Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...