Homeಮುಖಪುಟಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ, ಪ್ರತಿ ಹತ್ತು ಲಕ್ಷಕ್ಕೆ 83 ಕೊರೊನಾ ಸಾವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

2020ರ GDP ಬೆಳವಣಿಗೆಯಲ್ಲಿ ಏಷ್ಯಾ ರಾಷ್ಟ್ರಗಳಲ್ಲಿಯೇ ಭಾರತದ ಸಾಧನೆ ತೀರಾ ಕಳೆಪೆ ಎಂದು ಐಎಂಎಫ್ ಅಂದಾಜಿಸಿದೆ. -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ ಬಾಂಗ್ಲಾದೇಶ 3.9%, ಚೀನಾ 1.8%, ಮತ್ತು ವಿಯೆಟ್ನಾಂ 1.6% ಮೂಲಕ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿವೆ.

ಇದೇ ಸಂದರ್ಭದಲ್ಲಿ ಕೋವಿಡ್ ಸಾವುಗಳ ವಿಷಯದಲ್ಲಿ ಏಷ್ಯಾ ಖಂಡದಲ್ಲಿಯೇ ಭಾರತ ಅಗ್ರಸ್ಥಾನ ಪಡೆದಿದೆ. ಪ್ರತಿ 10 ಲಕ್ಷ ಜನರಿಗೆ ಭಾರತದಲ್ಲಿ 83 ಮಂದಿ ಕೋವಿಡ್‌ನಿಂದಾಗಿ ಮರಣ ಹೊಂದಿದ್ದಾರೆ. ಕೋವಿಡ್ ಸಾವುಗಳ ವಿಷಯದಲ್ಲಿ ವಿಯೆಟ್ನಾಂ ಪ್ರತಿ 10 ಲಕ್ಷ ಜನರಿಗೆ 0.4, ಶ್ರೀಲಂಕ 0.6 ಮತ್ತು ಥೈಲೈಂಡ್ 0.8 ರಷ್ಟು ಕಡಿಮೆ ಕೊರೊನಾ ಸಾವು ವರದಿ ಮಾಡುವ ಮೂಲಕ  ಮೆಚ್ಚುಗೆಗೆ ಪಾತ್ರವಾಗಿವೆ.

ಭಾರತದ GDP ಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ ಅಸಮರ್ಪಕ ಆರ್ಥಿಕ ನೀತಿಗಳ ಕಾರಣ ಎಂದು ಹಲವು ಅರ್ಥಶಾಸ್ತ್ರಜ್ಞರು ಆರೋಪಿಸಿದ್ದಾರೆ. ಹಲವು ಗಾರ್ಮೆಂಟ್ ಉದ್ದಿಮೆಗಳು ಭಾರತ ಮತ್ತು ಚೀನಾ ತೊರೆದು ಬಾಂಗ್ಲಾದೇಶಕ್ಕೆ ಹೋಗುತ್ತಿವೆ ಹಾಗಾಗಿ ಅದು ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿಯಲ್ಲಿ ಜಪಾನ್ ಕಂಪನಿಗಳು ಥೈಲೈಂಡ್‌ನಲ್ಲಿ ಹೂಡಿಕೆ ಮಾಡುತ್ತಿವೆ. ಉತ್ಪಾದನಾ ಕ್ಷೇತ್ರದಲ್ಲಿ ವಿಯೆಟ್ನಾಂ ದಾಪುಗಾಲಿಡುತ್ತಿದೆ. ಹಾಗಾಗಿ ಅವುಗಳು ಆರ್ಥಿಕ ಪ್ರಗತಿ ಹೊಂದಿವೆ ಎನ್ನಲಾಗುತ್ತಿದೆ.

“ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸುವುದು ಮತ್ತು ಹೆಚ್ಚು ಜನರಿಗೆ ಬೇಗನೆ ಸೋಂಕು ಹರುಡುವುದು ಹೇಗೆ ಎಂದು ನರೇಂದ್ರ ಮೋದಿ ತೋರಿಸಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ತಲಾವಾರು GDP ಯಲ್ಲಿಯೂ ಸಹ ಬಾಂಗ್ಲಾದೇಶವನ್ನು ಭಾರತವನ್ನು ಹಿಂದಿಕ್ಕಲಿದೆ ಎಂದು ಐಎಂಎಫ್ ತಿಳಿಸಿತ್ತು. 2020ರ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 107 ದೇಶಗಳಲ್ಲಿ ಭಾರತವು 94 ನೇ ಸ್ಥಾಣ ಪಡೆದು ಕಳಪೆ ಪ್ರದರ್ಶನ ನೀಡಿತ್ತು.

ಈ ಎಲ್ಲಾ ಸೂಚನೆಗಳು ಭಾರತವು ತೀವ್ರ ಆರ್ಥಿಕ ಕುಸಿತ ಮತ್ತು ಅಪಾಯಕಾರಿ ಸ್ಥಿತಿಗೆ ತಲುಪುತ್ತಿದೆ. ಭಾರತದ ಆರ್ಥಿಕ ನೀತಿಗಳು ಬೃಹತ್ ಪ್ರಮಾಣದ ಉದ್ಯೋಗ ನಷ್ಟಕ್ಕೆ ಕಾರಣವಾಗಿರುವುದನ್ನು ಈಗಾಗಲೇ ನೋಡಿದ್ದೇವೆ. ಕೊರಾನಾ ಸಾಂಕ್ರಾಮಿಕ ಗಾಯದ ಮೇಲೆ ಬರೆ ಎಳೆದಿದೆ. ಆದರೆ ಇದನ್ನು ಆಳುವ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಪರಿಹಾರದ ಮಾರ್ಗಗಳು ಕಾಣುತ್ತಿಲ್ಲ. ಭವಿಷ್ಯದಲ್ಲಿ ಭಾರತವು ಬೃಹತ್ ಸಂಕಷ್ಟ ಎದುರಿಸುವುದಂತೂ ಖಚಿತ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...