Homeಮುಖಪುಟದೇಶದ ಆರ್ಥಿಕ ಬೆಳವಣಿಗೆ ಕುಂಠಿತ : ಎರಡು ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

ದೇಶದ ಆರ್ಥಿಕ ಬೆಳವಣಿಗೆ ಕುಂಠಿತ : ಎರಡು ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

- Advertisement -
- Advertisement -

ಪ್ರಸಕ್ತ ಹಣಕಾಸು ವರ್ಷದ (2024-25) ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ದೇಶಿಯ ಆಂತರಿಕ ಉತ್ಪನ್ನ (ಜಿಡಿಪಿ) ಶೇ.5.4ರಷ್ಟು ದಾಖಲಾಗಿದ್ದು, ಎರಡು ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ಇಳಿದಿದೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಈ ಕುರಿತು ಶುಕ್ರವಾರ (ನ.29) ವರದಿ ಬಿಡುಗಡೆ ಮಾಡಿದೆ. ತಯಾರಿಕಾ ಮತ್ತು ಗಣಿ ವಲಯಗಳ ಪ್ರಗತಿ ಗಣನೀಯವಾಗಿ ಕುಸಿದಿರುವುದು ಹಾಗೂ ಜನರು ಮಾಡುತ್ತಿರುವ ವೆಚ್ಚ ಕಡಿಮೆಯಾಗಿರುವುದು ಈ ಕುಸಿತಕ್ಕೆ ಕಾರಣ ಎಂದು ಎನ್‌ಎಸ್‌ಒ ಹೇಳಿದೆ.

2022-23ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) ಜಿಡಿಪಿ ಬೆಳವಣಿಗೆ ಶೇ.4.3ರಷ್ಟು ದಾಖಲಾಗಿತ್ತು. ಇದು ಈ ಹಿಂದಿನ ಕನಿಷ್ಠ ಮಟ್ಟವಾಗಿದೆ. 2023-24ರ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.1ರಷ್ಟಿತ್ತು. ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 6.7ರಷ್ಟಿತ್ತು.

ಜನರು ಸರಕು ಮತ್ತು ಸೇವೆಗಳಿಗಾಗಿ ಮಾಡುವ ವೆಚ್ಚವನ್ನು ಸೂಚಿಸುವ ಖಾಸಗಿ ಬಳಕೆ ವೆಚ್ಚದ ಬೆಳವಣಿಗೆಯ ಪ್ರಮಾಣ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ.6ಕ್ಕೆ ಇಳಿದಿದೆ. ಈ ವರ್ಷದ ಏಪ್ರಿಲ್-ಜೂನ್ ಅವಧಿಯಲ್ಲಿ ಇದು ಶೇ. 7.4ರಷ್ಟಿತ್ತು.

ಕಳೆದ ವರ್ಷದ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ತಯಾರಿಕಾ ವಲಯದ ಜಿವಿಎ ಪ್ರಗತಿ ಶೇ.14.3ರಷ್ಟಿತ್ತು. ಅದು ಈ ವರ್ಷ ಶೇ.2.2ಕ್ಕೆ ಇಳಿಕೆಯಾಗಿದೆ.

ನವ ಭಾರತದ ಕಠೋರ ಸತ್ಯ : ಕಾಂಗ್ರೆಸ್ 

ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಕುಸಿತ ಕಂಡಿರುವುದಕ್ಕೆ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, “ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಕುಸಿದಿರುವುದು ಅತ್ಯಂತ ನಿರಾಶದಾಯಕವಾಗಿದೆ. ಪ್ರಧಾನಿ ಮತ್ತು ಅವರ ಬೆಂಬಲಿಗರು ಮಾಡುತ್ತಿರುವ ಪ್ರಚಾರ, ನೀಡುತ್ತಿರುವ ದೊಡ್ಡ ದೊಡ್ಡ ಹೇಳಿಕೆಗಳಿಗಿಂತ ವಾಸ್ತವತೆ ಸಂಪೂರ್ಣ ಭಿನ್ನವಾಗಿದೆ ಎಂಬುವುದನ್ನು ಇದು ತೋರಿಸುತ್ತದೆ ಎಂದಿದ್ದಾರೆ.

ಹಿಂದಿನ ಆರ್ಥಿಕ ಬೆಳವಣಿಗೆಯನ್ನು ‘ಮರು ಲೆಕ್ಕಾಚಾರ’ ಮಾಡಿದ ನಂತರವೂ, ಜೈವಿಕವಲ್ಲದ ಪ್ರಧಾನ ಮಂತ್ರಿಯ ಆರ್ಥಿಕ ಬೆಳವಣಿಗೆಯ ದಾಖಲೆಯು ಡಾ. ಮನಮೋಹನ್ ಸಿಂಗ್ ಅವರ ಅವಧಿಗಿಂತ ಕೆಟ್ಟದಾಗಿದೆ. ಇದು ‘ನವ ಭಾರತದ ಕಠೋರ ಸತ್ಯ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಸೋಲಿನ ಬಗ್ಗೆ ಕಾಂಗ್ರೆಸ್ ಅಸಮಾಧಾನ; ಚುನಾವಣಾ ಆಯೋಗಕ್ಕೆ ‘ತುರ್ತು ಜ್ಞಾಪಕ ಪತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...