Homeಎಕಾನಮಿಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

- Advertisement -
- Advertisement -

ಜುಲೈ ಮತ್ತು ಸೆಪ್ಟಂಬರ್‌ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.4.2 ದರದಲ್ಲಿ ಇರಲಿದೆ ಹಾಗೂ 2019-20ನೇ ಇಡೀ ವಿತ್ತ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ಶೇ. 5ರ ದರಕ್ಕೆ ಕುಸಿಯಲಿದೆ ಎಂದು ಎಂದು ಎಸ್‌ಬಿಐ ( ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ) ಮಂಗಳವಾರ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ತಿಳಿಸಿದೆ.

ವರ್ಷದ ಪ್ರಥಮಾರ್ಧದಲ್ಲಿ ಪ್ರಕಟಿಸಿದ್ದ ವರದಿಯಲ್ಲಿ ಇದೆ ಎಸ್.ಬಿ.ಐ, ಪ್ರಸಕ್ತ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.6.1ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈಗ ತನ್ನ ಅಂದಾಜನ್ನು ಮಾರ್ಪಡಿಸಿಕೊಂಡಿರುವ ಅದು, ಮೊದಲು ಅಂದಾಜಿಸಿದ್ದಕ್ಕಿಂತ ಶೇ.1.1ರಷ್ಟು ಕಡಿಮೆ ದರದಲ್ಲಿ ಅಂದರೆ, ಶೇ.5ರಷ್ಟು ದರದಲ್ಲಿ ಮಾತ್ರ ಭಾರತದ ಜಿಡಿಪಿ ಇರಲಿದೆ ಎಂದು ಹೇಳಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸಂಬಂಧಿಸಿ ವಿವಿಧ ಆರ್ಥಿಕ ಸಮೀಕ್ಷೆಗಳು ಅಂದಾಜಿಸಿರುವ ಭಾರತದ ಆರ್ಥಿಕ ಬೆಳವಣಿಗೆಗಳಲ್ಲೇ ಎಸ್.ಬಿ.ಐ ನೀಡಿರುವ ದರ ಅತ್ಯಂತ ಕಡಿಮೆಯದ್ದಾಗಿದೆ. ಸದರಿ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಆರ್ಥಿಕ ಸೇವಾ ಸಂಸ್ಥೆಯಾದ `ನೊಮುರಾಸ್’ ಕಂಪನಿ ಅಂದಾಜಿಸಿರುವ ಜಿಡಿಪಿ ದರವೇ ಭಾರತದ ಮಟ್ಟಿಗಿನ ಅತಿ ಆಶಾದಾಯಕ ಅಂದಾಜು ಎನ್ನಬಹುದು. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.9ರ ದರದಲ್ಲಿ ಇರಲಿದೆ. ಅತಿ ಹೆಚ್ಚಿನ ಅಂದಾಜು ಮಾಪನವು ಕೂಡಾ (ನೊಮುರಾಸ್) ಶೇ.5ನ್ನು ದಾಟದಿರುವುದು ಆತಂಕಕಾರಿ ವಿಷಯ. ಇನ್ನು ಎಸ್.ಬಿ.ಐ ಪ್ರಕಾರ ಈ ದರ ಶೇ.4.2 ಮಾತ್ರ!

ಅಂದಹಾಗೆ ಇಷ್ಟರ ಮಟ್ಟಿಗೆ ಜಿಡಿಪಿ ಕುಸಿತಕ್ಕೆ ಕಾರಣವೇನು..? ಅನ್ನೋದನ್ನು ವರದಿಯಲ್ಲಿ  ತಿಳಿಸಿದೆ. ಕೈಗಾರಿಕೆ ಮತ್ತು ಉದ್ಯಮಗಳಲ್ಲಿ ಆದ ಮಹತ್ತರ ನಷ್ಟ ಹಾಗೂ ಉತ್ಪಾದನೆಯ ಮಟ್ಟ ಕುಸಿದಿರುವುದೇ ಇದಕ್ಕೆ ಕಾರಣ ಎಂದು ಎಸ್‌ಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಟೋಮೊಬೈಲ್‌ ಕ್ಷೇತ್ರ, ವಿಮಾನ ಪ್ರಯಾಣಿಕರಲ್ಲಿ ಇಳಿಕೆ, ಮೂಲಸೌಲಭ್ಯಗಳಲ್ಲಿ ಅಭಿವೃದ್ಧಿಯ ಕೊರತೆ, ಮೂಲ ಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಇಳಿಕೆ ಇವೆಲ್ಲವೂ ಜಿಡಿಪಿ ದರ ಕುಸಿಯಲು ಕಾರಣ ಎಂದಿರುವ ವರದಿ, ಇದರಿಂದಾಗಿಯೇ ದರ ೪.೨ರಷ್ಟು ಅತ್ಯಂತ ಕಡಿಮೆ ಮಟ್ಟದಲ್ಲಿ ದಾಖಲಾಗುವ ಎಲ್ಲ ಸಾಧ್ಯತೆಗಳು ಇವೆ ಎಂದಿದೆ. ಈ ತ್ರೈಮಾಸಿಕದಲ್ಲಿ ನಿರೀಕ್ಷೆಗು ಮೀರಿ ಜಿಡಿಪಿ ಕುಸಿದಿರುವುದರಿಂದಲೇ ಒಟ್ಟಾರೆ ವರ್ಷದ ಆರ್ಥಿಕ ಬೆಳವಣಿಗೆ ದರ  ಶೇ.5ರಷ್ಟು (ಈ ಮೊದಲು ತಾನು ಅಂದಾಜಿಸಿದ್ದಕ್ಕಿಂತಲು ಶೇ1.1 ರಷ್ಟು ಕಡಿಮೆ) ದಾಖಲಾಗಿದೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು: ಅನರ್ಹರಿಗೆ ನಿಟ್ಟುಸಿರು, ಬಿಜೆಪಿಗೆ ಇಕ್ಕಟ್ಟು! : ಗಿರೀಶ್ ತಾಳಿಕಟ್ಟೆ

ಕೈಗಾರಿಕೋದ್ಯಮದ ಕ್ಷೀಣಿಸುವಿಕೆಯ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಪಂಜಾಬ್‌ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಆದ ಖಾರಿಫ್ ಬೆಳೆ ನಾಶವೂ ಕೃಷಿ ಕ್ಷೇತ್ರದ ಉತ್ಪಾದನಾ ಸಾಮರ್ಥ್ಯವನ್ನು ಕುಗ್ಗಿಸಿರುವುದು ಕೂಡಾ ಜಿಡಿಪಿ ಕುಸಿಯಲು ಕಾರಣವಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ದೇಶೀಯ ಮಾನದಂಡಗಳು ಮತ್ತು ಜಾಗತಿಕ ಮಾರುಕಟ್ಟೆಯಲ ಮಂದಗತಿಯ ಬೆಳವಣಿಗೆಯಿಂದಾಗಿ ಬೆಳವಣಿಗೆ ದರ ಕುಸಿಯಲಿದೆ ಎಂಬ ನಿರ್ಧಾರಕ್ಕೆ ತಾನು ಬಂದಿರುವುದಾಗಿ ವರದಿ ಸಮರ್ಥಿಸಿಕೊಂಡಿದೆ.

ಇಷ್ಟೆಲ್ಲಾ ಇಳಿಕೆ, ಆರ್ಥಿಕ ಕುಸಿತದ ಮಧ್ಯೆಯೂ ಟೆಲಿಕಾಂ, ವಿದ್ಯುತ್‌ ಮತ್ತು ಎನ್‌ಬಿಎಫ್‌ಸಿಎಸ್ ಮೇಲೆ ಯಾವುದೇ ಋಣಾತ್ಮಕ ಪ್ರಭಾವ ಬೀರದ ತನ್ನ ನೀತಿಗಳಿಗೆ ಸರ್ಕಾರ ಬದ್ಧವಾಗಿರುವುದು ಅಚ್ಚರಿಯ ಗಮನಾರ್ಹ ಸಂಗತಿ ಎಂದು ವರದಿ ಸಿದ್ದಪಡಿಸಿದ ತಂಡದ ಮುಖ್ಯಸ್ಥೆ ಎಸ್‌ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯ ಕಂಠಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...