Homeಮುಖಪುಟಜಿಡಿಪಿ 4.5%, ಆರ್ಥಿಕ ಹಿಂಜರಿಕೆಯತ್ತ ಭಾರತ?

ಜಿಡಿಪಿ 4.5%, ಆರ್ಥಿಕ ಹಿಂಜರಿಕೆಯತ್ತ ಭಾರತ?

- Advertisement -
- Advertisement -

| ಬಿ.ಸಿ .ಬಸವರಾಜ್ |

ಕೇಂದ್ರ ಸರ್ಕಾರ ಇನ್ನೂ ಕೂಡ ನಮ್ಮ ಆರ್ಥಿಕತೆಯ ಗಂಭೀರತೆಯನ್ನು ಗುರುತಿಸುವ ಕೆಲಸವನ್ನೇ ಮಾಡದಿರುವುದರಿಂದ, ಇದಕ್ಕೆ ತಕ್ಕ ಪರಿಹಾರಗಳನ್ನು ಹುಡುಕುವ ಕೆಲಸವೂ ಸರ್ಕಾರದ ಕೈಯಲ್ಲಿ ಆಗುತ್ತಿಲ್ಲ. ಇದರಿಂದಾಗಿ, ಮುಂಬರುವ ದಿನಗಳು ಮತ್ತಷ್ಟು ನಿರುದ್ಯೋಗದ, ಬಡತನದ ದಿನಗಳಾಗಲಿವೆ ಎಂದೇ ಅನಿಸುತ್ತಿದೆ.

ಇತ್ತೀಚೆಗೆ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‍ರವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ” ಈಗ ಉಂಟಾಗಿರುವುದು ಕೇವಲ ಆರ್ಥಿಕ ಅಭಿವೃದ್ಧಿಯಲ್ಲಿ ಇಳಿಕೆಯೇ ಹೊರತು ಇದು ಆರ್ಥಿಕ ಹಿಂಜರಿತವಲ್ಲ. ಕೇಂದ್ರ ಸರ್ಕಾರ ಈ ಅಭಿವೃದ್ಧಿಯ ಇಳಿತವನ್ನು ಸರಿಪಡಿಸಲು ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದ್ದು ಅದರ ಒಳ್ಳೆಯ ಫಲಿತಾಂಶಗಳು ಈಗ ಬರುತ್ತಿವೆ. ಆದ್ದರಿಂದ ಭಾರತ ಸದ್ಯದಲ್ಲಿ ಆರ್ಥಿಕ ಹಿಂಜರಿತಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ” ಎಂದಿದ್ದಾರೆ.

ವಿತ್ತ ಮಂತ್ರಿಯವರು ಈ ಹೇಳಿಕೆ ನೀಡಿದನಂತರ ಬಿಡುಗಡೆಯಾದ ಜಿಡಿಪಿ ಅಂಕಿಅಂಶಗಳು 2019-20 ರ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಕೇವಲ 4.5% ರಷ್ಟೆಂದು ಹೇಳಿವೆ. ಹೋದವರ್ಷ ಅಂದರೆ 2018-19 ರ ಇದೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ 7.1% ರಷ್ಟಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 5% ರಷ್ಟಿದ್ದ ಜಿಡಿಪಿ ಈಗ 4.5% ರಷ್ಟಾಗಿರುವುದು ನೋಡಿದಾಗ ಕೇಂದ್ರ ಸರ್ಕಾರ ಆರ್ಥಿಕ ಅಭಿವೃದ್ಧಿಗೆ ಕೆಲ ತಿಂಗಳ ಹಿಂದೆ ತೆಗೆದುಕೊಂಡ ಕ್ರಮಗಳು ಏನೂ ಪರಿಣಾಮ ಉಂಟುಮಾಡಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ತಾಂತ್ರಿಕವಾಗಿ ನೋಡಿದಾಗ ವಿತ್ತ ಮಂತ್ರಿಯವರು ಹೇಳಿದಂತೆ ಇದು ಆರ್ಥಿಕ ಹಿಂಜರಿಕೆಯಲ್ಲ. ಸತತ ಎರಡು ತ್ರೈಮಾಸಿಕಗಳಲ್ಲಿ ಜಿಡಿಪಿಯು ಹೋದವರ್ಷಕ್ಕಿಂತ ಕಡಿಮೆಯಾದರೆ ಅಂದರೆ ನಕಾರಾತ್ಮಕ ಬೆಳವಣಿಗೆ (Negative growth) ತೋರಿಸಿದರೆ ಆಗ ಅರ್ಥಶಾಸ್ತ್ರೀಯವಾಗಿ ಅದನ್ನು ಆರ್ಥಿಕ ಹಿಂಜರಿತ (Recession) ಎನ್ನುತ್ತಾರೆ. ಹಾಗಾಗಿ ಭಾರತದಂತ ಬೆಳೆಯುತ್ತಿರುವ ಆರ್ಥಿಕತೆ ಸಾಮಾನ್ಯವಾಗಿ ಹಿಂಜರಿತದ ಮಟ್ಟಕ್ಕೆ ಹೋಗುವುದಿಲ್ಲ. ಆದರೆ, ಕಳೆದ ಆರೇಳು ತ್ರೈಮಾಸಿಕಗಳಿಂದ ಸತತವಾಗಿ ಇಳಿಯುತ್ತಿರುವ ಜಿಡಿಪಿ ಭಾರತದಂತ ಬೃಹತ್ ದೇಶಕ್ಕೆ ಆರ್ಥಿಕ ಹಿಂಜರಿತದಷ್ಟೇ ಕೆಟ್ಟ ಪರಿಣಾಮ ಉಂಟುಮಾಡುತ್ತದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ.

ಈಗಲಂತೂ ನಮ್ಮ ಆರ್ಥಿಕ ಪರಿಸ್ಥಿತಿ ಹಿಂಜರಿಕೆಗೆ ಹತ್ತಿರವಿರುವಷ್ಟು ಗಂಭೀರವಾಗಿದೆ ಎಂಬುದು ಒಂದೆರಡು ಮುಖ್ಯ ಅಂಶಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಮೊದಲನೆಯದಾಗಿ, ತಯಾರಿಕಾ ಕ್ಷೇತ್ರ (Manufacturing sector) ಹೋದ ವರ್ಷದ (2018-19) ಎರಡನೇ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷ -1% ಬೆಳವಣಿಗೆ ತೋರಿಸಿದೆ. ಅಂದರೆ ಶೇ ಒಂದರಷ್ಟು ಬೆಳವಣಿಗೆ ಇಳಿಮುಖವಾಗಿದ್ದು (Negative growth) ಈ ವಲಯ ಹಿಂಜರಿತವನ್ನು ತೋರಿಸುತ್ತಿದೆ. ತಯಾರಿಕಾ ಕ್ಷೇತ್ರ ಒಟ್ಟು ಕೈಗಾರಿಕಾ ವಲಯದ ಪ್ರಮುಖ ಭಾಗವಾಗಿದ್ದು ಇದರ ನೆಗೆಟಿವ್ ಗ್ರೋಥ್‍ನಿಂದಾಗಿಯೇ ಕೈಗಾರಿಕಾ ಕ್ಷೇತ್ರ ಒಟ್ಟಾರೆಯಾಗಿ ಈಗ ಕೇವಲ 0.52% ರಷ್ಟು ಮಾತ್ರ ಬೆಳವಣಿಗೆ ದಾಖಲಿಸಿದೆ.

ಜೊತೆಗೆ ತಯಾರಿಕಾ ಕ್ಷೇತ್ರ ದೇಶದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕ್ಷೇತ್ರವೂ ಆಗಿದ್ದು ಇಲ್ಲಿಯ ಹಿಂಜರಿತ ಮತ್ತಷ್ಟು ಉದ್ಯೋಗ ನಷ್ಟಕ್ಕೆ ಎಡೆಮಾಡಿಕೊಡಲಿದೆ. ಇದರಿಂದಾಗಿ ಇಡೀ ದೇಶದಲ್ಲಿ ಮತ್ತಷ್ಟು ನಿರುದ್ಯೋಗ, ಮತ್ತಷ್ಟು ಇಳಿಮುಖವಾಗುವ ಗ್ರಾಹಕ ಬೇಡಿಕೆ ಮತ್ತು ಅದರಿಂದಾಗಿ ಮತ್ತಷ್ಟು ಆರ್ಥಿಕ ಹಿಂಜರಿಕೆ. ಹೀಗೆ, ಈಗಿನ ಆರ್ಥಿಕ ಅಭಿವೃದ್ಧಿ ಇಳಿಕೆ ಆರ್ಥಿಕ ಹಿಂಜರಿತವಾಗುವ ಲಕ್ಷಣಗಳು ಇಲ್ಲಿ ಕಾಣಿಸುತ್ತಿವೆ.

ಇನ್ನು, ಈಗಿನ ಒಟ್ಟು ಜಿಡಿಪಿಯ 4.5% ನಲ್ಲಿ ಸರ್ಕಾರದ ವೆಚ್ಚವನ್ನು (Government expenditure) ಕಳೆದು ನೋಡಿದರೆ ಕಂಡುಬರುವ ಜಿಡಿಪಿ ಬೆಳವಣಿಗೆ ದರ ಕೇವಲ 3%. ಉಳಿದ ಸರ್ಕಾರೇತರ ಜಿಡಿಪಿಯಲ್ಲಿ ಖಾಸಗಿ ಬಳಕೆಯ ವೆಚ್ಚ (private consumption expenditure), ಖಾಸಗಿ ಬಂಡವಾಳ (private investment ) ಮತ್ತು ಒಟ್ಟು ರಫ್ತು (Net exports) ಬರುತ್ತವೆ.

ಈ ಸರ್ಕಾರೇತರ ಜಿಡಿಪಿಯ ಭಾಗದ ಬೆಳವಣಿಗೆ ಈ ಎರಡನೇ ತ್ರೈಮಾಸಿಕದಲ್ಲಿ ಕೇವಲ 3% ಇದೆ. ಯಾವಾಗಲೂ ದೇಶದ ಜಿಡಿಪಿಯಲ್ಲಿ ಸರ್ಕಾರೇತರ ಜಿಡಿಪಿಯ ಪಾಲು ಶೇ 87 ರಿಂದ ಶೇ 92 ರಷ್ಟಿರುತ್ತದೆ. ಈ ತ್ರೈಮಾಸಿಕದಲ್ಲಿ ಇದರ ಪಾಲು ಶೇ 87 ರಷ್ಟಿದೆ.

ಅಂದರೆ, ದೇಶದ ಜಿಡಿಪಿಯಲ್ಲಿ ಶೇ 87 ರಷ್ಟಿರುವ ಸರ್ಕಾರೇತರ ಜಿಡಿಪಿ ಕೇವಲ 3% ರಷ್ಟು ಮಾತ್ರ ಬೆಳವಣಿಗೆಯಾಗಿದೆ ಎಂದರೆ, ದೇಶದ ಆರ್ಥಿಕ ಸ್ಥಿತಿಯ ಗಂಭೀರತೆಯನ್ನು ನಾವು ಅರ್ಥ ಮಾಡಿಕೊಳ್ಳಬಹುದು.

ತಯಾರಿಕಾ ಕ್ಷೇತ್ರದ ನಕಾರಾತ್ಮಕ ಬೆಳವಣಿಗೆ ಮತ್ತು ಉಳಿದೆಲ್ಲ ಕ್ಷೇತ್ರಗಳ ಕನಿಷ್ಟ ಬೆಳವಣಿಗೆ ಮೇಲಿನ ಅಂಶವನ್ನು ಸ್ಪಷ್ಟಪಡಿಸುತ್ತಿವೆ.

ಅದೇ ಸರ್ಕಾರೀ ವೆಚ್ಚ ಈ ಆರ್ಥಿಕ ವರ್ಷದಲ್ಲಿ 12.3% ವೇಗದಲ್ಲಿ ಬೆಳೆದಿದೆ. ಇದರ ಕೊಡುಗೆಯ ಫಲವಾಗಿಯೇ ಜಿಡಿಪಿ 4.5% ರಷ್ಟಾದರೂ ಇದೆ. ಆದರೆ ಈ ಸರ್ಕಾರೀ ವೆಚ್ಚ ಆಡಳಿತ, ರಕ್ಷಣೆ ಮತ್ತು ಇತರ ಕೆಲವು ಸೇವೆಗಳಿಗೆ ಮಾತ್ರ ಹಂಚಲ್ಪಟ್ಟಿರುವುದರಿಂದ ಜನಸಾಮಾನ್ಯರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವಲ್ಲಿ ಸೋತಿದೆ.

ಇದೇ ಸರ್ಕಾರೀ ವೆಚ್ಚವು ಗ್ರಾಮೀಣ ಉದ್ಯೋಗ ಖಾತ್ರಿ ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯತ್ತ ಕಡೆ ಗಮನ ಕೇಂದ್ರೀಕರಿಸಿದ್ದರೆ ಜನಗಳ ಕೈಯಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿ ಆರ್ಥಿಕ ಮುಂಚಲನೆ ಸಾಧ್ಯವಾಗುತ್ತಿತ್ತು.

ಜೊತೆಗೆ ಬಂಡವಾಳ ಹೂಡಿಕೆಯ ವೇಗವು ಕೇವಲ 1.02% ರಷ್ಟಿದ್ದು ಇದು ಆರ್ಥಿಕ ಹಿಂಜರಿಕೆಯಿಂದ ಪಾರುಮಾಡುವುದಕ್ಕಾಗಲೀ ಮತ್ತು ಉದ್ಯೋಗ ಸೃಷ್ಟಿಗಾಗಲೀ ಏನೇನೂ ಸಾಲದೆನಿಸಿದೆ.ಒಟ್ಟಾರೆಯಾಗಿ, ದೇಶ ತಾಂತ್ರಿಕವಾಗಿ ಆರ್ಥಿಕ ಹಿಂಜರಿತಕ್ಕೆ ಒಳಗಾಗದೆ ಇದ್ದರೂ, ವಲಯಾವಾರು ಪರಿಸ್ಥಿತಿಯನ್ನು ಗಮನಿಸಿದಾಗ ಅಂತಹ ಹಿಂಜರಿತದಷ್ಟೇ ಸ್ಥಿತಿ ಗಂಭೀರವಾಗಿದೆ.ಆದರೆ, ಕೇಂದ್ರ ಸರ್ಕಾರ ಇನ್ನೂ ಕೂಡ ನಮ್ಮ ಆರ್ಥಿಕತೆಯ ಗಂಭೀರತೆಯನ್ನು ಗುರುತಿಸುವ ಕೆಲಸವನ್ನೇ ಮಾಡದಿರುವುದರಿಂದ, ಇದಕ್ಕೆ ತಕ್ಕ ಪರಿಹಾರಗಳನ್ನು ಹುಡುಕುವ ಕೆಲಸವೂ ಸರ್ಕಾರದ ಕೈಯಲ್ಲಿ ಆಗುತ್ತಿಲ್ಲ.ಇದರಿಂದಾಗಿ, ಮುಂಬರುವ ದಿನಗಳು ಮತ್ತಷ್ಟು ನಿರುದ್ಯೋಗದ, ಬಡತನದ ದಿನಗಳಾಗಲಿವೆ ಎಂದೇ ಅನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...