Homeಮುಖಪುಟಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ, ಪ್ರತಿ ಹತ್ತು ಲಕ್ಷಕ್ಕೆ 83 ಕೊರೊನಾ ಸಾವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

2020ರ GDP ಬೆಳವಣಿಗೆಯಲ್ಲಿ ಏಷ್ಯಾ ರಾಷ್ಟ್ರಗಳಲ್ಲಿಯೇ ಭಾರತದ ಸಾಧನೆ ತೀರಾ ಕಳೆಪೆ ಎಂದು ಐಎಂಎಫ್ ಅಂದಾಜಿಸಿದೆ. -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ ಬಾಂಗ್ಲಾದೇಶ 3.9%, ಚೀನಾ 1.8%, ಮತ್ತು ವಿಯೆಟ್ನಾಂ 1.6% ಮೂಲಕ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿವೆ.

ಇದೇ ಸಂದರ್ಭದಲ್ಲಿ ಕೋವಿಡ್ ಸಾವುಗಳ ವಿಷಯದಲ್ಲಿ ಏಷ್ಯಾ ಖಂಡದಲ್ಲಿಯೇ ಭಾರತ ಅಗ್ರಸ್ಥಾನ ಪಡೆದಿದೆ. ಪ್ರತಿ 10 ಲಕ್ಷ ಜನರಿಗೆ ಭಾರತದಲ್ಲಿ 83 ಮಂದಿ ಕೋವಿಡ್‌ನಿಂದಾಗಿ ಮರಣ ಹೊಂದಿದ್ದಾರೆ. ಕೋವಿಡ್ ಸಾವುಗಳ ವಿಷಯದಲ್ಲಿ ವಿಯೆಟ್ನಾಂ ಪ್ರತಿ 10 ಲಕ್ಷ ಜನರಿಗೆ 0.4, ಶ್ರೀಲಂಕ 0.6 ಮತ್ತು ಥೈಲೈಂಡ್ 0.8 ರಷ್ಟು ಕಡಿಮೆ ಕೊರೊನಾ ಸಾವು ವರದಿ ಮಾಡುವ ಮೂಲಕ  ಮೆಚ್ಚುಗೆಗೆ ಪಾತ್ರವಾಗಿವೆ.

ಭಾರತದ GDP ಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ ಅಸಮರ್ಪಕ ಆರ್ಥಿಕ ನೀತಿಗಳ ಕಾರಣ ಎಂದು ಹಲವು ಅರ್ಥಶಾಸ್ತ್ರಜ್ಞರು ಆರೋಪಿಸಿದ್ದಾರೆ. ಹಲವು ಗಾರ್ಮೆಂಟ್ ಉದ್ದಿಮೆಗಳು ಭಾರತ ಮತ್ತು ಚೀನಾ ತೊರೆದು ಬಾಂಗ್ಲಾದೇಶಕ್ಕೆ ಹೋಗುತ್ತಿವೆ ಹಾಗಾಗಿ ಅದು ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿಯಲ್ಲಿ ಜಪಾನ್ ಕಂಪನಿಗಳು ಥೈಲೈಂಡ್‌ನಲ್ಲಿ ಹೂಡಿಕೆ ಮಾಡುತ್ತಿವೆ. ಉತ್ಪಾದನಾ ಕ್ಷೇತ್ರದಲ್ಲಿ ವಿಯೆಟ್ನಾಂ ದಾಪುಗಾಲಿಡುತ್ತಿದೆ. ಹಾಗಾಗಿ ಅವುಗಳು ಆರ್ಥಿಕ ಪ್ರಗತಿ ಹೊಂದಿವೆ ಎನ್ನಲಾಗುತ್ತಿದೆ.

“ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸುವುದು ಮತ್ತು ಹೆಚ್ಚು ಜನರಿಗೆ ಬೇಗನೆ ಸೋಂಕು ಹರುಡುವುದು ಹೇಗೆ ಎಂದು ನರೇಂದ್ರ ಮೋದಿ ತೋರಿಸಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ತಲಾವಾರು GDP ಯಲ್ಲಿಯೂ ಸಹ ಬಾಂಗ್ಲಾದೇಶವನ್ನು ಭಾರತವನ್ನು ಹಿಂದಿಕ್ಕಲಿದೆ ಎಂದು ಐಎಂಎಫ್ ತಿಳಿಸಿತ್ತು. 2020ರ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 107 ದೇಶಗಳಲ್ಲಿ ಭಾರತವು 94 ನೇ ಸ್ಥಾಣ ಪಡೆದು ಕಳಪೆ ಪ್ರದರ್ಶನ ನೀಡಿತ್ತು.

ಈ ಎಲ್ಲಾ ಸೂಚನೆಗಳು ಭಾರತವು ತೀವ್ರ ಆರ್ಥಿಕ ಕುಸಿತ ಮತ್ತು ಅಪಾಯಕಾರಿ ಸ್ಥಿತಿಗೆ ತಲುಪುತ್ತಿದೆ. ಭಾರತದ ಆರ್ಥಿಕ ನೀತಿಗಳು ಬೃಹತ್ ಪ್ರಮಾಣದ ಉದ್ಯೋಗ ನಷ್ಟಕ್ಕೆ ಕಾರಣವಾಗಿರುವುದನ್ನು ಈಗಾಗಲೇ ನೋಡಿದ್ದೇವೆ. ಕೊರಾನಾ ಸಾಂಕ್ರಾಮಿಕ ಗಾಯದ ಮೇಲೆ ಬರೆ ಎಳೆದಿದೆ. ಆದರೆ ಇದನ್ನು ಆಳುವ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಪರಿಹಾರದ ಮಾರ್ಗಗಳು ಕಾಣುತ್ತಿಲ್ಲ. ಭವಿಷ್ಯದಲ್ಲಿ ಭಾರತವು ಬೃಹತ್ ಸಂಕಷ್ಟ ಎದುರಿಸುವುದಂತೂ ಖಚಿತ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...