿ ಪುಟ್ಟ ಹುಡುಗಿ” ಎಂದು palestinechronicle.com ತನ್ನ ವರದಿಯಲ್ಲಿ ಯಕೀನ್ ಕುರಿತು ಹೇಳಿದೆ. 

ದೋಣಿ ದುರಂತದಲ್ಲಿ 427 ರೋಹಿಂಗ್ಯಾ ನಿರಾಶ್ರಿತರು ಮುಳುಗಿರುವ ಶಂಕೆ: UNHCR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...