Homeಎಕಾನಮಿಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

- Advertisement -
- Advertisement -

ಜುಲೈ ಮತ್ತು ಸೆಪ್ಟಂಬರ್‌ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.4.2 ದರದಲ್ಲಿ ಇರಲಿದೆ ಹಾಗೂ 2019-20ನೇ ಇಡೀ ವಿತ್ತ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ಶೇ. 5ರ ದರಕ್ಕೆ ಕುಸಿಯಲಿದೆ ಎಂದು ಎಂದು ಎಸ್‌ಬಿಐ ( ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ) ಮಂಗಳವಾರ ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ತಿಳಿಸಿದೆ.

ವರ್ಷದ ಪ್ರಥಮಾರ್ಧದಲ್ಲಿ ಪ್ರಕಟಿಸಿದ್ದ ವರದಿಯಲ್ಲಿ ಇದೆ ಎಸ್.ಬಿ.ಐ, ಪ್ರಸಕ್ತ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.6.1ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈಗ ತನ್ನ ಅಂದಾಜನ್ನು ಮಾರ್ಪಡಿಸಿಕೊಂಡಿರುವ ಅದು, ಮೊದಲು ಅಂದಾಜಿಸಿದ್ದಕ್ಕಿಂತ ಶೇ.1.1ರಷ್ಟು ಕಡಿಮೆ ದರದಲ್ಲಿ ಅಂದರೆ, ಶೇ.5ರಷ್ಟು ದರದಲ್ಲಿ ಮಾತ್ರ ಭಾರತದ ಜಿಡಿಪಿ ಇರಲಿದೆ ಎಂದು ಹೇಳಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸಂಬಂಧಿಸಿ ವಿವಿಧ ಆರ್ಥಿಕ ಸಮೀಕ್ಷೆಗಳು ಅಂದಾಜಿಸಿರುವ ಭಾರತದ ಆರ್ಥಿಕ ಬೆಳವಣಿಗೆಗಳಲ್ಲೇ ಎಸ್.ಬಿ.ಐ ನೀಡಿರುವ ದರ ಅತ್ಯಂತ ಕಡಿಮೆಯದ್ದಾಗಿದೆ. ಸದರಿ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಆರ್ಥಿಕ ಸೇವಾ ಸಂಸ್ಥೆಯಾದ `ನೊಮುರಾಸ್’ ಕಂಪನಿ ಅಂದಾಜಿಸಿರುವ ಜಿಡಿಪಿ ದರವೇ ಭಾರತದ ಮಟ್ಟಿಗಿನ ಅತಿ ಆಶಾದಾಯಕ ಅಂದಾಜು ಎನ್ನಬಹುದು. ಅದರ ಪ್ರಕಾರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.4.9ರ ದರದಲ್ಲಿ ಇರಲಿದೆ. ಅತಿ ಹೆಚ್ಚಿನ ಅಂದಾಜು ಮಾಪನವು ಕೂಡಾ (ನೊಮುರಾಸ್) ಶೇ.5ನ್ನು ದಾಟದಿರುವುದು ಆತಂಕಕಾರಿ ವಿಷಯ. ಇನ್ನು ಎಸ್.ಬಿ.ಐ ಪ್ರಕಾರ ಈ ದರ ಶೇ.4.2 ಮಾತ್ರ!

ಅಂದಹಾಗೆ ಇಷ್ಟರ ಮಟ್ಟಿಗೆ ಜಿಡಿಪಿ ಕುಸಿತಕ್ಕೆ ಕಾರಣವೇನು..? ಅನ್ನೋದನ್ನು ವರದಿಯಲ್ಲಿ  ತಿಳಿಸಿದೆ. ಕೈಗಾರಿಕೆ ಮತ್ತು ಉದ್ಯಮಗಳಲ್ಲಿ ಆದ ಮಹತ್ತರ ನಷ್ಟ ಹಾಗೂ ಉತ್ಪಾದನೆಯ ಮಟ್ಟ ಕುಸಿದಿರುವುದೇ ಇದಕ್ಕೆ ಕಾರಣ ಎಂದು ಎಸ್‌ಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಟೋಮೊಬೈಲ್‌ ಕ್ಷೇತ್ರ, ವಿಮಾನ ಪ್ರಯಾಣಿಕರಲ್ಲಿ ಇಳಿಕೆ, ಮೂಲಸೌಲಭ್ಯಗಳಲ್ಲಿ ಅಭಿವೃದ್ಧಿಯ ಕೊರತೆ, ಮೂಲ ಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಇಳಿಕೆ ಇವೆಲ್ಲವೂ ಜಿಡಿಪಿ ದರ ಕುಸಿಯಲು ಕಾರಣ ಎಂದಿರುವ ವರದಿ, ಇದರಿಂದಾಗಿಯೇ ದರ ೪.೨ರಷ್ಟು ಅತ್ಯಂತ ಕಡಿಮೆ ಮಟ್ಟದಲ್ಲಿ ದಾಖಲಾಗುವ ಎಲ್ಲ ಸಾಧ್ಯತೆಗಳು ಇವೆ ಎಂದಿದೆ. ಈ ತ್ರೈಮಾಸಿಕದಲ್ಲಿ ನಿರೀಕ್ಷೆಗು ಮೀರಿ ಜಿಡಿಪಿ ಕುಸಿದಿರುವುದರಿಂದಲೇ ಒಟ್ಟಾರೆ ವರ್ಷದ ಆರ್ಥಿಕ ಬೆಳವಣಿಗೆ ದರ  ಶೇ.5ರಷ್ಟು (ಈ ಮೊದಲು ತಾನು ಅಂದಾಜಿಸಿದ್ದಕ್ಕಿಂತಲು ಶೇ1.1 ರಷ್ಟು ಕಡಿಮೆ) ದಾಖಲಾಗಿದೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು: ಅನರ್ಹರಿಗೆ ನಿಟ್ಟುಸಿರು, ಬಿಜೆಪಿಗೆ ಇಕ್ಕಟ್ಟು! : ಗಿರೀಶ್ ತಾಳಿಕಟ್ಟೆ

ಕೈಗಾರಿಕೋದ್ಯಮದ ಕ್ಷೀಣಿಸುವಿಕೆಯ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಪಂಜಾಬ್‌ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಆದ ಖಾರಿಫ್ ಬೆಳೆ ನಾಶವೂ ಕೃಷಿ ಕ್ಷೇತ್ರದ ಉತ್ಪಾದನಾ ಸಾಮರ್ಥ್ಯವನ್ನು ಕುಗ್ಗಿಸಿರುವುದು ಕೂಡಾ ಜಿಡಿಪಿ ಕುಸಿಯಲು ಕಾರಣವಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ದೇಶೀಯ ಮಾನದಂಡಗಳು ಮತ್ತು ಜಾಗತಿಕ ಮಾರುಕಟ್ಟೆಯಲ ಮಂದಗತಿಯ ಬೆಳವಣಿಗೆಯಿಂದಾಗಿ ಬೆಳವಣಿಗೆ ದರ ಕುಸಿಯಲಿದೆ ಎಂಬ ನಿರ್ಧಾರಕ್ಕೆ ತಾನು ಬಂದಿರುವುದಾಗಿ ವರದಿ ಸಮರ್ಥಿಸಿಕೊಂಡಿದೆ.

ಇಷ್ಟೆಲ್ಲಾ ಇಳಿಕೆ, ಆರ್ಥಿಕ ಕುಸಿತದ ಮಧ್ಯೆಯೂ ಟೆಲಿಕಾಂ, ವಿದ್ಯುತ್‌ ಮತ್ತು ಎನ್‌ಬಿಎಫ್‌ಸಿಎಸ್ ಮೇಲೆ ಯಾವುದೇ ಋಣಾತ್ಮಕ ಪ್ರಭಾವ ಬೀರದ ತನ್ನ ನೀತಿಗಳಿಗೆ ಸರ್ಕಾರ ಬದ್ಧವಾಗಿರುವುದು ಅಚ್ಚರಿಯ ಗಮನಾರ್ಹ ಸಂಗತಿ ಎಂದು ವರದಿ ಸಿದ್ದಪಡಿಸಿದ ತಂಡದ ಮುಖ್ಯಸ್ಥೆ ಎಸ್‌ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯ ಕಂಠಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...