Homeಎಕಾನಮಿಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

ಪಾತಾಳಕ್ಕೆ ಕುಸಿದ ಜಿಡಿಪಿ: ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ

- Advertisement -
- Advertisement -

2019 ರ ಮೊದಲ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ತೀವ್ರ ಕುಸಿತ ಕಂಡಿದ್ದು ಶೇ.5% ಕ್ಕೆ ಇಳಿದಿದೆ. ಇದು ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದ್ದು ಇಂದು ಕೇಂದ್ರ ಸರ್ಕಾರ ಈ ಮಾಹಿತಿ ಹೊರಹಾಕಿದೆ.

ಉತ್ಪಾದನಾ ವಲಯದ ತೀವ್ರ ಕುಸಿತ, ನಿರ್ಮಾಣ ಕ್ಷೇತ್ರದ ಹಿಂಜರಿತ ಜಿಡಿಪಿ ಕುಸಿತಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಈ ನಡುವೆಯೇ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ 10 ರಾಷ್ಟ್ರೀಕೃತ ಬ್ಯಾಂಕುಗಳನ್ನು 4 ಬ್ಯಾಂಕುಗಳಲ್ಲಿ ವಿಲೀನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಆರ್ಥಿಕ ಕುಸಿತ ಕಂಡುಬರುತ್ತಿದ್ದು ಉದ್ಯೋಗ ನಷ್ಟದಿಂದಾಗಿ ಜನ ಹೈರಾಣಾಗುತ್ತಿದ್ದಾರೆ. ಇಂತಹ ದುಸ್ಥಿತಿಯಲ್ಲಿ ಜಿಡಿಪಿ ಕುಸಿತ ಮತ್ತಷ್ಟು ದುಷ್ಪರಿಣಾಮಗಳನ್ನು ಉಂಟುಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತ ಬಹಳಷ್ಟು ಚಿಂತಕರು ಕೇಂದ್ರ ಸರ್ಕಾರದ ನೀತಿಗಳ ಮೇಲೆ ಟೀಕಾಪ್ರಹಾರ ಮಾಡಿದ್ದಾರೆ.

5 ವರ್ಷಗಳಲ್ಲಿ ಕೆಟ್ಟ ಪರಿಸ್ಥಿತಿಗೆ ತಲುಪಿರುವ ಜಿಡಿಪಿ ಬೆಳವಣಿಗೆಯು ಶೇಕಡಾ 5ಕ್ಕೆ ಇಳಿದಿರುವುದನ್ನು ಬಹಿರಂಗಗೊಳಿಸುವ ಒಂದು ಗಂಟೆ ಮೊದಲು ಹಣಕಾಸು ಸಚಿವರು ಮೆಗಾ ಬ್ಯಾಂಕ್ ವಿಲೀನವನ್ನು ಘೋಷಿಸಿದ್ದಾರೆ .. ಅಂದರೆ ಕ್ಲಾಸಿಕ್ ಹೆಡ್‌ಲೈನ್ ನಿರ್ವಹಣೆ ಮಾಡಲು ಮುಂದಾಗಿದ್ದಾರೆ ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವ್ಯಂಗ್ಯವಾಡಿದ್ದಾರೆ.

ನೆನಪಿಡಿ, ಇದು ಕೂಡ ಬಹುಶಃ ತಿದ್ದುಪಡಿ ಮಾಡಿದ, ಸುಳ್ಳಿನಿಂದ ಕೂಡಿದ ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳಾಗಿವೆ. ಅರ್ಥಶಾಸ್ತ್ರಜ್ಞರು ಹೇಳಿದಂತೆ ನೈಜವಾಗಿ ಜಿಡಿಪಿ ಬೆಳವಣಿಗೆ ಇನ್ನೂ ಕಡಿಮೆ ಇರಬಹುದು. ಸುಳ್ಳಿಗೆ ಮರುಳಾಗಿ ಮೋಸ ಹೋಗಿ ಮೋದಿಗೆ ಮತ ಹಾಕಿದ ಭಕ್ತರಿಗೆ ಚಪ್ಪಾಳೆ ತಟ್ಟಬೇಕಾಗಿದೆ ಎಂದು ಯುವ ಚಿಂತಕ ಧೃವ್ ರಾಠೀ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರ ಹಿಂದೂಗಳು ಮತ್ತು ಮುಸ್ಲಿಮರು ವಿಚಾರ ಮುಂದೆ ತರುತ್ತಾರೆ. ಅವರು ದೇವಾಲಯ-ಮಸೀದಿಯ ಗಲಾಟೆಯನ್ನು ಮುಂದುವರಿಸುತ್ತಾರೆ. ಆದರೆ ನೀವು ಇದನ್ನು ಅರ್ಥಮಾಡಿಕೊಂಡು ನಿರಂತರ ಅರಿವು ಪಡಯೋಣ. ಅವರು ದೇಶವನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ, ನೀವು ದೇಶದ ಹಿತದೃಷ್ಟಿಗಾಗಿ ಕೆಲಸ ಮಾಡೋಣ ಎಂದು ಹೋರಾಟಗಾರ ಮತ್ತು ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿದ್ದು 5 ಟ್ರಿಲಿಯನ್ ಡಾಲರ್ ಎಕಾನಮಿ ಆಗಿದ್ದು 5% ಜಿಡಿಪಿ! ದಯವಿಟ್ಟು ಎಚ್ಚರಗೊಳ್ಳಿ ಎಂದು ಅರವಿಂದ್ ಗುಣಶೇಖರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

  1. ಜಿಡಿಪಿ 6 ವರ್ಷದಲ್ಲೇ ಕಡಿಮೆ

2. ರೂಪಾಯಿ 8 ತಿಂಗಳಲ್ಲೇ ಕಡಿಮೆ

3. ಷೇರು ಮಾರುಕಟ್ಟೆ 12 ತಿಂಗಳಲ್ಲೇ ಕಡಿಮೆ

4. ಕೋರ್ ಸೆಕ್ಟರ್ 48 ತಿಂಗಳಲ್ಲೇ ಕಡಿಮೆ

5. ಉದ್ಯೋಗ 45 ವರ್ಷ ಕಡಿಮೆ

ಏತನ್ಮಧ್ಯೆ, ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು 60% ಜನರು ನಂಬಿದ್ದಾರೆ ಎಂದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ, ಎಂದು ಹೂ ನೆಹ್ರು ಎನ್ನುವ ಟ್ವಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ನಾನೂ ಅಮೇರಿಕಾ ದೇಶದಲ್ಲಿ ನಡೆದಾಗ ಹಣದ ಮುಗ್ಗಟ್ಟು ಆವರಿಸಿದಾಗ ಭಾರತ ದೇಶಕ್ಕೆ 10 ವರ್ಷಗಳ ನಂತರವೇ ಬರುತ್ತದೆ ಎಂದು ಭಾವಿಸಿದ್ದೇ ಈಗ್ಗೆ ಕೆಲವು ತಿಂಗಳ ಹಿಂದೆ ಬಂದದ್ದು ಸಂತೋಷವಾಯಿತು. ಈಗಿರುವ ಸರ್ಕಾರದವರಿಗೇ ಅದನ್ನು ಸರಿಪಡಿಸಲು ಯೋಗ್ಯತೆಯಿಲ್ಲವೆಂಬುದು ಸತ್ಯ ಸತ್ಯಸ್ಯ ಸತ್ಯ

    • ಖಂಡಿತಾ, ಒಂದು ಕುಟುಂಬ ನಡೆಸುವುದಕ್ಕೂ ನೂರು ಕುಟುಂಬ ಹಾಕುವುದಕ್ಕೂ ವ್ಯತ್ಯಾಸ ಇದೆ,,,

  2. Mr Modi you are not able to appoint a qualified FM for our country. The way ,Budget you people mananaged is horrible. Couldn’t manage the sources. Therefore youestimated 1 lakh Cr from disinvestment,1.76 Lakh Cr. From RBI surplus.,0.90 Lakh Cr grom RBI devident,1Lakh Cr. From LIC Loan.Tell me are you not bankrupt. If you deduct abovefigure from budget are we not 12 to 14 % deficit ? Now whom will u blame.You have proven what an uneducated PM can do

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...