Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...