Homeಎಕಾನಮಿಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

ಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

"ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ" ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ತತ್ತರಿಸಿರುವ ಭಾರತದ ಆರ್ಥಿಕತೆಯು ಈ ವರ್ಷ ಶೇಕಡಾ 10.3 ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ನಿರೀಕ್ಷೆಯಿದ್ದು, ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇದು ಅತ್ಯಂತ ಕೆಟ್ಟ ಅಭಿವೃದ್ಧಿ ದರ ಇದಾಗಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

2021ರ ಮಾರ್ಚ್ 31ಕ್ಕೆ ಅಂತ್ಯವಾಗುವ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ 10.3ರಷ್ಟು ಕುಗ್ಗಲಿದ್ದು, ಅಭಿವೃದ್ಧಿಶೀಲ ರಾಷ್ಟ್ರಗಳ ಜಿಡಿಪಿಯಲ್ಲಿ ಇದು ಅತ್ಯಂತ ದೊಡ್ಡ ಇಳಿಕೆಯಾಗಲಿದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಭಾರತ್ ಜಿಡಿಪಿ ಶೇ 1.9ರಷ್ಟು ಅಭಿವೃದ್ಧಿಯಾಗಲಿದೆ ಎಂದು ಏಪ್ರಿಲ್‌ನಲ್ಲಿ IMF ಅಂದಾಜಿಸಿತ್ತು. ಆದರೆ ಜೂನ್‌ನಲ್ಲಿ ಇದನ್ನು ಪರಿಷ್ಕರಿಸಿ, ಜಿಡಿಪಿಯಲ್ಲಿ 4.5ರಷ್ಟು ಕುಸಿತ ಕಾಣಲಿದೆ ಎಂದು ಹೇಳಿತ್ತು. ಆದರೆ ಈಗ 2021ರಲ್ಲಿ ಶೇ 5.2ಕ್ಕೆ ಏರುತ್ತದೆ ಎಂದು ವರದಿ ಹೇಳಿದೆ. 2019 ರಲ್ಲಿ ಭಾರತದ ಬೆಳವಣಿಗೆಯ ದರ ಶೇ 4.2 ರಷ್ಟಿತ್ತು. ಕಳೆದ ವಾರ, ವಿಶ್ವ ಬ್ಯಾಂಕ್ ಭಾರತದ ಜಿಡಿಪಿ ಈ ಹಣಕಾಸು ವರ್ಷದಲ್ಲಿ ಶೇ 9.6 ರಷ್ಟು ಕುಗ್ಗುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಅಮೆರಿಕದ ಆರ್ಥಿಕತೆಯು 2020 ರಲ್ಲಿ ಶೇಕಡಾ 5.8 ರಷ್ಟು ಕುಗ್ಗುತ್ತದೆ ಮತ್ತು ಮುಂದಿನ ವರ್ಷ ಶೇಕಡಾ 3.9 ರಷ್ಟು ಏರಿಕೆಯಾಗಲಿದೆ. ಪ್ರಮುಖ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ, 2020 ರಲ್ಲಿ ಶೇಕಡಾ 1.9 ರಷ್ಟು ಸಕಾರಾತ್ಮಕ ಬೆಳವಣಿಗೆಯನ್ನು ತೋರಿಸಿರುವ ಏಕೈಕ ದೇಶ ಚೀನಾ ಎಂದು IMF ತಿಳಿಸಿದೆ.

“ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ” ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಅಭಿವೃದ್ಧಿಶೀಲ ರಾಷ್ಟ್ರಗಳಾದ ಇಟಲಿ ಮತ್ತು  ಸ್ಪೇನ್ ಬಳಿಕದ ಅತ್ಯಂತ ಬೃಹತ್ ಜಿಡಿಪಿ ಕುಸಿತವನ್ನು ಭಾರತ ದಾಖಲಿಸಲಿದೆ. ಬ್ರಿಕ್ಸ್‌ ಗುಂಪಿನ ರಾಷ್ಟ್ರಗಳಲ್ಲಿ ಬ್ರೆಜಿಲ್‌ನ ಜಿಡಿಪಿ ಶೇ. 5.8, ರಷ್ಯಾದ ಜಿಡಿಪಿ ಶೇ. 4.1, ದ.ಆಫ್ರಿಕಾದ ಜಿಡಿಪಿ ಶೇ. 8ರಷ್ಟು ಕುಸಿತ ಕಾಣಲಿದೆ.

ಪ್ರಸಕ್ತ ವರ್ಷದ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಕೇಂದ್ರ ಸರ್ಕಾರದ ಅಸಮರ್ಪಕ ನೀತಿಗಳಿಂದ ಹಿಡಿದು, ಕೊರೊನಾ ಕಾಲದಲ್ಲಿ ಸರಿಯಾದ ನಿರ್ವಹಣೆ ಮತ್ತು ಮುನ್ನೆಚ್ಚರಿಕೆಯಿಲ್ಲದಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...