Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...