Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...