Homeಅಂತರಾಷ್ಟ್ರೀಯಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

- Advertisement -
- Advertisement -

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

“ಯಕೀನ್, ಇಸ್ರೇಲ್‌ ಆಕ್ರಮಣದಿಂದ ಸ್ಥಳಾಂತರಗೊಂಡ ಮತ್ತು ಅನಾಥರಾದ ಗಾಝಾದ ಮಕ್ಕಳಿಗೆ ಭರವಸೆಯ ದಾರಿ ದೀಪವಾಗಿದ್ದರು” ಎಂದು ವರದಿಗಳು ಬಣ್ಣಿಸಿವೆ.

“ವಯಸ್ಸು ಕೇವಲ 11 ಆಗಿದ್ದರೂ, ಯಕೀನ್ ಹಮ್ಮದ್ ಗಾಝಾದ ಅತ್ಯಂತ ಕಿರಿಯ ಮಾಧ್ಯಮ ಕಾರ್ಯಕರ್ತೆ ಮತ್ತು ಸ್ಥಳೀಯ ಸ್ವಯಂ ಸೇವಾ ಗುಂಪಿನ ಅತ್ಯಂತ ಕಿರಿಯ ಸದಸ್ಯೆ ಆಗಿದ್ದರು. ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯಿಂದ, ಆಕೆ ಭಯ ಆವರಿಸಿದ್ದ ಕಂದಮ್ಮಗಳ ಮನಸ್ಸಿನಲ್ಲಿ ಭರವಸೆ ಮೂಡಿಸುತ್ತಿದ್ದರು” ಎಂದು ಕೊಂಡಾಡಿವೆ.

ಗಾಝಾದ ನಿರಾಶ್ರಿತ ಶಿಬಿರದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯಕೀನ್, ತಮ್ಮ ಇನ್‌ಸ್ಟಾಗ್ರಾಂ ವಿಡಿಯೋಗಳ ಮೂಲಕ ಹತ್ತಾರು ಸಾವಿರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು.

ಅನಾಥರು ಮತ್ತು ಸ್ಥಳಾಂತರಗೊಂಡ ಕುಟುಂಬಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಮತ್ತು ಅಂತಹ ಕುಟುಂಬಗಳ ಮಕ್ಕಳೊಂದಿಗೆ ನಗುತ್ತಾ ಆಟವಾಡುತ್ತಾ, ಸಂತೋಷದಿಂದ ಉಡುಗೊರೆಗಳನ್ನು ಹಂಚುತ್ತಿರುವುದನ್ನು ಯಕೀನ್ ತನ್ನ ವಿಡಿಯೋಗಳ ಮೂಲಕ ತೋರಿಸುತ್ತಿದ್ದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜನರು ತಮ್ಮ ಜೀವನ ನಡೆಸಲು ಪ್ರತಿದಿನ ಹೇಗೆ ಹೋರಾಟ ಮಾಡುತ್ತಿದ್ದಾರೆ ಎಂಬುವುದನ್ನು ಯಕೀನ್ ತನ್ನ ವಿಡಿಯೋಗಳಲ್ಲಿ ದಾಖಲಿಸಿ ಹೊರ ಜಗತ್ತಿಗೆ ತೊರಿಸುತ್ತಿದ್ದರು. ಪುಟ್ಟ ಬಾಲಕಿಯ ಮಾತುಗಳು ಇಸ್ರೇಲ್‌ ನರಮೇಧ ಗಾಝಾ ಜನತೆಯ ಹಕ್ಕುಗಳನ್ನು ಹೇಗೆ ಹತ್ತಿಕ್ಕಿವೆ ಎಂಬುವುದನ್ನು ಜಗತ್ತಿಗೆ ವಿವರಿಸುತ್ತಿತ್ತು.

ಯಕೀನ್ ತನ್ನ ಅಣ್ಣ, ಮಾನವೀಯ ಕಾರ್ಯಕರ್ತ ಮೊಹಮ್ಮದ್ ಹಮ್ಮದ್ ಜೊತೆ ಸಹಾಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರು. ಒಟ್ಟಿನಲ್ಲಿ ಅವರು ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ, ಬಟ್ಟೆ ಮತ್ತು ಆ ಕುಟುಂಬಗಳ ಮಕ್ಕಳಿಗೆ ಆಟಿಕೆಗಳನ್ನು ತಲುಪಿಸುತ್ತಿದ್ದರು.

ತನ್ನವರನ್ನು ಕಳೆದುಕೊಂಡವರ, ವಿಶೇಷವಾಗಿ ಯುದ್ದದ ಭೀಕರತೆಗೆ ನಲುಗಿದ್ದ ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸುತ್ತಿದ್ದ ಯಕೀನ್, ಈಗ ಸಾವಿಗೀಡಾದ ಸಾವಿರಾರು ಮಕ್ಕಳ ಪಟ್ಟಿಗೆ ಸೇರಿದ್ದಾರೆ. ಆಕೆಯ ಮರಣದಿಂದ ಗಾಝಾ ಅತ್ಯಂತ ಕಿರಿಯ ಮತ್ತು ಅತ್ಯಂತ ಧೈರ್ಯಶಾಲಿ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

ಯಕೀನ್ ಅವರ ಸಾವಿಗೆ ಸಂಪೂರ್ಣ ಗಾಝಾ ಮತ್ತು ಜಗತ್ತಿನ ವಿವಿಧ ಭಾಗಗಳ ಮನುಷ್ಯರು ದುಖಃ ವ್ಯಕ್ತಪಡಿಸಿದ್ದಾರೆ. ಗಾಝಾದ ಕರಾಳ ಅವಧಿಯಲ್ಲಿ ಬೆಳಕನ್ನು ಪಸರಿಸಲು ಬಂದ ಮಗುವಿನ ನಷ್ಟಕ್ಕೆ ಹೋರಾಟಗಾರರು, ಪತ್ರಕರ್ತರು ಮತ್ತು ಆಕೆಯ ಬೆಂಬಲಿಗರು ಕಂಬನಿ ಮಿಡಿದಿದ್ದಾರೆ.

“ದಿಗ್ಬಂಧನಗಳ ನಡುವೆ ಹುಟ್ಟಿ, ಬಾಂಬ್ ದಾಳಿಗಳ ನಡುವೆ ಬೆಳೆದು, ಆಘಾತಗಳಿಂದ ರೂಪುಗೊಂಡ ಯಕೀನ್, ಮೌನವಾಗಿರದೆ ಧ್ವನಿಯಾದಳು. ಆಕೆಯ ಧೈರ್ಯ ಹಲವರ ಮೇಲೆ ಶಾಶ್ವತ ಪ್ರಭಾವ ಬೀರಿತು. ಯಕೀನ್ ಅವಶೇಷಗಳ ನಡುವೆ ಮಾದರಿ ಜೀವನ ನಡೆಸಿ ಪುಟ್ಟ ಹುಡುಗಿ” ಎಂದು palestinechronicle.com ತನ್ನ ವರದಿಯಲ್ಲಿ ಯಕೀನ್ ಕುರಿತು ಹೇಳಿದೆ. 

ದೋಣಿ ದುರಂತದಲ್ಲಿ 427 ರೋಹಿಂಗ್ಯಾ ನಿರಾಶ್ರಿತರು ಮುಳುಗಿರುವ ಶಂಕೆ: UNHCR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...