Homeಮುಖಪುಟಜಿಡಿಪಿ 4.5%, ಆರ್ಥಿಕ ಹಿಂಜರಿಕೆಯತ್ತ ಭಾರತ?

ಜಿಡಿಪಿ 4.5%, ಆರ್ಥಿಕ ಹಿಂಜರಿಕೆಯತ್ತ ಭಾರತ?

- Advertisement -
- Advertisement -

| ಬಿ.ಸಿ .ಬಸವರಾಜ್ |

ಕೇಂದ್ರ ಸರ್ಕಾರ ಇನ್ನೂ ಕೂಡ ನಮ್ಮ ಆರ್ಥಿಕತೆಯ ಗಂಭೀರತೆಯನ್ನು ಗುರುತಿಸುವ ಕೆಲಸವನ್ನೇ ಮಾಡದಿರುವುದರಿಂದ, ಇದಕ್ಕೆ ತಕ್ಕ ಪರಿಹಾರಗಳನ್ನು ಹುಡುಕುವ ಕೆಲಸವೂ ಸರ್ಕಾರದ ಕೈಯಲ್ಲಿ ಆಗುತ್ತಿಲ್ಲ. ಇದರಿಂದಾಗಿ, ಮುಂಬರುವ ದಿನಗಳು ಮತ್ತಷ್ಟು ನಿರುದ್ಯೋಗದ, ಬಡತನದ ದಿನಗಳಾಗಲಿವೆ ಎಂದೇ ಅನಿಸುತ್ತಿದೆ.

ಇತ್ತೀಚೆಗೆ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‍ರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ” ಈಗ ಉಂಟಾಗಿರುವುದು ಕೇವಲ ಆರ್ಥಿಕ ಅಭಿವೃದ್ಧಿಯಲ್ಲಿ ಇಳಿಕೆಯೇ ಹೊರತು ಇದು ಆರ್ಥಿಕ ಹಿಂಜರಿತವಲ್ಲ. ಕೇಂದ್ರ ಸರ್ಕಾರ ಈ ಅಭಿವೃದ್ಧಿಯ ಇಳಿತವನ್ನು ಸರಿಪಡಿಸಲು ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದ್ದು ಅದರ ಒಳ್ಳೆಯ ಫಲಿತಾಂಶಗಳು ಈಗ ಬರುತ್ತಿವೆ. ಆದ್ದರಿಂದ ಭಾರತ ಸದ್ಯದಲ್ಲಿ ಆರ್ಥಿಕ ಹಿಂಜರಿತಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ” ಎಂದಿದ್ದಾರೆ.

ವಿತ್ತ ಮಂತ್ರಿಯವರು ಈ ಹೇಳಿಕೆ ನೀಡಿದನಂತರ ಬಿಡುಗಡೆಯಾದ ಜಿಡಿಪಿ ಅಂಕಿಅಂಶಗಳು 2019-20 ರ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಕೇವಲ 4.5% ರಷ್ಟೆಂದು ಹೇಳಿವೆ. ಹೋದವರ್ಷ ಅಂದರೆ 2018-19 ರ ಇದೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ 7.1% ರಷ್ಟಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 5% ರಷ್ಟಿದ್ದ ಜಿಡಿಪಿ ಈಗ 4.5% ರಷ್ಟಾಗಿರುವುದು ನೋಡಿದಾಗ ಕೇಂದ್ರ ಸರ್ಕಾರ ಆರ್ಥಿಕ ಅಭಿವೃದ್ಧಿಗೆ ಕೆಲ ತಿಂಗಳ ಹಿಂದೆ ತೆಗೆದುಕೊಂಡ ಕ್ರಮಗಳು ಏನೂ ಪರಿಣಾಮ ಉಂಟುಮಾಡಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ತಾಂತ್ರಿಕವಾಗಿ ನೋಡಿದಾಗ ವಿತ್ತ ಮಂತ್ರಿಯವರು ಹೇಳಿದಂತೆ ಇದು ಆರ್ಥಿಕ ಹಿಂಜರಿಕೆಯಲ್ಲ. ಸತತ ಎರಡು ತ್ರೈಮಾಸಿಕಗಳಲ್ಲಿ ಜಿಡಿಪಿಯು ಹೋದವರ್ಷಕ್ಕಿಂತ ಕಡಿಮೆಯಾದರೆ ಅಂದರೆ ನಕಾರಾತ್ಮಕ ಬೆಳವಣಿಗೆ (Negative growth) ತೋರಿಸಿದರೆ ಆಗ ಅರ್ಥಶಾಸ್ತ್ರೀಯವಾಗಿ ಅದನ್ನು ಆರ್ಥಿಕ ಹಿಂಜರಿತ (Recession) ಎನ್ನುತ್ತಾರೆ. ಹಾಗಾಗಿ ಭಾರತದಂತ ಬೆಳೆಯುತ್ತಿರುವ ಆರ್ಥಿಕತೆ ಸಾಮಾನ್ಯವಾಗಿ ಹಿಂಜರಿತದ ಮಟ್ಟಕ್ಕೆ ಹೋಗುವುದಿಲ್ಲ. ಆದರೆ, ಕಳೆದ ಆರೇಳು ತ್ರೈಮಾಸಿಕಗಳಿಂದ ಸತತವಾಗಿ ಇಳಿಯುತ್ತಿರುವ ಜಿಡಿಪಿ ಭಾರತದಂತ ಬೃಹತ್ ದೇಶಕ್ಕೆ ಆರ್ಥಿಕ ಹಿಂಜರಿತದಷ್ಟೇ ಕೆಟ್ಟ ಪರಿಣಾಮ ಉಂಟುಮಾಡುತ್ತದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ.

ಈಗಲಂತೂ ನಮ್ಮ ಆರ್ಥಿಕ ಪರಿಸ್ಥಿತಿ ಹಿಂಜರಿಕೆಗೆ ಹತ್ತಿರವಿರುವಷ್ಟು ಗಂಭೀರವಾಗಿದೆ ಎಂಬುದು ಒಂದೆರಡು ಮುಖ್ಯ ಅಂಶಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಮೊದಲನೆಯದಾಗಿ, ತಯಾರಿಕಾ ಕ್ಷೇತ್ರ (Manufacturing sector) ಹೋದ ವರ್ಷದ (2018-19) ಎರಡನೇ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷ -1% ಬೆಳವಣಿಗೆ ತೋರಿಸಿದೆ. ಅಂದರೆ ಶೇ ಒಂದರಷ್ಟು ಬೆಳವಣಿಗೆ ಇಳಿಮುಖವಾಗಿದ್ದು (Negative growth) ಈ ವಲಯ ಹಿಂಜರಿತವನ್ನು ತೋರಿಸುತ್ತಿದೆ. ತಯಾರಿಕಾ ಕ್ಷೇತ್ರ ಒಟ್ಟು ಕೈಗಾರಿಕಾ ವಲಯದ ಪ್ರಮುಖ ಭಾಗವಾಗಿದ್ದು ಇದರ ನೆಗೆಟಿವ್ ಗ್ರೋಥ್‍ನಿಂದಾಗಿಯೇ ಕೈಗಾರಿಕಾ ಕ್ಷೇತ್ರ ಒಟ್ಟಾರೆಯಾಗಿ ಈಗ ಕೇವಲ 0.52% ರಷ್ಟು ಮಾತ್ರ ಬೆಳವಣಿಗೆ ದಾಖಲಿಸಿದೆ.

ಜೊತೆಗೆ ತಯಾರಿಕಾ ಕ್ಷೇತ್ರ ದೇಶದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕ್ಷೇತ್ರವೂ ಆಗಿದ್ದು ಇಲ್ಲಿಯ ಹಿಂಜರಿತ ಮತ್ತಷ್ಟು ಉದ್ಯೋಗ ನಷ್ಟಕ್ಕೆ ಎಡೆಮಾಡಿಕೊಡಲಿದೆ. ಇದರಿಂದಾಗಿ ಇಡೀ ದೇಶದಲ್ಲಿ ಮತ್ತಷ್ಟು ನಿರುದ್ಯೋಗ, ಮತ್ತಷ್ಟು ಇಳಿಮುಖವಾಗುವ ಗ್ರಾಹಕ ಬೇಡಿಕೆ ಮತ್ತು ಅದರಿಂದಾಗಿ ಮತ್ತಷ್ಟು ಆರ್ಥಿಕ ಹಿಂಜರಿಕೆ. ಹೀಗೆ, ಈಗಿನ ಆರ್ಥಿಕ ಅಭಿವೃದ್ಧಿ ಇಳಿಕೆ ಆರ್ಥಿಕ ಹಿಂಜರಿತವಾಗುವ ಲಕ್ಷಣಗಳು ಇಲ್ಲಿ ಕಾಣಿಸುತ್ತಿವೆ.

ಇನ್ನು, ಈಗಿನ ಒಟ್ಟು ಜಿಡಿಪಿಯ 4.5% ನಲ್ಲಿ ಸರ್ಕಾರದ ವೆಚ್ಚವನ್ನು (Government expenditure) ಕಳೆದು ನೋಡಿದರೆ ಕಂಡುಬರುವ ಜಿಡಿಪಿ ಬೆಳವಣಿಗೆ ದರ ಕೇವಲ 3%. ಉಳಿದ ಸರ್ಕಾರೇತರ ಜಿಡಿಪಿಯಲ್ಲಿ ಖಾಸಗಿ ಬಳಕೆಯ ವೆಚ್ಚ (private consumption expenditure), ಖಾಸಗಿ ಬಂಡವಾಳ (private investment ) ಮತ್ತು ಒಟ್ಟು ರಫ್ತು (Net exports) ಬರುತ್ತವೆ.

ಈ ಸರ್ಕಾರೇತರ ಜಿಡಿಪಿಯ ಭಾಗದ ಬೆಳವಣಿಗೆ ಈ ಎರಡನೇ ತ್ರೈಮಾಸಿಕದಲ್ಲಿ ಕೇವಲ 3% ಇದೆ. ಯಾವಾಗಲೂ ದೇಶದ ಜಿಡಿಪಿಯಲ್ಲಿ ಸರ್ಕಾರೇತರ ಜಿಡಿಪಿಯ ಪಾಲು ಶೇ 87 ರಿಂದ ಶೇ 92 ರಷ್ಟಿರುತ್ತದೆ. ಈ ತ್ರೈಮಾಸಿಕದಲ್ಲಿ ಇದರ ಪಾಲು ಶೇ 87 ರಷ್ಟಿದೆ.

ಅಂದರೆ, ದೇಶದ ಜಿಡಿಪಿಯಲ್ಲಿ ಶೇ 87 ರಷ್ಟಿರುವ ಸರ್ಕಾರೇತರ ಜಿಡಿಪಿ ಕೇವಲ 3% ರಷ್ಟು ಮಾತ್ರ ಬೆಳವಣಿಗೆಯಾಗಿದೆ ಎಂದರೆ, ದೇಶದ ಆರ್ಥಿಕ ಸ್ಥಿತಿಯ ಗಂಭೀರತೆಯನ್ನು ನಾವು ಅರ್ಥ ಮಾಡಿಕೊಳ್ಳಬಹುದು.

ತಯಾರಿಕಾ ಕ್ಷೇತ್ರದ ನಕಾರಾತ್ಮಕ ಬೆಳವಣಿಗೆ ಮತ್ತು ಉಳಿದೆಲ್ಲ ಕ್ಷೇತ್ರಗಳ ಕನಿಷ್ಟ ಬೆಳವಣಿಗೆ ಮೇಲಿನ ಅಂಶವನ್ನು ಸ್ಪಷ್ಟಪಡಿಸುತ್ತಿವೆ.

ಅದೇ ಸರ್ಕಾರೀ ವೆಚ್ಚ ಈ ಆರ್ಥಿಕ ವರ್ಷದಲ್ಲಿ 12.3% ವೇಗದಲ್ಲಿ ಬೆಳೆದಿದೆ. ಇದರ ಕೊಡುಗೆಯ ಫಲವಾಗಿಯೇ ಜಿಡಿಪಿ 4.5% ರಷ್ಟಾದರೂ ಇದೆ. ಆದರೆ ಈ ಸರ್ಕಾರೀ ವೆಚ್ಚ ಆಡಳಿತ, ರಕ್ಷಣೆ ಮತ್ತು ಇತರ ಕೆಲವು ಸೇವೆಗಳಿಗೆ ಮಾತ್ರ ಹಂಚಲ್ಪಟ್ಟಿರುವುದರಿಂದ ಜನಸಾಮಾನ್ಯರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವಲ್ಲಿ ಸೋತಿದೆ.

ಇದೇ ಸರ್ಕಾರೀ ವೆಚ್ಚವು ಗ್ರಾಮೀಣ ಉದ್ಯೋಗ ಖಾತ್ರಿ ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯತ್ತ ಕಡೆ ಗಮನ ಕೇಂದ್ರೀಕರಿಸಿದ್ದರೆ ಜನಗಳ ಕೈಯಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿ ಆರ್ಥಿಕ ಮುಂಚಲನೆ ಸಾಧ್ಯವಾಗುತ್ತಿತ್ತು.

ಜೊತೆಗೆ ಬಂಡವಾಳ ಹೂಡಿಕೆಯ ವೇಗವು ಕೇವಲ 1.02% ರಷ್ಟಿದ್ದು ಇದು ಆರ್ಥಿಕ ಹಿಂಜರಿಕೆಯಿಂದ ಪಾರುಮಾಡುವುದಕ್ಕಾಗಲೀ ಮತ್ತು ಉದ್ಯೋಗ ಸೃಷ್ಟಿಗಾಗಲೀ ಏನೇನೂ ಸಾಲದೆನಿಸಿದೆ.ಒಟ್ಟಾರೆಯಾಗಿ, ದೇಶ ತಾಂತ್ರಿಕವಾಗಿ ಆರ್ಥಿಕ ಹಿಂಜರಿತಕ್ಕೆ ಒಳಗಾಗದೆ ಇದ್ದರೂ, ವಲಯಾವಾರು ಪರಿಸ್ಥಿತಿಯನ್ನು ಗಮನಿಸಿದಾಗ ಅಂತಹ ಹಿಂಜರಿತದಷ್ಟೇ ಸ್ಥಿತಿ ಗಂಭೀರವಾಗಿದೆ.ಆದರೆ, ಕೇಂದ್ರ ಸರ್ಕಾರ ಇನ್ನೂ ಕೂಡ ನಮ್ಮ ಆರ್ಥಿಕತೆಯ ಗಂಭೀರತೆಯನ್ನು ಗುರುತಿಸುವ ಕೆಲಸವನ್ನೇ ಮಾಡದಿರುವುದರಿಂದ, ಇದಕ್ಕೆ ತಕ್ಕ ಪರಿಹಾರಗಳನ್ನು ಹುಡುಕುವ ಕೆಲಸವೂ ಸರ್ಕಾರದ ಕೈಯಲ್ಲಿ ಆಗುತ್ತಿಲ್ಲ.ಇದರಿಂದಾಗಿ, ಮುಂಬರುವ ದಿನಗಳು ಮತ್ತಷ್ಟು ನಿರುದ್ಯೋಗದ, ಬಡತನದ ದಿನಗಳಾಗಲಿವೆ ಎಂದೇ ಅನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...