Homeಎಕಾನಮಿಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

- Advertisement -
- Advertisement -

ಜುಲೈ ಮತ್ತು ಸೆಪ್ಟಂಬರ್‌ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.4.2 ದರದಲ್ಲಿ ಇರಲಿದೆ ಹಾಗೂ 2019-20ನೇ ಇಡೀ ವಿತ್ತ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ಶೇ. 5ರ ದರಕ್ಕೆ ಕುಸಿಯಲಿದೆ ಎಂದು ಎಂದು ಎಸ್‌ಬಿಐ ( ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ) ಮಂಗಳವಾರ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ತಿಳಿಸಿದೆ.

ವರ್ಷದ ಪ್ರಥಮಾರ್ಧದಲ್ಲಿ ಪ್ರಕಟಿಸಿದ್ದ ವರದಿಯಲ್ಲಿ ಇದೆ ಎಸ್.ಬಿ.ಐ, ಪ್ರಸಕ್ತ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.6.1ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈಗ ತನ್ನ ಅಂದಾಜನ್ನು ಮಾರ್ಪಡಿಸಿಕೊಂಡಿರುವ ಅದು, ಮೊದಲು ಅಂದಾಜಿಸಿದ್ದಕ್ಕಿಂತ ಶೇ.1.1ರಷ್ಟು ಕಡಿಮೆ ದರದಲ್ಲಿ ಅಂದರೆ, ಶೇ.5ರಷ್ಟು ದರದಲ್ಲಿ ಮಾತ್ರ ಭಾರತದ ಜಿಡಿಪಿ ಇರಲಿದೆ ಎಂದು ಹೇಳಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸಂಬಂಧಿಸಿ ವಿವಿಧ ಆರ್ಥಿಕ ಸಮೀಕ್ಷೆಗಳು ಅಂದಾಜಿಸಿರುವ ಭಾರತದ ಆರ್ಥಿಕ ಬೆಳವಣಿಗೆಗಳಲ್ಲೇ ಎಸ್.ಬಿ.ಐ ನೀಡಿರುವ ದರ ಅತ್ಯಂತ ಕಡಿಮೆಯದ್ದಾಗಿದೆ. ಸದರಿ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಆರ್ಥಿಕ ಸೇವಾ ಸಂಸ್ಥೆಯಾದ `ನೊಮುರಾಸ್’ ಕಂಪನಿ ಅಂದಾಜಿಸಿರುವ ಜಿಡಿಪಿ ದರವೇ ಭಾರತದ ಮಟ್ಟಿಗಿನ ಅತಿ ಆಶಾದಾಯಕ ಅಂದಾಜು ಎನ್ನಬಹುದು. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.9ರ ದರದಲ್ಲಿ ಇರಲಿದೆ. ಅತಿ ಹೆಚ್ಚಿನ ಅಂದಾಜು ಮಾಪನವು ಕೂಡಾ (ನೊಮುರಾಸ್) ಶೇ.5ನ್ನು ದಾಟದಿರುವುದು ಆತಂಕಕಾರಿ ವಿಷಯ. ಇನ್ನು ಎಸ್.ಬಿ.ಐ ಪ್ರಕಾರ ಈ ದರ ಶೇ.4.2 ಮಾತ್ರ!

ಅಂದಹಾಗೆ ಇಷ್ಟರ ಮಟ್ಟಿಗೆ ಜಿಡಿಪಿ ಕುಸಿತಕ್ಕೆ ಕಾರಣವೇನು..? ಅನ್ನೋದನ್ನು ವರದಿಯಲ್ಲಿ  ತಿಳಿಸಿದೆ. ಕೈಗಾರಿಕೆ ಮತ್ತು ಉದ್ಯಮಗಳಲ್ಲಿ ಆದ ಮಹತ್ತರ ನಷ್ಟ ಹಾಗೂ ಉತ್ಪಾದನೆಯ ಮಟ್ಟ ಕುಸಿದಿರುವುದೇ ಇದಕ್ಕೆ ಕಾರಣ ಎಂದು ಎಸ್‌ಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಟೋಮೊಬೈಲ್‌ ಕ್ಷೇತ್ರ, ವಿಮಾನ ಪ್ರಯಾಣಿಕರಲ್ಲಿ ಇಳಿಕೆ, ಮೂಲಸೌಲಭ್ಯಗಳಲ್ಲಿ ಅಭಿವೃದ್ಧಿಯ ಕೊರತೆ, ಮೂಲ ಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಇಳಿಕೆ ಇವೆಲ್ಲವೂ ಜಿಡಿಪಿ ದರ ಕುಸಿಯಲು ಕಾರಣ ಎಂದಿರುವ ವರದಿ, ಇದರಿಂದಾಗಿಯೇ ದರ ೪.೨ರಷ್ಟು ಅತ್ಯಂತ ಕಡಿಮೆ ಮಟ್ಟದಲ್ಲಿ ದಾಖಲಾಗುವ ಎಲ್ಲ ಸಾಧ್ಯತೆಗಳು ಇವೆ ಎಂದಿದೆ. ಈ ತ್ರೈಮಾಸಿಕದಲ್ಲಿ ನಿರೀಕ್ಷೆಗು ಮೀರಿ ಜಿಡಿಪಿ ಕುಸಿದಿರುವುದರಿಂದಲೇ ಒಟ್ಟಾರೆ ವರ್ಷದ ಆರ್ಥಿಕ ಬೆಳವಣಿಗೆ ದರ  ಶೇ.5ರಷ್ಟು (ಈ ಮೊದಲು ತಾನು ಅಂದಾಜಿಸಿದ್ದಕ್ಕಿಂತಲು ಶೇ1.1 ರಷ್ಟು ಕಡಿಮೆ) ದಾಖಲಾಗಿದೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು: ಅನರ್ಹರಿಗೆ ನಿಟ್ಟುಸಿರು, ಬಿಜೆಪಿಗೆ ಇಕ್ಕಟ್ಟು! : ಗಿರೀಶ್ ತಾಳಿಕಟ್ಟೆ

ಕೈಗಾರಿಕೋದ್ಯಮದ ಕ್ಷೀಣಿಸುವಿಕೆಯ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಪಂಜಾಬ್‌ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಆದ ಖಾರಿಫ್ ಬೆಳೆ ನಾಶವೂ ಕೃಷಿ ಕ್ಷೇತ್ರದ ಉತ್ಪಾದನಾ ಸಾಮರ್ಥ್ಯವನ್ನು ಕುಗ್ಗಿಸಿರುವುದು ಕೂಡಾ ಜಿಡಿಪಿ ಕುಸಿಯಲು ಕಾರಣವಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ದೇಶೀಯ ಮಾನದಂಡಗಳು ಮತ್ತು ಜಾಗತಿಕ ಮಾರುಕಟ್ಟೆಯಲ ಮಂದಗತಿಯ ಬೆಳವಣಿಗೆಯಿಂದಾಗಿ ಬೆಳವಣಿಗೆ ದರ ಕುಸಿಯಲಿದೆ ಎಂಬ ನಿರ್ಧಾರಕ್ಕೆ ತಾನು ಬಂದಿರುವುದಾಗಿ ವರದಿ ಸಮರ್ಥಿಸಿಕೊಂಡಿದೆ.

ಇಷ್ಟೆಲ್ಲಾ ಇಳಿಕೆ, ಆರ್ಥಿಕ ಕುಸಿತದ ಮಧ್ಯೆಯೂ ಟೆಲಿಕಾಂ, ವಿದ್ಯುತ್‌ ಮತ್ತು ಎನ್‌ಬಿಎಫ್‌ಸಿಎಸ್ ಮೇಲೆ ಯಾವುದೇ ಋಣಾತ್ಮಕ ಪ್ರಭಾವ ಬೀರದ ತನ್ನ ನೀತಿಗಳಿಗೆ ಸರ್ಕಾರ ಬದ್ಧವಾಗಿರುವುದು ಅಚ್ಚರಿಯ ಗಮನಾರ್ಹ ಸಂಗತಿ ಎಂದು ವರದಿ ಸಿದ್ದಪಡಿಸಿದ ತಂಡದ ಮುಖ್ಯಸ್ಥೆ ಎಸ್‌ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯ ಕಂಠಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...