Homeಎಕಾನಮಿಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

ಈ ವರ್ಷವೂ GDP ಕುಸಿತ; ಸ್ವಾತಂತ್ರ್ಯಾನಂತರದಲ್ಲಿ ಇದು ಅತ್ಯಂತ ಕಳಪೆ ಅಭಿವೃದ್ಧಿ ದರ: IMF

"ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ" ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ತತ್ತರಿಸಿರುವ ಭಾರತದ ಆರ್ಥಿಕತೆಯು ಈ ವರ್ಷ ಶೇಕಡಾ 10.3 ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ನಿರೀಕ್ಷೆಯಿದ್ದು, ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇದು ಅತ್ಯಂತ ಕೆಟ್ಟ ಅಭಿವೃದ್ಧಿ ದರ ಇದಾಗಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

2021ರ ಮಾರ್ಚ್ 31ಕ್ಕೆ ಅಂತ್ಯವಾಗುವ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ 10.3ರಷ್ಟು ಕುಗ್ಗಲಿದ್ದು, ಅಭಿವೃದ್ಧಿಶೀಲ ರಾಷ್ಟ್ರಗಳ ಜಿಡಿಪಿಯಲ್ಲಿ ಇದು ಅತ್ಯಂತ ದೊಡ್ಡ ಇಳಿಕೆಯಾಗಲಿದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಭಾರತ್ ಜಿಡಿಪಿ ಶೇ 1.9ರಷ್ಟು ಅಭಿವೃದ್ಧಿಯಾಗಲಿದೆ ಎಂದು ಏಪ್ರಿಲ್‌ನಲ್ಲಿ IMF ಅಂದಾಜಿಸಿತ್ತು. ಆದರೆ ಜೂನ್‌ನಲ್ಲಿ ಇದನ್ನು ಪರಿಷ್ಕರಿಸಿ, ಜಿಡಿಪಿಯಲ್ಲಿ 4.5ರಷ್ಟು ಕುಸಿತ ಕಾಣಲಿದೆ ಎಂದು ಹೇಳಿತ್ತು. ಆದರೆ ಈಗ 2021ರಲ್ಲಿ ಶೇ 5.2ಕ್ಕೆ ಏರುತ್ತದೆ ಎಂದು ವರದಿ ಹೇಳಿದೆ. 2019 ರಲ್ಲಿ ಭಾರತದ ಬೆಳವಣಿಗೆಯ ದರ ಶೇ 4.2 ರಷ್ಟಿತ್ತು. ಕಳೆದ ವಾರ, ವಿಶ್ವ ಬ್ಯಾಂಕ್ ಭಾರತದ ಜಿಡಿಪಿ ಈ ಹಣಕಾಸು ವರ್ಷದಲ್ಲಿ ಶೇ 9.6 ರಷ್ಟು ಕುಗ್ಗುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಅಮೆರಿಕದ ಆರ್ಥಿಕತೆಯು 2020 ರಲ್ಲಿ ಶೇಕಡಾ 5.8 ರಷ್ಟು ಕುಗ್ಗುತ್ತದೆ ಮತ್ತು ಮುಂದಿನ ವರ್ಷ ಶೇಕಡಾ 3.9 ರಷ್ಟು ಏರಿಕೆಯಾಗಲಿದೆ. ಪ್ರಮುಖ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ, 2020 ರಲ್ಲಿ ಶೇಕಡಾ 1.9 ರಷ್ಟು ಸಕಾರಾತ್ಮಕ ಬೆಳವಣಿಗೆಯನ್ನು ತೋರಿಸಿರುವ ಏಕೈಕ ದೇಶ ಚೀನಾ ಎಂದು IMF ತಿಳಿಸಿದೆ.

“ಭಾರತದ ಪರಿಸ್ಥಿತಿ ಹಿಂದೆಂದಿಗಿಂತಲೂ ತುಂಬಾ ಕೆಟ್ಟದಾಗಿದೆ” ಎಂದು ದಕ್ಷಿಣ ಏಷ್ಯಾದ ವಿಶ್ವಬ್ಯಾಂಕ್ ಮುಖ್ಯ ಅರ್ಥಶಾಸ್ತ್ರಜ್ಞ ಹ್ಯಾನ್ಸ್ ಟಿಮ್ಮರ್ ಕಳೆದ ವಾರ ಕಾನ್ಫರೆನ್ಸ್ ಕರೆಯೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಅಭಿವೃದ್ಧಿಶೀಲ ರಾಷ್ಟ್ರಗಳಾದ ಇಟಲಿ ಮತ್ತು  ಸ್ಪೇನ್ ಬಳಿಕದ ಅತ್ಯಂತ ಬೃಹತ್ ಜಿಡಿಪಿ ಕುಸಿತವನ್ನು ಭಾರತ ದಾಖಲಿಸಲಿದೆ. ಬ್ರಿಕ್ಸ್‌ ಗುಂಪಿನ ರಾಷ್ಟ್ರಗಳಲ್ಲಿ ಬ್ರೆಜಿಲ್‌ನ ಜಿಡಿಪಿ ಶೇ. 5.8, ರಷ್ಯಾದ ಜಿಡಿಪಿ ಶೇ. 4.1, ದ.ಆಫ್ರಿಕಾದ ಜಿಡಿಪಿ ಶೇ. 8ರಷ್ಟು ಕುಸಿತ ಕಾಣಲಿದೆ.

ಪ್ರಸಕ್ತ ವರ್ಷದ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಕೇಂದ್ರ ಸರ್ಕಾರದ ಅಸಮರ್ಪಕ ನೀತಿಗಳಿಂದ ಹಿಡಿದು, ಕೊರೊನಾ ಕಾಲದಲ್ಲಿ ಸರಿಯಾದ ನಿರ್ವಹಣೆ ಮತ್ತು ಮುನ್ನೆಚ್ಚರಿಕೆಯಿಲ್ಲದಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...