Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...