Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....