Homeಎಕಾನಮಿಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

- Advertisement -
- Advertisement -

ಜುಲೈ ಮತ್ತು ಸೆಪ್ಟಂಬರ್‌ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.4.2 ದರದಲ್ಲಿ ಇರಲಿದೆ ಹಾಗೂ 2019-20ನೇ ಇಡೀ ವಿತ್ತ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ಶೇ. 5ರ ದರಕ್ಕೆ ಕುಸಿಯಲಿದೆ ಎಂದು ಎಂದು ಎಸ್‌ಬಿಐ ( ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ) ಮಂಗಳವಾರ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ತಿಳಿಸಿದೆ.

ವರ್ಷದ ಪ್ರಥಮಾರ್ಧದಲ್ಲಿ ಪ್ರಕಟಿಸಿದ್ದ ವರದಿಯಲ್ಲಿ ಇದೆ ಎಸ್.ಬಿ.ಐ, ಪ್ರಸಕ್ತ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.6.1ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈಗ ತನ್ನ ಅಂದಾಜನ್ನು ಮಾರ್ಪಡಿಸಿಕೊಂಡಿರುವ ಅದು, ಮೊದಲು ಅಂದಾಜಿಸಿದ್ದಕ್ಕಿಂತ ಶೇ.1.1ರಷ್ಟು ಕಡಿಮೆ ದರದಲ್ಲಿ ಅಂದರೆ, ಶೇ.5ರಷ್ಟು ದರದಲ್ಲಿ ಮಾತ್ರ ಭಾರತದ ಜಿಡಿಪಿ ಇರಲಿದೆ ಎಂದು ಹೇಳಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸಂಬಂಧಿಸಿ ವಿವಿಧ ಆರ್ಥಿಕ ಸಮೀಕ್ಷೆಗಳು ಅಂದಾಜಿಸಿರುವ ಭಾರತದ ಆರ್ಥಿಕ ಬೆಳವಣಿಗೆಗಳಲ್ಲೇ ಎಸ್.ಬಿ.ಐ ನೀಡಿರುವ ದರ ಅತ್ಯಂತ ಕಡಿಮೆಯದ್ದಾಗಿದೆ. ಸದರಿ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಆರ್ಥಿಕ ಸೇವಾ ಸಂಸ್ಥೆಯಾದ `ನೊಮುರಾಸ್’ ಕಂಪನಿ ಅಂದಾಜಿಸಿರುವ ಜಿಡಿಪಿ ದರವೇ ಭಾರತದ ಮಟ್ಟಿಗಿನ ಅತಿ ಆಶಾದಾಯಕ ಅಂದಾಜು ಎನ್ನಬಹುದು. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.9ರ ದರದಲ್ಲಿ ಇರಲಿದೆ. ಅತಿ ಹೆಚ್ಚಿನ ಅಂದಾಜು ಮಾಪನವು ಕೂಡಾ (ನೊಮುರಾಸ್) ಶೇ.5ನ್ನು ದಾಟದಿರುವುದು ಆತಂಕಕಾರಿ ವಿಷಯ. ಇನ್ನು ಎಸ್.ಬಿ.ಐ ಪ್ರಕಾರ ಈ ದರ ಶೇ.4.2 ಮಾತ್ರ!

ಅಂದಹಾಗೆ ಇಷ್ಟರ ಮಟ್ಟಿಗೆ ಜಿಡಿಪಿ ಕುಸಿತಕ್ಕೆ ಕಾರಣವೇನು..? ಅನ್ನೋದನ್ನು ವರದಿಯಲ್ಲಿ  ತಿಳಿಸಿದೆ. ಕೈಗಾರಿಕೆ ಮತ್ತು ಉದ್ಯಮಗಳಲ್ಲಿ ಆದ ಮಹತ್ತರ ನಷ್ಟ ಹಾಗೂ ಉತ್ಪಾದನೆಯ ಮಟ್ಟ ಕುಸಿದಿರುವುದೇ ಇದಕ್ಕೆ ಕಾರಣ ಎಂದು ಎಸ್‌ಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಟೋಮೊಬೈಲ್‌ ಕ್ಷೇತ್ರ, ವಿಮಾನ ಪ್ರಯಾಣಿಕರಲ್ಲಿ ಇಳಿಕೆ, ಮೂಲಸೌಲಭ್ಯಗಳಲ್ಲಿ ಅಭಿವೃದ್ಧಿಯ ಕೊರತೆ, ಮೂಲ ಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಇಳಿಕೆ ಇವೆಲ್ಲವೂ ಜಿಡಿಪಿ ದರ ಕುಸಿಯಲು ಕಾರಣ ಎಂದಿರುವ ವರದಿ, ಇದರಿಂದಾಗಿಯೇ ದರ ೪.೨ರಷ್ಟು ಅತ್ಯಂತ ಕಡಿಮೆ ಮಟ್ಟದಲ್ಲಿ ದಾಖಲಾಗುವ ಎಲ್ಲ ಸಾಧ್ಯತೆಗಳು ಇವೆ ಎಂದಿದೆ. ಈ ತ್ರೈಮಾಸಿಕದಲ್ಲಿ ನಿರೀಕ್ಷೆಗು ಮೀರಿ ಜಿಡಿಪಿ ಕುಸಿದಿರುವುದರಿಂದಲೇ ಒಟ್ಟಾರೆ ವರ್ಷದ ಆರ್ಥಿಕ ಬೆಳವಣಿಗೆ ದರ  ಶೇ.5ರಷ್ಟು (ಈ ಮೊದಲು ತಾನು ಅಂದಾಜಿಸಿದ್ದಕ್ಕಿಂತಲು ಶೇ1.1 ರಷ್ಟು ಕಡಿಮೆ) ದಾಖಲಾಗಿದೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು: ಅನರ್ಹರಿಗೆ ನಿಟ್ಟುಸಿರು, ಬಿಜೆಪಿಗೆ ಇಕ್ಕಟ್ಟು! : ಗಿರೀಶ್ ತಾಳಿಕಟ್ಟೆ

ಕೈಗಾರಿಕೋದ್ಯಮದ ಕ್ಷೀಣಿಸುವಿಕೆಯ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಪಂಜಾಬ್‌ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಆದ ಖಾರಿಫ್ ಬೆಳೆ ನಾಶವೂ ಕೃಷಿ ಕ್ಷೇತ್ರದ ಉತ್ಪಾದನಾ ಸಾಮರ್ಥ್ಯವನ್ನು ಕುಗ್ಗಿಸಿರುವುದು ಕೂಡಾ ಜಿಡಿಪಿ ಕುಸಿಯಲು ಕಾರಣವಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ದೇಶೀಯ ಮಾನದಂಡಗಳು ಮತ್ತು ಜಾಗತಿಕ ಮಾರುಕಟ್ಟೆಯಲ ಮಂದಗತಿಯ ಬೆಳವಣಿಗೆಯಿಂದಾಗಿ ಬೆಳವಣಿಗೆ ದರ ಕುಸಿಯಲಿದೆ ಎಂಬ ನಿರ್ಧಾರಕ್ಕೆ ತಾನು ಬಂದಿರುವುದಾಗಿ ವರದಿ ಸಮರ್ಥಿಸಿಕೊಂಡಿದೆ.

ಇಷ್ಟೆಲ್ಲಾ ಇಳಿಕೆ, ಆರ್ಥಿಕ ಕುಸಿತದ ಮಧ್ಯೆಯೂ ಟೆಲಿಕಾಂ, ವಿದ್ಯುತ್‌ ಮತ್ತು ಎನ್‌ಬಿಎಫ್‌ಸಿಎಸ್ ಮೇಲೆ ಯಾವುದೇ ಋಣಾತ್ಮಕ ಪ್ರಭಾವ ಬೀರದ ತನ್ನ ನೀತಿಗಳಿಗೆ ಸರ್ಕಾರ ಬದ್ಧವಾಗಿರುವುದು ಅಚ್ಚರಿಯ ಗಮನಾರ್ಹ ಸಂಗತಿ ಎಂದು ವರದಿ ಸಿದ್ದಪಡಿಸಿದ ತಂಡದ ಮುಖ್ಯಸ್ಥೆ ಎಸ್‌ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯ ಕಂಠಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...