Homeಮುಖಪುಟಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ, ಪ್ರತಿ ಹತ್ತು ಲಕ್ಷಕ್ಕೆ 83 ಕೊರೊನಾ ಸಾವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

2020ರ GDP ಬೆಳವಣಿಗೆಯಲ್ಲಿ ಏಷ್ಯಾ ರಾಷ್ಟ್ರಗಳಲ್ಲಿಯೇ ಭಾರತದ ಸಾಧನೆ ತೀರಾ ಕಳೆಪೆ ಎಂದು ಐಎಂಎಫ್ ಅಂದಾಜಿಸಿದೆ. -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ ಬಾಂಗ್ಲಾದೇಶ 3.9%, ಚೀನಾ 1.8%, ಮತ್ತು ವಿಯೆಟ್ನಾಂ 1.6% ಮೂಲಕ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿವೆ.

ಇದೇ ಸಂದರ್ಭದಲ್ಲಿ ಕೋವಿಡ್ ಸಾವುಗಳ ವಿಷಯದಲ್ಲಿ ಏಷ್ಯಾ ಖಂಡದಲ್ಲಿಯೇ ಭಾರತ ಅಗ್ರಸ್ಥಾನ ಪಡೆದಿದೆ. ಪ್ರತಿ 10 ಲಕ್ಷ ಜನರಿಗೆ ಭಾರತದಲ್ಲಿ 83 ಮಂದಿ ಕೋವಿಡ್‌ನಿಂದಾಗಿ ಮರಣ ಹೊಂದಿದ್ದಾರೆ. ಕೋವಿಡ್ ಸಾವುಗಳ ವಿಷಯದಲ್ಲಿ ವಿಯೆಟ್ನಾಂ ಪ್ರತಿ 10 ಲಕ್ಷ ಜನರಿಗೆ 0.4, ಶ್ರೀಲಂಕ 0.6 ಮತ್ತು ಥೈಲೈಂಡ್ 0.8 ರಷ್ಟು ಕಡಿಮೆ ಕೊರೊನಾ ಸಾವು ವರದಿ ಮಾಡುವ ಮೂಲಕ  ಮೆಚ್ಚುಗೆಗೆ ಪಾತ್ರವಾಗಿವೆ.

ಭಾರತದ GDP ಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ ಅಸಮರ್ಪಕ ಆರ್ಥಿಕ ನೀತಿಗಳ ಕಾರಣ ಎಂದು ಹಲವು ಅರ್ಥಶಾಸ್ತ್ರಜ್ಞರು ಆರೋಪಿಸಿದ್ದಾರೆ. ಹಲವು ಗಾರ್ಮೆಂಟ್ ಉದ್ದಿಮೆಗಳು ಭಾರತ ಮತ್ತು ಚೀನಾ ತೊರೆದು ಬಾಂಗ್ಲಾದೇಶಕ್ಕೆ ಹೋಗುತ್ತಿವೆ ಹಾಗಾಗಿ ಅದು ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿಯಲ್ಲಿ ಜಪಾನ್ ಕಂಪನಿಗಳು ಥೈಲೈಂಡ್‌ನಲ್ಲಿ ಹೂಡಿಕೆ ಮಾಡುತ್ತಿವೆ. ಉತ್ಪಾದನಾ ಕ್ಷೇತ್ರದಲ್ಲಿ ವಿಯೆಟ್ನಾಂ ದಾಪುಗಾಲಿಡುತ್ತಿದೆ. ಹಾಗಾಗಿ ಅವುಗಳು ಆರ್ಥಿಕ ಪ್ರಗತಿ ಹೊಂದಿವೆ ಎನ್ನಲಾಗುತ್ತಿದೆ.

“ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸುವುದು ಮತ್ತು ಹೆಚ್ಚು ಜನರಿಗೆ ಬೇಗನೆ ಸೋಂಕು ಹರುಡುವುದು ಹೇಗೆ ಎಂದು ನರೇಂದ್ರ ಮೋದಿ ತೋರಿಸಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ತಲಾವಾರು GDP ಯಲ್ಲಿಯೂ ಸಹ ಬಾಂಗ್ಲಾದೇಶವನ್ನು ಭಾರತವನ್ನು ಹಿಂದಿಕ್ಕಲಿದೆ ಎಂದು ಐಎಂಎಫ್ ತಿಳಿಸಿತ್ತು. 2020ರ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 107 ದೇಶಗಳಲ್ಲಿ ಭಾರತವು 94 ನೇ ಸ್ಥಾಣ ಪಡೆದು ಕಳಪೆ ಪ್ರದರ್ಶನ ನೀಡಿತ್ತು.

ಈ ಎಲ್ಲಾ ಸೂಚನೆಗಳು ಭಾರತವು ತೀವ್ರ ಆರ್ಥಿಕ ಕುಸಿತ ಮತ್ತು ಅಪಾಯಕಾರಿ ಸ್ಥಿತಿಗೆ ತಲುಪುತ್ತಿದೆ. ಭಾರತದ ಆರ್ಥಿಕ ನೀತಿಗಳು ಬೃಹತ್ ಪ್ರಮಾಣದ ಉದ್ಯೋಗ ನಷ್ಟಕ್ಕೆ ಕಾರಣವಾಗಿರುವುದನ್ನು ಈಗಾಗಲೇ ನೋಡಿದ್ದೇವೆ. ಕೊರಾನಾ ಸಾಂಕ್ರಾಮಿಕ ಗಾಯದ ಮೇಲೆ ಬರೆ ಎಳೆದಿದೆ. ಆದರೆ ಇದನ್ನು ಆಳುವ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಪರಿಹಾರದ ಮಾರ್ಗಗಳು ಕಾಣುತ್ತಿಲ್ಲ. ಭವಿಷ್ಯದಲ್ಲಿ ಭಾರತವು ಬೃಹತ್ ಸಂಕಷ್ಟ ಎದುರಿಸುವುದಂತೂ ಖಚಿತ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...