HomeUncategorizedಆತಂಕದ ಸುಳಿಯಲ್ಲಿದೆ ಗೇರು ಹಣ್ಣಿನ ಪೆನ್ನಿ ನಂಬಿ ಬದುಕಿದ್ದ ಕುಟುಂಬಗಳ ಬದುಕು!

ಆತಂಕದ ಸುಳಿಯಲ್ಲಿದೆ ಗೇರು ಹಣ್ಣಿನ ಪೆನ್ನಿ ನಂಬಿ ಬದುಕಿದ್ದ ಕುಟುಂಬಗಳ ಬದುಕು!

- Advertisement -
- Advertisement -

ಗೇರು ಬೀಜ ಅಥವಾ ಗೋಡಂಬಿ ಹಣ್ಣಿಗೆ ಜಗತ್ತಿನ ಮೂಲೆ ಮೂಲೆಯಲ್ಲಿ ಅಪಾರ ಬೇಡಿಕೆಯಿದೆ. 500 ವರ್ಷಗಳ ಹಿಂದೆ ಬ್ರಿಟಿಷರು ಭಾರತಕ್ಕೆ ತಂದ ಈ ಗೋಡಂಬಿ ಅಥವಾ ಗೇರು ಹಣ್ಣು ಭಾರತದ ಪಶ್ಚಿಮ ಕರಾವಳಿಯ ಉದ್ದಕ್ಕೂ ಹಬ್ಬಿದೆ. ಗೋವಾದ ಉತ್ತರ ತುದಿಯಿಂದ ಕೇರಳದ ದಕ್ಷಿಣ ತುದಿಯವರೆಗೆ ಕರಾವಳಿಯ ಪ್ರದೇಶದಲ್ಲಿ ಬೇಸಿಗೆಯಲ್ಲಿ ಅಪಾರ ಪ್ರಮಾಣದ ಗೇರು ಹಣ್ಣನ್ನು ಬೆಳೆಯಲಾಗುತ್ತದೆ.

ಯಾವುದೇ ಪೋಷಣೆಯಿಲ್ಲದೇ ಬಿದ್ದಲ್ಲಿ ಬೇರೂರಿ ಕೃಷಿಕರಿಗೆ ಕೈತುಂಬ ವರಮಾನ ನೀಡುವ ಗೇರು ಹಣ್ಣಿನ ಬೆಳೆ ಇತ್ತೀಚೆಗೆ ನಶಿಸಿ ಹೋಗುತ್ತಿದೆ. ಮಂಗಳೂರು, ಕೊಚ್ಚಿ, ಪಣಜಿಂಗಳಲ್ಲೂ ಗೋಡಂಬಿ ಫ್ಯಾಕ್ಟರಿಗಳು ಕಡಿಮೆಯಾಗುತ್ತಿವೆ. ಜೊತೆಗೆ ಗೇರು ಹಣ್ಣಿನ ಇನ್ನೊಂದು ವಿಶೇಷ ಪಾನೀಯವಾದ ಸಾಂಪ್ರದಾಯಿಕ ಕ್ಯಾಶ್ಯೂ ಪೆನ್ನಿ (ಮದ್ಯ) ಉತ್ಪಾದನೆಯೂ ಕುಸಿಯ ತೊಡಗಿದೆ.

ನೀವು ಸಾಂಪ್ರದಾಯಿಕ ಉಡುಗೆ ತೊಟ್ಟು ಕಚೇರಿಗೆ (ಆಫೀಸ್) ಹೋಗಲು ಇಚ್ಚಿಸುವಿರೇ? - Quora

ಮೊದಲೇ ಹೇಳಿದಂತೆ ಗೇರು ಹಣ್ಣು ಬಹು ಉಪಯೋಗದ ವಸ್ತು. ಗೇರು ಹಣ್ಣಿನ ಗೋಡಂಬಿ ಬೀಜವು  ಅಡಿಗೆಗಳಿಗೆ, ಖಾದ್ಯಗಳಿಗೆ ಬಳಕೆಯಾದರೆ, ಗೇರು ಹಣ್ಣು ದನಗಳಿಗೆ, ಪಶು ಪಕ್ಷಿಗಳಿಗೆ ಆಹಾರವಾಗಿ, ತೋಟಕ್ಕೆ ಗೊಬ್ಬರವಾಗಿ ಹಾಗೂ ಮದ್ಯ ತಯಾರಿಕೆಗೂ ಬಳಕೆಯಾಗುತ್ತದೆ. ಈ ಗೇರು ಹಣ್ಣಿನ ಪೆನ್ನಿ ಹೆಚ್ಚಾಗಿ ಕೇರಳದಲ್ಲಿ ಮಾತ್ರ ತಯಾರಾಗುತ್ತದೆ. ಕರ್ನಾಟಕ ಹಾಗೂ ಕೇರಳದ ಕೆಲವು ಕಡೆ ಮನೆಯಲ್ಲಿ ಸ್ವಂತ ಬಳಕೆಗಾಗಿಯೂ ಗೇರು ಹಣ್ಣಿನ ಪಾನೀಯವನ್ನು ತಯಾರಿಸಲಾಗುತ್ತದೆ. ಆದರೆ ಗೇರು ಹಣ್ಣಿನ ಪೆನ್ನಿಗೆ ಭಾರತದಲ್ಲಿ ಪ್ರಸಿದ್ಧವಾಗಿರುವ ಸ್ಥಳ ಗೋವಾ. ಇಲ್ಲಿ ಲೆಕ್ಕವಿಲ್ಲದಷ್ಟು ಸ್ವಾದಿಷ್ಟವಾದ ದೇಸಿ ಫೆನಿಗಳು ತಯಾರಾಗುತ್ತವೆ.

ಇತ್ತೀಚೆಗೆ ಯಂತ್ರ ಆಧಾರಿತ ಮಧ್ಯ ತಯಾರಿಕಾ ಘಟಕಗಳ ಸ್ಥಾಪನೆಯ ಕಾರಣದಿಂದ ಮನೆಯಲ್ಲಿಯೇ ತಯಾರಾಗುತ್ತಿದ್ದ ರಾಸಾಯನಿಕ ಮುಕ್ತ ಸಾವಯವ ಪೆನ್ನಿಗೆ ಈಗ ಬೇಡಿಕೆ ಕಡಿಮೆಯಾಗಿದೆ. ಗೇರು ಹಣ್ಣನ್ನು ಕಾಡಿನಿಂದ ಸಂಗ್ರಹಿಸಿ, ಅದರಿಂದ ಹಣ್ಣಿನ ರಸವನ್ನು ತಯಾರಿಸಿ, ಅದನ್ನು ಭಟ್ಟಿ ಇಳಿಸಿ ಮದ್ಯ ತಯಾರಿಸುವ ಪದ್ಧತಿ ಈಗ ನಶಿಸುತ್ತಿದೆ. ಇದನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಗಳ ಭವಿಷ್ಯವೂ ಆತಂಕಕ್ಕೆ ಸಿಲುಕಿದೆ.

ಗೋವಾದಲ್ಲಿ ದಶಕಗಳಿಂದ ದೇಸಿ ಮದ್ಯವನ್ನು ಮನೆಯಲ್ಲಿಯೇ ತಯಾರಿಸುತ್ತಿದ್ದ ಕುಟುಂಬ ಗಾಂವಕರ್ ಫ್ಯಾಮಿಲಿ. ಕಟ್ಟಿಗೆಯ ಕಡ್ಡಿಯನ್ನು ಬಳಸಿ ಕಾಡಿನಿಂದ ಹಣ್ಣನ್ನು ಆರಿಸಿ ತಂದು ಫೆನಿಯನ್ನು ತಯಾರಿಸುತ್ತಿದ್ದರು. ಆದರೆ ಸರ್ಕಾರ ಗೇರು ಹಣ್ಣುಗಳನ್ನು ಕಟಾವು ಮಾಡಲು ದೊಡ್ಡ ದೊಡ್ಡ ಮಾಲೀಕರಿಗೆ ಟೆಂಡರ್‌ ನೀಡುತ್ತಿದೆ. ಹೀಗಾಗಿ ನಮಗೆ ಏನೂ ಸಿಗುತ್ತಿಲ್ಲ ಎಂದು ಗಾಂವಕರ್ ಕುಟುಂಬದ ದೃಪತಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಾಡಿನಿಂದ ಗೇರು ಹಣ್ಣು ಆರಿಸಲು ಮಕ್ಕಳು ದೃಪತಿ ಅವರಿಗೆ ಸಹಾಯ ಮಾಡುತ್ತಾರೆ. ಕಾಡಿನಿಂದ ತಂದ ಹಣ್ಣಿನಿಂದ ಕುಟುಂಬಸ್ಥರು ಸೇರಿ ಬೀಜವನ್ನು ಬೇರ್ಪಡಿಸುತ್ತಾರೆ. ನಂತರ ಗೇರು ಹಣ್ಣನ್ನು ತುಳಿದು ಅದರಿಂದ ರಸ ತೆಗೆಯುವ ಕಾರ್ಯ. ದೃಪತಿ ಗಾಂವಕಾರ್ ಅವರ ಮಕ್ಕಳು ಒಂದು ತೊಟ್ಟು ಗೇರು ಹಣ್ಣಿನ ರಸವನ್ನೂ ವ್ಯರ್ಥ ಮಾಡುವುದಿಲ್ಲ. ಉಳಿಕೆ ತ್ಯಾಜ್ಯ ಹಣ್ಣನ್ನು ಕುಟುಂಬಸ್ಥರು ರೈತರಿಗೆ ನೀಡುತ್ತಾರೆ. ಗೇರು ಹಣ್ಣಿನ ತ್ಯಾಜ್ಯ ಹಸು ಕುರಿಗಳಿಗೆ ಒಳ್ಳೆಯ ಆಹಾರವಾಗಿದೆ. ಹಾಗೇ ರೈತರ ತೋಟಕ್ಕೆ ಒಳ್ಲೆಯ ಗೊಬ್ಬರವೂ ಹೌದು.

ತಾಮ್ರದ ದೊಡ್ಡ ಹಂಡೆಗೆ ಗೇರು ಹಣ್ಣಿನ ರಸವನ್ನು ಸುರಿದು, ಹುತ್ತದ ಮಣ್ಣಿನಿಂದ ಹಂಡೆಯನ್ನು ಭದ್ರ ಪಡಿಸಿದೆರೆ ಪೆನ್ನಿ ತಯಾರಿಸುವ ಅರ್ಧ ಕೆಲಸ ಮುಗಿಯುತ್ತದೆ. ನಂತರ ಎಂಟುಗಂಟೆಗಳ ಕಾಲ ಸಮನಾದ ಶಾಖದಲ್ಲಿ ಗೇರು ಹಣ್ಣಿನ ರಸವನ್ನು ಕುದಿಸಿದರೆ ನೀರಿನ ಅಂಶ ಆವಿಯಾಗಿ ಪೆನ್ನಿ ಮಾತ್ರ ಹಂಡೆಗೆ ಜೋಡಿಸಿದ ಪೈಪ್ ಮೂಲಕ ಹೊರ ಬರುತ್ತದೆ. ಆಗ 40-45% ಆಲ್ಕೋಹಾಲ್ ಹೊಂದಿದ ಗೇರು ಹಣ್ಣಿನ ದೇಸಿ ಪೆನ್ನಿ ಸಿದ್ದವಾಗುತ್ತದೆ.

ಇದನ್ನೂ ಓದಿ : ಭದ್ರಾ  ಮೇಲ್ದಂಡೆ ಯೋಜನೆ ಭ್ರಷ್ಟಾಚಾರ: ಬಾಂಬ್ ಸಿಡಿಸಿದ ಹೆಚ್‌. ವಿಶ್ವನಾಥ್‌!

ದೃಪತಿ ಗಾಂವಕಾರ್ ಕುಟುಂಬ ವರ್ಷಕ್ಕೆ 175 ಲೀಟರ್ ಮಧ್ಯವನ್ನು ತಯಾರಿಸುತ್ತಾರೆ. ಆದರೆ ಇತ್ತೀಚೆಗೆ ಹಳ್ಳಿಗರೆಲ್ಲರೂ ಪಟ್ಟಣ ಸೇರಿರುವುದರಿಂದ ಗಾಂವಕಾರ್ ಕುಟುಂಬದ ದೇಸಿ ಪೆನ್ನಿಗೆ ಬೇಡಿಕೆಯೇ ಇಲ್ಲ.

ಮನೆಯಲ್ಲಿ ತಯಾರಿಸದ ಪೆನ್ನಿಗೆ ಯಾವುದೇ ರಾಸಾಯನಿಕೆ ಸೇರುವುದಿಲ್ಲ. ಅತ್ಯಂತ ಸಾವಯವವಾದ ಈ ಪೆನ್ನಿಗೆ  ಸ್ವಾದಿಷ್ಟ ರುಚಿ ಇದೆ. ಹಿಂದೆ ಸುತ್ತ ಮುತ್ತ ಹಳ್ಳಿಗರೆಲ್ಲ ನಮ್ಮಲ್ಲಿಯೇ ಪೆನ್ನಿ ಖರೀದಿಸುತ್ತಿದ್ದರು. ಈಗ ನಮಗೆ ಬೇಡಿಕೆಯೇ ಇಲ್ಲ. ಮಾರ್ಚ್‌-ಜೂನ್ ಸೀಸನ್‌ನಲ್ಲಿ ದಿನಕ್ಕೆ 300 ರೂಪಾಯಿ ಸಂಪಾದನೆಯೂ ಕಷ್ಟವಾಗಿದೆ. ಹಿಂದೆಲ್ಲ ಒಂದು ಸೀಸನ್‌ನಲ್ಲಿ 50,000 ರೂಪಾಯಿ ಸಂಪಾದಿಸುತ್ತಿದ್ದೆವು ಎಂದು ಗಾಂವಕಾರ್ ಕುಟುಂಬಸ್ಥರು ಹೇಳುತ್ತಾರೆ.

ಗೋವಾದ ದೊಡ್ಡ ಪೆನ್ನಿ ಬ್ರಾಂಡ್ ಖಜೂಲೋ ಈಗ ದೇಸಿ ಪೆನ್ನಿಗಳ ಸಹಾಯಕ್ಕೆ ಮುಂದೆ ಬಂದಿದೆ. ಗಂವಕಾರ್ ತರಹದ ನೂರಾರು ಕುಟುಂಬಗಳಿಂದ ಪೆನ್ನಿಯನ್ನು ಖರೀದಿಸಿ ದೊಡ್ಡ ಮಾರುಕಟ್ಟೆಯಲ್ಲಿ ಅದನ್ನು ಖಜೂಲೊ ಕಂಪನಿಯವರು ಮಾರುತ್ತಿದ್ದಾರೆ. ಆದರೆ ಪೆನ್ನಿ ದೇಸಿ ಮಧ್ಯದ ಅಡಿಯಲ್ಲಿ ಬರುವ ಕಾರಣ ಗೋವಾದ ಆಚೆಗೆ ಅದಕ್ಕೆ ಪ್ರವೇಶವಿಲ್ಲ. ಜೊತೆಗೆ ವರ್ಷದಿಂದ ವರ್ಷಕ್ಕೆ ದೇಸಿ ಪೆನ್ನಿ ಬೇಡಿಕೆ ಇಳಿಕೆಯಾಗುತ್ತಿದೆ. ಹಿಂದೆ ಗೋವಾದ ಆಕರ್ಷಣೆಗಳಲ್ಲಿ ಕ್ಯಾಷ್ಯೂ ಪೆನ್ನಿ ಕೂಡ ಒಂದಾಗಿತ್ತು ಎಂದು ಖಜೂಲೊ ಸಂಸ್ಥೆಯ ಮಾಲೀಕರು ತಿಳಿಸುತ್ತಾರೆ.

ಸರ್ಕಾರದ ಗೇರುಹಣ್ಣು ಕೀಳುವ ಟೆಂಡರ್ ದೊಡ್ಡ ದೊಡ್ಡ ಕಂಪನಿಗಳಿಗೆ ಪಾಲಾಗುತ್ತಿರುವುದರಿಂದ ಸಣ್ಣ ಸಣ್ಣ ಕುಟುಂಬಗಳಿಗೆ ಇಂದು ಏನೂ ಸಿಗುತ್ತಿಲ್ಲ. ಜೊತೆಗೆ ದೊಡ್ಡ ದೊಡ್ಡ ಮಧ್ಯ ತಯಾರಿಕರು ಡಿಸ್ಟಿಲರಿಯಲ್ಲಿ ಪೆನ್ನಿಯನ್ನು ತಯಾರಿಸಿ ಅಗ್ಗದ ಬೆಲೆಗೆ ಮಾರುತ್ತಿದ್ದಾರೆ. ದೊಡ್ಡ ಕಂಪನಿಗಳ ಜೊತೆ ದೃಪತಿ ಗಾಂವಕಾರ್ ತರಹದವರು ಸ್ಪರ್ಧಿಸಲು ಸಾಧ್ಯವಿಲ್ಲ. ಸರ್ಕಾರ ದೇಸಿ ಪೆನ್ನಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮೂಲಕ ಪೆನ್ನಿ ತಯಾರಕ ಕುಟುಂಬಗಳ ಜೊತೆ ನಿಲ್ಲಬೇಕಿದೆ. ಗೇರು ಹಣ್ಣಿನ ಟೆಂಡರ್ ಬೆಲೆಯನ್ನು ತಗ್ಗಿಸಿ ಪೆನ್ನಿ ತಯಾರಕರ ಬದುಕು ಬೀದಿಗೆ ಬೀಳದಂತೆ ಸರ್ಕಾರ ನೋಡಿಕೊಳ್ಳಬೇಕಿದೆ. ಕೊರೋನಾ ಕಾರಣದಿಂದ ಗೋವಾ ಮತ್ತು ಪಶ್ಚಿಮ ಕರಾವಳಿಯಲ್ಲಿ ಪ್ರವಾಸೋದ್ಯಮ ನಿಂತು ಹೋಗಿದೆ. ಮತ್ತೊಮ್ಮೆ ಪ್ರವಾಸಿಗರನ್ನು ಗೋವಾದತ್ತ ಆಕರ್ಷಿಸಲು ಗೇರುಹಣ್ಣಿನ ಸಾವಯವ ಪೆನ್ನಿ ಕೂಡ ಮಹತ್ವದ ಪಾತ್ರ ವಹಿಸುತ್ತದೆ. ಸ್ವಾದಿಷ್ಟ ಮತ್ತು ಸುರಕ್ಷಿತ ವಾದ 500 ವರ್ಷ ಇತಿಹಾಸವಿರುವ ಪೋರ್ಚುಗೀಸ್ ಮೂಲದ ಪೆನ್ನಿಯ ಭವಿಷ್ಯ ಸರ್ಕಾರಗಳ ಕೈಯಲ್ಲಿ ನರಳಾಡುತ್ತಿದೆ.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...