Homeಎಕಾನಮಿ3-4ನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

3-4ನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

ಜೀವನೋಪಾಯಕ್ಕಿಂತ ಜೀವ ಮುಖ್ಯ ಎಂದು ಮನಗಂಡ ಸರ್ಕಾರವು ಮಾರ್ಚ್ 25 ರಿಂದ ಸರ್ಕಾರವು ಕಠಿಣವಾದ ಲಾಕ್‌ಡೌನ್ ವಿಧಿಸಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಆರ್ಥಿಕತೆಯಲ್ಲಿ ಪುನಶ್ಚೇತನದ ಲಕ್ಷಣಗಳು ಕಂಡುಬರುತ್ತಿವೆ ಎಂದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಿಡಿಪಿ ಬೆಳವಣಿಗೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಋಣಾತ್ಮಕ ವಲಯದಲ್ಲಿರಬಹುದು ಅಥವಾ ಶೂನ್ಯಕ್ಕೆ ಹತ್ತಿರವಾಗಬಹುದು ಎಂದು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಆರ್ಥಿಕತೆಯಲ್ಲಿ ಶೇಕಡಾ -23.9 ರಷ್ಟು ಕುಸಿತ ಕಂಡುಬಂದಿರುವುದು ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಸೆರಾವೀಕ್‌ನ ಇಂಡಿಯಾ ಎನರ್ಜಿ ಫೋರಂನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಜೀವನೋಪಾಯಕ್ಕಿಂತ ಜೀವ ಮುಖ್ಯ ಎಂದು ಮನಗಂಡ ಸರ್ಕಾರವು ಮಾರ್ಚ್ 25 ರಿಂದ ಸರ್ಕಾರವು ಕಠಿಣವಾದ ಲಾಕ್‌ಡೌನ್ ವಿಧಿಸಿತ್ತು” ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

“ಸಾಂಕ್ರಾಮಿಕ ರೋಗವನ್ನು ಎದುರಿಸಲು ಪೂರ್ವಸಿದ್ಧತಾ ಕಾರ್ಯಗಳನ್ನು ಮಾಡಲು ಲಾಕ್‌ಡೌನ್ ನಮಗೆ ಸಮಯ ನೀಡಿತು. ಆದರೆ ಅನ್‌ಲಾಕ್‌ನೊಂದಿಗೆ ಸ್ಥೂಲ ಆರ್ಥಿಕ ಸೂಚಕಗಳು ಪುನಶ್ಚೇತನದ ಲಕ್ಷಣಗಳನ್ನು ತೋರಿಸುತ್ತಿವೆ. ಹಬ್ಬಗಳ ಸಮಯವು ಆರ್ಥಿಕತೆಯನ್ನು ಮತ್ತಷ್ಟು ಉತ್ತೇಜಿಸುತ್ತಿದೆ. ಹಾಗಾಗಿ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕಗಳಲ್ಲಿ ಸಕಾರಾತ್ಮಕ ಬೆಳವಣಿಗೆಯ ಭರವಸೆ ಪುನರುಜ್ಜೀವನಗೊಂಡಿದೆ” ಎಂದು ಹೇಳಿದರು..

ಒಟ್ಟಾರೆಯಾಗಿ, ಪ್ರಸಕ್ತ ಹಣಕಾಸು ವರ್ಷದ (ಏಪ್ರಿಲ್ 2020 ರಿಂದ ಮಾರ್ಚ್ 2021) ಜಿಡಿಪಿ ಬೆಳವಣಿಗೆಯು ಋಣಾತ್ಮಕ ವಲಯ ಅಥವಾ ಶೂನ್ಯಕ್ಕೆ ಹತ್ತಿರವಾಗಲಿದ್ದು, ಮುಂದಿನ ಹಣಕಾಸು ವರ್ಷದಿಂದ ಈ ಬೆಳವಣಿಗೆ ಪುನರುಜ್ಜೀವನಗೊಳ್ಳುತ್ತದೆ ಎಂದು ಅವರು ಹೇಳಿದರು.

ಇತ್ತೀಚೆಗೆ ಐಎಂಎಫ್ ಬಿಡುಗಡೆ ಮಾಡಿದ ವರದಿಯನ್ವಯ ಭಾರತದ ಜಿಡಿಪಿಯು ಏಷ್ಯಾದ ರಾಷ್ಟ್ರಗಳಲ್ಲಿಯೇ ಅತ್ಯಂತ ಕೆಳಮಟ್ಟದಲ್ಲಿತ್ತು. ಸ್ವಾತಂತ್ರ್ಯಾ ನಂತರದಲ್ಲಿ ಇದು ಅತ್ಯಂತ ಕಳಪೆ ಪ್ರದರ್ಶನ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ:ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಇತ್ತೀಚೆಗೆ ಆರ್‌ಬಿಐನ ಉಪ ಗವರ್ನರ್ ಮೈಕೆಲ್ ಪಾತ್ರಾ ಮಾತನಾಡಿ, ಆರ್ಥಿಕತೆ ಪುನರುಜ್ಜೀವನಗೊಳ್ಳಲು ಕೆಲವು ವರ್ಷಗಳೇ ಬೇಕಾಗಬಹುದು ಎಂದು ಹೇಳಿದ್ದರು.

ಈಗ ನಿರ್ಮಲಾ ಸೀತಾರಾಮನ್ ನಿಡಿರುವ ಹೇಳಿಕೆಯ ಪ್ರಕಾರ, “3 ಅಥವಾ 4ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ಋಣಾತ್ಮಕತೆಯಿಂದ ಧನಾತ್ಮಕತೆಯೆಡೆಗೆ (ಮೈನಸ್-ಪ್ಲಸ್) ಬೆಳವಣಿಗೆಯಾಗಬಹುದು. ಆದರೆ ಶೂನ್ಯದ (0) ಆಸುಪಾಸಿನಲ್ಲಿಯೇ ಇರುಬಹುದು ಅಥವಾ ಋಣಾತ್ಮಕವಾಗಿಯೇ (-) ಇರಬಹುದು” ಎಂದು ಹೇಳಿದ್ದಾರೆ. ಅಂದರೆ ಈ ವರ್ಷವೂ ಆರ್ಥಿಕತೆ ಧನಾತ್ಮಕ ಬೆಳವಣಿಗೆಯನ್ನು ಕಾಣುವುದಿಲ್ಲ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಅರ್ಥಿಕ ಕುಸಿತದಿಂದ ಕೇಂದ್ರ ಬಿಜೆಪಿ ಸರ್ಕಾರವು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ನಡುವೆ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು. ಆದರೂ ಆರ್ಥಕತೆ ತೆವಳುತ್ತಲೇ ಇದೆ.


ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...