Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....