Homeಮುಖಪುಟಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ, ಪ್ರತಿ ಹತ್ತು ಲಕ್ಷಕ್ಕೆ 83 ಕೊರೊನಾ ಸಾವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

2020ರ GDP ಬೆಳವಣಿಗೆಯಲ್ಲಿ ಏಷ್ಯಾ ರಾಷ್ಟ್ರಗಳಲ್ಲಿಯೇ ಭಾರತದ ಸಾಧನೆ ತೀರಾ ಕಳೆಪೆ ಎಂದು ಐಎಂಎಫ್ ಅಂದಾಜಿಸಿದೆ. -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ ಬಾಂಗ್ಲಾದೇಶ 3.9%, ಚೀನಾ 1.8%, ಮತ್ತು ವಿಯೆಟ್ನಾಂ 1.6% ಮೂಲಕ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿವೆ.

ಇದೇ ಸಂದರ್ಭದಲ್ಲಿ ಕೋವಿಡ್ ಸಾವುಗಳ ವಿಷಯದಲ್ಲಿ ಏಷ್ಯಾ ಖಂಡದಲ್ಲಿಯೇ ಭಾರತ ಅಗ್ರಸ್ಥಾನ ಪಡೆದಿದೆ. ಪ್ರತಿ 10 ಲಕ್ಷ ಜನರಿಗೆ ಭಾರತದಲ್ಲಿ 83 ಮಂದಿ ಕೋವಿಡ್‌ನಿಂದಾಗಿ ಮರಣ ಹೊಂದಿದ್ದಾರೆ. ಕೋವಿಡ್ ಸಾವುಗಳ ವಿಷಯದಲ್ಲಿ ವಿಯೆಟ್ನಾಂ ಪ್ರತಿ 10 ಲಕ್ಷ ಜನರಿಗೆ 0.4, ಶ್ರೀಲಂಕ 0.6 ಮತ್ತು ಥೈಲೈಂಡ್ 0.8 ರಷ್ಟು ಕಡಿಮೆ ಕೊರೊನಾ ಸಾವು ವರದಿ ಮಾಡುವ ಮೂಲಕ  ಮೆಚ್ಚುಗೆಗೆ ಪಾತ್ರವಾಗಿವೆ.

ಭಾರತದ GDP ಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ ಅಸಮರ್ಪಕ ಆರ್ಥಿಕ ನೀತಿಗಳ ಕಾರಣ ಎಂದು ಹಲವು ಅರ್ಥಶಾಸ್ತ್ರಜ್ಞರು ಆರೋಪಿಸಿದ್ದಾರೆ. ಹಲವು ಗಾರ್ಮೆಂಟ್ ಉದ್ದಿಮೆಗಳು ಭಾರತ ಮತ್ತು ಚೀನಾ ತೊರೆದು ಬಾಂಗ್ಲಾದೇಶಕ್ಕೆ ಹೋಗುತ್ತಿವೆ ಹಾಗಾಗಿ ಅದು ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿಯಲ್ಲಿ ಜಪಾನ್ ಕಂಪನಿಗಳು ಥೈಲೈಂಡ್‌ನಲ್ಲಿ ಹೂಡಿಕೆ ಮಾಡುತ್ತಿವೆ. ಉತ್ಪಾದನಾ ಕ್ಷೇತ್ರದಲ್ಲಿ ವಿಯೆಟ್ನಾಂ ದಾಪುಗಾಲಿಡುತ್ತಿದೆ. ಹಾಗಾಗಿ ಅವುಗಳು ಆರ್ಥಿಕ ಪ್ರಗತಿ ಹೊಂದಿವೆ ಎನ್ನಲಾಗುತ್ತಿದೆ.

“ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸುವುದು ಮತ್ತು ಹೆಚ್ಚು ಜನರಿಗೆ ಬೇಗನೆ ಸೋಂಕು ಹರುಡುವುದು ಹೇಗೆ ಎಂದು ನರೇಂದ್ರ ಮೋದಿ ತೋರಿಸಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ತಲಾವಾರು GDP ಯಲ್ಲಿಯೂ ಸಹ ಬಾಂಗ್ಲಾದೇಶವನ್ನು ಭಾರತವನ್ನು ಹಿಂದಿಕ್ಕಲಿದೆ ಎಂದು ಐಎಂಎಫ್ ತಿಳಿಸಿತ್ತು. 2020ರ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 107 ದೇಶಗಳಲ್ಲಿ ಭಾರತವು 94 ನೇ ಸ್ಥಾಣ ಪಡೆದು ಕಳಪೆ ಪ್ರದರ್ಶನ ನೀಡಿತ್ತು.

ಈ ಎಲ್ಲಾ ಸೂಚನೆಗಳು ಭಾರತವು ತೀವ್ರ ಆರ್ಥಿಕ ಕುಸಿತ ಮತ್ತು ಅಪಾಯಕಾರಿ ಸ್ಥಿತಿಗೆ ತಲುಪುತ್ತಿದೆ. ಭಾರತದ ಆರ್ಥಿಕ ನೀತಿಗಳು ಬೃಹತ್ ಪ್ರಮಾಣದ ಉದ್ಯೋಗ ನಷ್ಟಕ್ಕೆ ಕಾರಣವಾಗಿರುವುದನ್ನು ಈಗಾಗಲೇ ನೋಡಿದ್ದೇವೆ. ಕೊರಾನಾ ಸಾಂಕ್ರಾಮಿಕ ಗಾಯದ ಮೇಲೆ ಬರೆ ಎಳೆದಿದೆ. ಆದರೆ ಇದನ್ನು ಆಳುವ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಪರಿಹಾರದ ಮಾರ್ಗಗಳು ಕಾಣುತ್ತಿಲ್ಲ. ಭವಿಷ್ಯದಲ್ಲಿ ಭಾರತವು ಬೃಹತ್ ಸಂಕಷ್ಟ ಎದುರಿಸುವುದಂತೂ ಖಚಿತ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...