Homeಮುಖಪುಟಜಿಡಿಪಿ 4.5%, ಆರ್ಥಿಕ ಹಿಂಜರಿಕೆಯತ್ತ ಭಾರತ?

ಜಿಡಿಪಿ 4.5%, ಆರ್ಥಿಕ ಹಿಂಜರಿಕೆಯತ್ತ ಭಾರತ?

- Advertisement -
- Advertisement -

| ಬಿ.ಸಿ .ಬಸವರಾಜ್ |

ಕೇಂದ್ರ ಸರ್ಕಾರ ಇನ್ನೂ ಕೂಡ ನಮ್ಮ ಆರ್ಥಿಕತೆಯ ಗಂಭೀರತೆಯನ್ನು ಗುರುತಿಸುವ ಕೆಲಸವನ್ನೇ ಮಾಡದಿರುವುದರಿಂದ, ಇದಕ್ಕೆ ತಕ್ಕ ಪರಿಹಾರಗಳನ್ನು ಹುಡುಕುವ ಕೆಲಸವೂ ಸರ್ಕಾರದ ಕೈಯಲ್ಲಿ ಆಗುತ್ತಿಲ್ಲ. ಇದರಿಂದಾಗಿ, ಮುಂಬರುವ ದಿನಗಳು ಮತ್ತಷ್ಟು ನಿರುದ್ಯೋಗದ, ಬಡತನದ ದಿನಗಳಾಗಲಿವೆ ಎಂದೇ ಅನಿಸುತ್ತಿದೆ.

ಇತ್ತೀಚೆಗೆ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‍ರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ” ಈಗ ಉಂಟಾಗಿರುವುದು ಕೇವಲ ಆರ್ಥಿಕ ಅಭಿವೃದ್ಧಿಯಲ್ಲಿ ಇಳಿಕೆಯೇ ಹೊರತು ಇದು ಆರ್ಥಿಕ ಹಿಂಜರಿತವಲ್ಲ. ಕೇಂದ್ರ ಸರ್ಕಾರ ಈ ಅಭಿವೃದ್ಧಿಯ ಇಳಿತವನ್ನು ಸರಿಪಡಿಸಲು ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದ್ದು ಅದರ ಒಳ್ಳೆಯ ಫಲಿತಾಂಶಗಳು ಈಗ ಬರುತ್ತಿವೆ. ಆದ್ದರಿಂದ ಭಾರತ ಸದ್ಯದಲ್ಲಿ ಆರ್ಥಿಕ ಹಿಂಜರಿತಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ” ಎಂದಿದ್ದಾರೆ.

ವಿತ್ತ ಮಂತ್ರಿಯವರು ಈ ಹೇಳಿಕೆ ನೀಡಿದನಂತರ ಬಿಡುಗಡೆಯಾದ ಜಿಡಿಪಿ ಅಂಕಿಅಂಶಗಳು 2019-20 ರ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಕೇವಲ 4.5% ರಷ್ಟೆಂದು ಹೇಳಿವೆ. ಹೋದವರ್ಷ ಅಂದರೆ 2018-19 ರ ಇದೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ 7.1% ರಷ್ಟಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 5% ರಷ್ಟಿದ್ದ ಜಿಡಿಪಿ ಈಗ 4.5% ರಷ್ಟಾಗಿರುವುದು ನೋಡಿದಾಗ ಕೇಂದ್ರ ಸರ್ಕಾರ ಆರ್ಥಿಕ ಅಭಿವೃದ್ಧಿಗೆ ಕೆಲ ತಿಂಗಳ ಹಿಂದೆ ತೆಗೆದುಕೊಂಡ ಕ್ರಮಗಳು ಏನೂ ಪರಿಣಾಮ ಉಂಟುಮಾಡಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ತಾಂತ್ರಿಕವಾಗಿ ನೋಡಿದಾಗ ವಿತ್ತ ಮಂತ್ರಿಯವರು ಹೇಳಿದಂತೆ ಇದು ಆರ್ಥಿಕ ಹಿಂಜರಿಕೆಯಲ್ಲ. ಸತತ ಎರಡು ತ್ರೈಮಾಸಿಕಗಳಲ್ಲಿ ಜಿಡಿಪಿಯು ಹೋದವರ್ಷಕ್ಕಿಂತ ಕಡಿಮೆಯಾದರೆ ಅಂದರೆ ನಕಾರಾತ್ಮಕ ಬೆಳವಣಿಗೆ (Negative growth) ತೋರಿಸಿದರೆ ಆಗ ಅರ್ಥಶಾಸ್ತ್ರೀಯವಾಗಿ ಅದನ್ನು ಆರ್ಥಿಕ ಹಿಂಜರಿತ (Recession) ಎನ್ನುತ್ತಾರೆ. ಹಾಗಾಗಿ ಭಾರತದಂತ ಬೆಳೆಯುತ್ತಿರುವ ಆರ್ಥಿಕತೆ ಸಾಮಾನ್ಯವಾಗಿ ಹಿಂಜರಿತದ ಮಟ್ಟಕ್ಕೆ ಹೋಗುವುದಿಲ್ಲ. ಆದರೆ, ಕಳೆದ ಆರೇಳು ತ್ರೈಮಾಸಿಕಗಳಿಂದ ಸತತವಾಗಿ ಇಳಿಯುತ್ತಿರುವ ಜಿಡಿಪಿ ಭಾರತದಂತ ಬೃಹತ್ ದೇಶಕ್ಕೆ ಆರ್ಥಿಕ ಹಿಂಜರಿತದಷ್ಟೇ ಕೆಟ್ಟ ಪರಿಣಾಮ ಉಂಟುಮಾಡುತ್ತದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ.

ಈಗಲಂತೂ ನಮ್ಮ ಆರ್ಥಿಕ ಪರಿಸ್ಥಿತಿ ಹಿಂಜರಿಕೆಗೆ ಹತ್ತಿರವಿರುವಷ್ಟು ಗಂಭೀರವಾಗಿದೆ ಎಂಬುದು ಒಂದೆರಡು ಮುಖ್ಯ ಅಂಶಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಮೊದಲನೆಯದಾಗಿ, ತಯಾರಿಕಾ ಕ್ಷೇತ್ರ (Manufacturing sector) ಹೋದ ವರ್ಷದ (2018-19) ಎರಡನೇ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷ -1% ಬೆಳವಣಿಗೆ ತೋರಿಸಿದೆ. ಅಂದರೆ ಶೇ ಒಂದರಷ್ಟು ಬೆಳವಣಿಗೆ ಇಳಿಮುಖವಾಗಿದ್ದು (Negative growth) ಈ ವಲಯ ಹಿಂಜರಿತವನ್ನು ತೋರಿಸುತ್ತಿದೆ. ತಯಾರಿಕಾ ಕ್ಷೇತ್ರ ಒಟ್ಟು ಕೈಗಾರಿಕಾ ವಲಯದ ಪ್ರಮುಖ ಭಾಗವಾಗಿದ್ದು ಇದರ ನೆಗೆಟಿವ್ ಗ್ರೋಥ್‍ನಿಂದಾಗಿಯೇ ಕೈಗಾರಿಕಾ ಕ್ಷೇತ್ರ ಒಟ್ಟಾರೆಯಾಗಿ ಈಗ ಕೇವಲ 0.52% ರಷ್ಟು ಮಾತ್ರ ಬೆಳವಣಿಗೆ ದಾಖಲಿಸಿದೆ.

ಜೊತೆಗೆ ತಯಾರಿಕಾ ಕ್ಷೇತ್ರ ದೇಶದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕ್ಷೇತ್ರವೂ ಆಗಿದ್ದು ಇಲ್ಲಿಯ ಹಿಂಜರಿತ ಮತ್ತಷ್ಟು ಉದ್ಯೋಗ ನಷ್ಟಕ್ಕೆ ಎಡೆಮಾಡಿಕೊಡಲಿದೆ. ಇದರಿಂದಾಗಿ ಇಡೀ ದೇಶದಲ್ಲಿ ಮತ್ತಷ್ಟು ನಿರುದ್ಯೋಗ, ಮತ್ತಷ್ಟು ಇಳಿಮುಖವಾಗುವ ಗ್ರಾಹಕ ಬೇಡಿಕೆ ಮತ್ತು ಅದರಿಂದಾಗಿ ಮತ್ತಷ್ಟು ಆರ್ಥಿಕ ಹಿಂಜರಿಕೆ. ಹೀಗೆ, ಈಗಿನ ಆರ್ಥಿಕ ಅಭಿವೃದ್ಧಿ ಇಳಿಕೆ ಆರ್ಥಿಕ ಹಿಂಜರಿತವಾಗುವ ಲಕ್ಷಣಗಳು ಇಲ್ಲಿ ಕಾಣಿಸುತ್ತಿವೆ.

ಇನ್ನು, ಈಗಿನ ಒಟ್ಟು ಜಿಡಿಪಿಯ 4.5% ನಲ್ಲಿ ಸರ್ಕಾರದ ವೆಚ್ಚವನ್ನು (Government expenditure) ಕಳೆದು ನೋಡಿದರೆ ಕಂಡುಬರುವ ಜಿಡಿಪಿ ಬೆಳವಣಿಗೆ ದರ ಕೇವಲ 3%. ಉಳಿದ ಸರ್ಕಾರೇತರ ಜಿಡಿಪಿಯಲ್ಲಿ ಖಾಸಗಿ ಬಳಕೆಯ ವೆಚ್ಚ (private consumption expenditure), ಖಾಸಗಿ ಬಂಡವಾಳ (private investment ) ಮತ್ತು ಒಟ್ಟು ರಫ್ತು (Net exports) ಬರುತ್ತವೆ.

ಈ ಸರ್ಕಾರೇತರ ಜಿಡಿಪಿಯ ಭಾಗದ ಬೆಳವಣಿಗೆ ಈ ಎರಡನೇ ತ್ರೈಮಾಸಿಕದಲ್ಲಿ ಕೇವಲ 3% ಇದೆ. ಯಾವಾಗಲೂ ದೇಶದ ಜಿಡಿಪಿಯಲ್ಲಿ ಸರ್ಕಾರೇತರ ಜಿಡಿಪಿಯ ಪಾಲು ಶೇ 87 ರಿಂದ ಶೇ 92 ರಷ್ಟಿರುತ್ತದೆ. ಈ ತ್ರೈಮಾಸಿಕದಲ್ಲಿ ಇದರ ಪಾಲು ಶೇ 87 ರಷ್ಟಿದೆ.

ಅಂದರೆ, ದೇಶದ ಜಿಡಿಪಿಯಲ್ಲಿ ಶೇ 87 ರಷ್ಟಿರುವ ಸರ್ಕಾರೇತರ ಜಿಡಿಪಿ ಕೇವಲ 3% ರಷ್ಟು ಮಾತ್ರ ಬೆಳವಣಿಗೆಯಾಗಿದೆ ಎಂದರೆ, ದೇಶದ ಆರ್ಥಿಕ ಸ್ಥಿತಿಯ ಗಂಭೀರತೆಯನ್ನು ನಾವು ಅರ್ಥ ಮಾಡಿಕೊಳ್ಳಬಹುದು.

ತಯಾರಿಕಾ ಕ್ಷೇತ್ರದ ನಕಾರಾತ್ಮಕ ಬೆಳವಣಿಗೆ ಮತ್ತು ಉಳಿದೆಲ್ಲ ಕ್ಷೇತ್ರಗಳ ಕನಿಷ್ಟ ಬೆಳವಣಿಗೆ ಮೇಲಿನ ಅಂಶವನ್ನು ಸ್ಪಷ್ಟಪಡಿಸುತ್ತಿವೆ.

ಅದೇ ಸರ್ಕಾರೀ ವೆಚ್ಚ ಈ ಆರ್ಥಿಕ ವರ್ಷದಲ್ಲಿ 12.3% ವೇಗದಲ್ಲಿ ಬೆಳೆದಿದೆ. ಇದರ ಕೊಡುಗೆಯ ಫಲವಾಗಿಯೇ ಜಿಡಿಪಿ 4.5% ರಷ್ಟಾದರೂ ಇದೆ. ಆದರೆ ಈ ಸರ್ಕಾರೀ ವೆಚ್ಚ ಆಡಳಿತ, ರಕ್ಷಣೆ ಮತ್ತು ಇತರ ಕೆಲವು ಸೇವೆಗಳಿಗೆ ಮಾತ್ರ ಹಂಚಲ್ಪಟ್ಟಿರುವುದರಿಂದ ಜನಸಾಮಾನ್ಯರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವಲ್ಲಿ ಸೋತಿದೆ.

ಇದೇ ಸರ್ಕಾರೀ ವೆಚ್ಚವು ಗ್ರಾಮೀಣ ಉದ್ಯೋಗ ಖಾತ್ರಿ ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯತ್ತ ಕಡೆ ಗಮನ ಕೇಂದ್ರೀಕರಿಸಿದ್ದರೆ ಜನಗಳ ಕೈಯಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿ ಆರ್ಥಿಕ ಮುಂಚಲನೆ ಸಾಧ್ಯವಾಗುತ್ತಿತ್ತು.

ಜೊತೆಗೆ ಬಂಡವಾಳ ಹೂಡಿಕೆಯ ವೇಗವು ಕೇವಲ 1.02% ರಷ್ಟಿದ್ದು ಇದು ಆರ್ಥಿಕ ಹಿಂಜರಿಕೆಯಿಂದ ಪಾರುಮಾಡುವುದಕ್ಕಾಗಲೀ ಮತ್ತು ಉದ್ಯೋಗ ಸೃಷ್ಟಿಗಾಗಲೀ ಏನೇನೂ ಸಾಲದೆನಿಸಿದೆ.ಒಟ್ಟಾರೆಯಾಗಿ, ದೇಶ ತಾಂತ್ರಿಕವಾಗಿ ಆರ್ಥಿಕ ಹಿಂಜರಿತಕ್ಕೆ ಒಳಗಾಗದೆ ಇದ್ದರೂ, ವಲಯಾವಾರು ಪರಿಸ್ಥಿತಿಯನ್ನು ಗಮನಿಸಿದಾಗ ಅಂತಹ ಹಿಂಜರಿತದಷ್ಟೇ ಸ್ಥಿತಿ ಗಂಭೀರವಾಗಿದೆ.ಆದರೆ, ಕೇಂದ್ರ ಸರ್ಕಾರ ಇನ್ನೂ ಕೂಡ ನಮ್ಮ ಆರ್ಥಿಕತೆಯ ಗಂಭೀರತೆಯನ್ನು ಗುರುತಿಸುವ ಕೆಲಸವನ್ನೇ ಮಾಡದಿರುವುದರಿಂದ, ಇದಕ್ಕೆ ತಕ್ಕ ಪರಿಹಾರಗಳನ್ನು ಹುಡುಕುವ ಕೆಲಸವೂ ಸರ್ಕಾರದ ಕೈಯಲ್ಲಿ ಆಗುತ್ತಿಲ್ಲ.ಇದರಿಂದಾಗಿ, ಮುಂಬರುವ ದಿನಗಳು ಮತ್ತಷ್ಟು ನಿರುದ್ಯೋಗದ, ಬಡತನದ ದಿನಗಳಾಗಲಿವೆ ಎಂದೇ ಅನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...