Homeಎಕಾನಮಿಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಜಿಡಿಪಿ ಕುಸಿತ: ನರೇಂದ್ರ ಮೋದಿ ಸರ್ಕಾರದ ಅನೀತಿಗಳೇ ಕಾರಣ ಎಂದ ಕಾಂಗ್ರೆಸ್ ನಾಯಕರು

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ.

- Advertisement -
- Advertisement -

ಭಾರತದ ಜಿಡಿಪಿ ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. -23.9 ರಷ್ಟು ಗಣನೀಯ ಇಳಿಕೆಯಾಗಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ಧರಾಮಯ್ಯ ಸೇರಿದಂತೆ ಹಲವು ನಾಯಕರು ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಸಂಘಟಿತ ವಲಯದ ಮೇಲೆ ಆಕ್ರಮಣ ಮಾಡುವ ಮೂಲಕ ಸರ್ಕಾರವು ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ರಾಹುಲ್ ಗಾಂಧಿ ನಿನ್ನೆ ಟ್ವೀಟ್ ಮಾಡಿರುವ ವೀಡಿಯೋವೊಂದರಲ್ಲಿ ಹೇಳಿದ್ದು, ತಜ್ಞರು ಮತ್ತು ಇತರರ ಸೂಚನೆಗಳನ್ನು ನಿರ್ಲಕ್ಷಿಸಿರುವುದು ದುರದೃಷ್ಟಕರ ಎಂದು ಹೇಳಿದ ನಂತರ, ಇಂದು ಮತ್ತೊಂದು ಟ್ವೀಟ್ ಮಾಡಿ ‘ಮೋದಿ ನಿರ್ಮಿಸಿದ ವಿಪತ್ತುಗಳಿಂದ ಭಾರತ ತತ್ತರಿಸುತ್ತಿದೆ’ ಎಂದಿದ್ದಾರೆ.

“1. ಐತಿಹಾಸಿಕ ಜಿಡಿಪಿ ಕಡಿತ -23.9%, 2. 45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗ, 3. 12 ಕೋಟಿ ಉದ್ಯೋಗ ನಷ್ಟ, 4. ರಾಜ್ಯಗಳಿಗೆ ಜಿಎಸ್‌ಟಿ ಬಾಕಿ ಪಾವತಿಸುವುದಿಲ್ಲ, 5. ಜಾಗತಿಕವಾಗಿ ಅತಿ ಹೆಚ್ಚು ಕೊರೊನಾ, 6.ನಮ್ಮ ಗಡಿಯಲ್ಲಿ ಬೇರೆಯವರ ಅತಿಕ್ರಮಣ” ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿ, “ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ. ಆರ್‌ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರವರೆಗೆ ಖ್ಯಾತ ಆರ್ಥಿಕ ತಜ್ಞರೆಲ್ಲರೂ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದರು. ಆಗಲೂ, ಈಗಲೂ ಸರ್ಕಾರ ಕುರುಡು-ಕಿವುಡು” ಎಂದು ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ನರೇಂದ್ರ ಮೋದಿಯವರು ಹೊರಟಿದ್ದಾರೆ. ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಅವರು, ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ. ಈಗ ರೋದಿಸಿ ಏನು ಫಲ?” ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿಯಾದ ಈಶ್ವರ್ ಖಂಡ್ರೆ, “ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಙರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಿದ್ದು ದೇಶದಲ್ಲಿ ಎಲ್ಲವು ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೇ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನ ಕತ್ತಲಲ್ಲಿಡುತ್ತಿರಿ ಪ್ರಧಾನಿಗಳೇ..??” ಎಂದು ಟ್ವೀಟ್ ಮಾಡಿದ್ದಾರೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿಗೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ -23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.


ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...