Homeಎಕಾನಮಿಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

ಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

"ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ" ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ತತ್ತರಿಸಿರುವ ಭಾರತದ ಆರ್ಥಿಕತೆಯು ಈ ವರ್ಷ ಶೇಕಡಾ 10.3 ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ನಿರೀಕ್ಷೆಯಿದ್ದು, ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇದು ಅತ್ಯಂತ ಕೆಟ್ಟ ಅಭಿವೃದ್ಧಿ ದರ ಇದಾಗಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

2021ರ ಮಾರ್ಚ್ 31ಕ್ಕೆ ಅಂತ್ಯವಾಗುವ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ 10.3ರಷ್ಟು ಕುಗ್ಗಲಿದ್ದು, ಅಭಿವೃದ್ಧಿಶೀಲ ರಾಷ್ಟ್ರಗಳ ಜಿಡಿಪಿಯಲ್ಲಿ ಇದು ಅತ್ಯಂತ ದೊಡ್ಡ ಇಳಿಕೆಯಾಗಲಿದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಭಾರತ್ ಜಿಡಿಪಿ ಶೇ 1.9ರಷ್ಟು ಅಭಿವೃದ್ಧಿಯಾಗಲಿದೆ ಎಂದು ಏಪ್ರಿಲ್‌ನಲ್ಲಿ IMF ಅಂದಾಜಿಸಿತ್ತು. ಆದರೆ ಜೂನ್‌ನಲ್ಲಿ ಇದನ್ನು ಪರಿಷ್ಕರಿಸಿ, ಜಿಡಿಪಿಯಲ್ಲಿ 4.5ರಷ್ಟು ಕುಸಿತ ಕಾಣಲಿದೆ ಎಂದು ಹೇಳಿತ್ತು. ಆದರೆ ಈಗ 2021ರಲ್ಲಿ ಶೇ 5.2ಕ್ಕೆ ಏರುತ್ತದೆ ಎಂದು ವರದಿ ಹೇಳಿದೆ. 2019 ರಲ್ಲಿ ಭಾರತದ ಬೆಳವಣಿಗೆಯ ದರ ಶೇ 4.2 ರಷ್ಟಿತ್ತು. ಕಳೆದ ವಾರ, ವಿಶ್ವ ಬ್ಯಾಂಕ್ ಭಾರತದ ಜಿಡಿಪಿ ಈ ಹಣಕಾಸು ವರ್ಷದಲ್ಲಿ ಶೇ 9.6 ರಷ್ಟು ಕುಗ್ಗುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಅಮೆರಿಕದ ಆರ್ಥಿಕತೆಯು 2020 ರಲ್ಲಿ ಶೇಕಡಾ 5.8 ರಷ್ಟು ಕುಗ್ಗುತ್ತದೆ ಮತ್ತು ಮುಂದಿನ ವರ್ಷ ಶೇಕಡಾ 3.9 ರಷ್ಟು ಏರಿಕೆಯಾಗಲಿದೆ. ಪ್ರಮುಖ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ, 2020 ರಲ್ಲಿ ಶೇಕಡಾ 1.9 ರಷ್ಟು ಸಕಾರಾತ್ಮಕ ಬೆಳವಣಿಗೆಯನ್ನು ತೋರಿಸಿರುವ ಏಕೈಕ ದೇಶ ಚೀನಾ ಎಂದು IMF ತಿಳಿಸಿದೆ.

“ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ” ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಅಭಿವೃದ್ಧಿಶೀಲ ರಾಷ್ಟ್ರಗಳಾದ ಇಟಲಿ ಮತ್ತು  ಸ್ಪೇನ್ ಬಳಿಕದ ಅತ್ಯಂತ ಬೃಹತ್ ಜಿಡಿಪಿ ಕುಸಿತವನ್ನು ಭಾರತ ದಾಖಲಿಸಲಿದೆ. ಬ್ರಿಕ್ಸ್‌ ಗುಂಪಿನ ರಾಷ್ಟ್ರಗಳಲ್ಲಿ ಬ್ರೆಜಿಲ್‌ನ ಜಿಡಿಪಿ ಶೇ. 5.8, ರಷ್ಯಾದ ಜಿಡಿಪಿ ಶೇ. 4.1, ದ.ಆಫ್ರಿಕಾದ ಜಿಡಿಪಿ ಶೇ. 8ರಷ್ಟು ಕುಸಿತ ಕಾಣಲಿದೆ.

ಪ್ರಸಕ್ತ ವರ್ಷದ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಕೇಂದ್ರ ಸರ್ಕಾರದ ಅಸಮರ್ಪಕ ನೀತಿಗಳಿಂದ ಹಿಡಿದು, ಕೊರೊನಾ ಕಾಲದಲ್ಲಿ ಸರಿಯಾದ ನಿರ್ವಹಣೆ ಮತ್ತು ಮುನ್ನೆಚ್ಚರಿಕೆಯಿಲ್ಲದಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...