HomeUncategorizedಆತಂಕದ ಸುಳಿಯಲ್ಲಿದೆ ಗೇರು ಹಣ್ಣಿನ ಪೆನ್ನಿ ನಂಬಿ ಬದುಕಿದ್ದ ಕುಟುಂಬಗಳ ಬದುಕು!

ಆತಂಕದ ಸುಳಿಯಲ್ಲಿದೆ ಗೇರು ಹಣ್ಣಿನ ಪೆನ್ನಿ ನಂಬಿ ಬದುಕಿದ್ದ ಕುಟುಂಬಗಳ ಬದುಕು!

- Advertisement -
- Advertisement -

ಗೇರು ಬೀಜ ಅಥವಾ ಗೋಡಂಬಿ ಹಣ್ಣಿಗೆ ಜಗತ್ತಿನ ಮೂಲೆ ಮೂಲೆಯಲ್ಲಿ ಅಪಾರ ಬೇಡಿಕೆಯಿದೆ. 500 ವರ್ಷಗಳ ಹಿಂದೆ ಬ್ರಿಟಿಷರು ಭಾರತಕ್ಕೆ ತಂದ ಈ ಗೋಡಂಬಿ ಅಥವಾ ಗೇರು ಹಣ್ಣು ಭಾರತದ ಪಶ್ಚಿಮ ಕರಾವಳಿಯ ಉದ್ದಕ್ಕೂ ಹಬ್ಬಿದೆ. ಗೋವಾದ ಉತ್ತರ ತುದಿಯಿಂದ ಕೇರಳದ ದಕ್ಷಿಣ ತುದಿಯವರೆಗೆ ಕರಾವಳಿಯ ಪ್ರದೇಶದಲ್ಲಿ ಬೇಸಿಗೆಯಲ್ಲಿ ಅಪಾರ ಪ್ರಮಾಣದ ಗೇರು ಹಣ್ಣನ್ನು ಬೆಳೆಯಲಾಗುತ್ತದೆ.

ಯಾವುದೇ ಪೋಷಣೆಯಿಲ್ಲದೇ ಬಿದ್ದಲ್ಲಿ ಬೇರೂರಿ ಕೃಷಿಕರಿಗೆ ಕೈತುಂಬ ವರಮಾನ ನೀಡುವ ಗೇರು ಹಣ್ಣಿನ ಬೆಳೆ ಇತ್ತೀಚೆಗೆ ನಶಿಸಿ ಹೋಗುತ್ತಿದೆ. ಮಂಗಳೂರು, ಕೊಚ್ಚಿ, ಪಣಜಿಂಗಳಲ್ಲೂ ಗೋಡಂಬಿ ಫ್ಯಾಕ್ಟರಿಗಳು ಕಡಿಮೆಯಾಗುತ್ತಿವೆ. ಜೊತೆಗೆ ಗೇರು ಹಣ್ಣಿನ ಇನ್ನೊಂದು ವಿಶೇಷ ಪಾನೀಯವಾದ ಸಾಂಪ್ರದಾಯಿಕ ಕ್ಯಾಶ್ಯೂ ಪೆನ್ನಿ (ಮದ್ಯ) ಉತ್ಪಾದನೆಯೂ ಕುಸಿಯ ತೊಡಗಿದೆ.

ನೀವು ಸಾಂಪ್ರದಾಯಿಕ ಉಡುಗೆ ತೊಟ್ಟು ಕಚೇರಿಗೆ (ಆಫೀಸ್) ಹೋಗಲು ಇಚ್ಚಿಸುವಿರೇ? - Quora

ಮೊದಲೇ ಹೇಳಿದಂತೆ ಗೇರು ಹಣ್ಣು ಬಹು ಉಪಯೋಗದ ವಸ್ತು. ಗೇರು ಹಣ್ಣಿನ ಗೋಡಂಬಿ ಬೀಜವು  ಅಡಿಗೆಗಳಿಗೆ, ಖಾದ್ಯಗಳಿಗೆ ಬಳಕೆಯಾದರೆ, ಗೇರು ಹಣ್ಣು ದನಗಳಿಗೆ, ಪಶು ಪಕ್ಷಿಗಳಿಗೆ ಆಹಾರವಾಗಿ, ತೋಟಕ್ಕೆ ಗೊಬ್ಬರವಾಗಿ ಹಾಗೂ ಮದ್ಯ ತಯಾರಿಕೆಗೂ ಬಳಕೆಯಾಗುತ್ತದೆ. ಈ ಗೇರು ಹಣ್ಣಿನ ಪೆನ್ನಿ ಹೆಚ್ಚಾಗಿ ಕೇರಳದಲ್ಲಿ ಮಾತ್ರ ತಯಾರಾಗುತ್ತದೆ. ಕರ್ನಾಟಕ ಹಾಗೂ ಕೇರಳದ ಕೆಲವು ಕಡೆ ಮನೆಯಲ್ಲಿ ಸ್ವಂತ ಬಳಕೆಗಾಗಿಯೂ ಗೇರು ಹಣ್ಣಿನ ಪಾನೀಯವನ್ನು ತಯಾರಿಸಲಾಗುತ್ತದೆ. ಆದರೆ ಗೇರು ಹಣ್ಣಿನ ಪೆನ್ನಿಗೆ ಭಾರತದಲ್ಲಿ ಪ್ರಸಿದ್ಧವಾಗಿರುವ ಸ್ಥಳ ಗೋವಾ. ಇಲ್ಲಿ ಲೆಕ್ಕವಿಲ್ಲದಷ್ಟು ಸ್ವಾದಿಷ್ಟವಾದ ದೇಸಿ ಫೆನಿಗಳು ತಯಾರಾಗುತ್ತವೆ.

ಇತ್ತೀಚೆಗೆ ಯಂತ್ರ ಆಧಾರಿತ ಮಧ್ಯ ತಯಾರಿಕಾ ಘಟಕಗಳ ಸ್ಥಾಪನೆಯ ಕಾರಣದಿಂದ ಮನೆಯಲ್ಲಿಯೇ ತಯಾರಾಗುತ್ತಿದ್ದ ರಾಸಾಯನಿಕ ಮುಕ್ತ ಸಾವಯವ ಪೆನ್ನಿಗೆ ಈಗ ಬೇಡಿಕೆ ಕಡಿಮೆಯಾಗಿದೆ. ಗೇರು ಹಣ್ಣನ್ನು ಕಾಡಿನಿಂದ ಸಂಗ್ರಹಿಸಿ, ಅದರಿಂದ ಹಣ್ಣಿನ ರಸವನ್ನು ತಯಾರಿಸಿ, ಅದನ್ನು ಭಟ್ಟಿ ಇಳಿಸಿ ಮದ್ಯ ತಯಾರಿಸುವ ಪದ್ಧತಿ ಈಗ ನಶಿಸುತ್ತಿದೆ. ಇದನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಗಳ ಭವಿಷ್ಯವೂ ಆತಂಕಕ್ಕೆ ಸಿಲುಕಿದೆ.

ಗೋವಾದಲ್ಲಿ ದಶಕಗಳಿಂದ ದೇಸಿ ಮದ್ಯವನ್ನು ಮನೆಯಲ್ಲಿಯೇ ತಯಾರಿಸುತ್ತಿದ್ದ ಕುಟುಂಬ ಗಾಂವಕರ್ ಫ್ಯಾಮಿಲಿ. ಕಟ್ಟಿಗೆಯ ಕಡ್ಡಿಯನ್ನು ಬಳಸಿ ಕಾಡಿನಿಂದ ಹಣ್ಣನ್ನು ಆರಿಸಿ ತಂದು ಫೆನಿಯನ್ನು ತಯಾರಿಸುತ್ತಿದ್ದರು. ಆದರೆ ಸರ್ಕಾರ ಗೇರು ಹಣ್ಣುಗಳನ್ನು ಕಟಾವು ಮಾಡಲು ದೊಡ್ಡ ದೊಡ್ಡ ಮಾಲೀಕರಿಗೆ ಟೆಂಡರ್‌ ನೀಡುತ್ತಿದೆ. ಹೀಗಾಗಿ ನಮಗೆ ಏನೂ ಸಿಗುತ್ತಿಲ್ಲ ಎಂದು ಗಾಂವಕರ್ ಕುಟುಂಬದ ದೃಪತಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಾಡಿನಿಂದ ಗೇರು ಹಣ್ಣು ಆರಿಸಲು ಮಕ್ಕಳು ದೃಪತಿ ಅವರಿಗೆ ಸಹಾಯ ಮಾಡುತ್ತಾರೆ. ಕಾಡಿನಿಂದ ತಂದ ಹಣ್ಣಿನಿಂದ ಕುಟುಂಬಸ್ಥರು ಸೇರಿ ಬೀಜವನ್ನು ಬೇರ್ಪಡಿಸುತ್ತಾರೆ. ನಂತರ ಗೇರು ಹಣ್ಣನ್ನು ತುಳಿದು ಅದರಿಂದ ರಸ ತೆಗೆಯುವ ಕಾರ್ಯ. ದೃಪತಿ ಗಾಂವಕಾರ್ ಅವರ ಮಕ್ಕಳು ಒಂದು ತೊಟ್ಟು ಗೇರು ಹಣ್ಣಿನ ರಸವನ್ನೂ ವ್ಯರ್ಥ ಮಾಡುವುದಿಲ್ಲ. ಉಳಿಕೆ ತ್ಯಾಜ್ಯ ಹಣ್ಣನ್ನು ಕುಟುಂಬಸ್ಥರು ರೈತರಿಗೆ ನೀಡುತ್ತಾರೆ. ಗೇರು ಹಣ್ಣಿನ ತ್ಯಾಜ್ಯ ಹಸು ಕುರಿಗಳಿಗೆ ಒಳ್ಳೆಯ ಆಹಾರವಾಗಿದೆ. ಹಾಗೇ ರೈತರ ತೋಟಕ್ಕೆ ಒಳ್ಲೆಯ ಗೊಬ್ಬರವೂ ಹೌದು.

ತಾಮ್ರದ ದೊಡ್ಡ ಹಂಡೆಗೆ ಗೇರು ಹಣ್ಣಿನ ರಸವನ್ನು ಸುರಿದು, ಹುತ್ತದ ಮಣ್ಣಿನಿಂದ ಹಂಡೆಯನ್ನು ಭದ್ರ ಪಡಿಸಿದೆರೆ ಪೆನ್ನಿ ತಯಾರಿಸುವ ಅರ್ಧ ಕೆಲಸ ಮುಗಿಯುತ್ತದೆ. ನಂತರ ಎಂಟುಗಂಟೆಗಳ ಕಾಲ ಸಮನಾದ ಶಾಖದಲ್ಲಿ ಗೇರು ಹಣ್ಣಿನ ರಸವನ್ನು ಕುದಿಸಿದರೆ ನೀರಿನ ಅಂಶ ಆವಿಯಾಗಿ ಪೆನ್ನಿ ಮಾತ್ರ ಹಂಡೆಗೆ ಜೋಡಿಸಿದ ಪೈಪ್ ಮೂಲಕ ಹೊರ ಬರುತ್ತದೆ. ಆಗ 40-45% ಆಲ್ಕೋಹಾಲ್ ಹೊಂದಿದ ಗೇರು ಹಣ್ಣಿನ ದೇಸಿ ಪೆನ್ನಿ ಸಿದ್ದವಾಗುತ್ತದೆ.

ಇದನ್ನೂ ಓದಿ : ಭದ್ರಾ  ಮೇಲ್ದಂಡೆ ಯೋಜನೆ ಭ್ರಷ್ಟಾಚಾರ: ಬಾಂಬ್ ಸಿಡಿಸಿದ ಹೆಚ್‌. ವಿಶ್ವನಾಥ್‌!

ದೃಪತಿ ಗಾಂವಕಾರ್ ಕುಟುಂಬ ವರ್ಷಕ್ಕೆ 175 ಲೀಟರ್ ಮಧ್ಯವನ್ನು ತಯಾರಿಸುತ್ತಾರೆ. ಆದರೆ ಇತ್ತೀಚೆಗೆ ಹಳ್ಳಿಗರೆಲ್ಲರೂ ಪಟ್ಟಣ ಸೇರಿರುವುದರಿಂದ ಗಾಂವಕಾರ್ ಕುಟುಂಬದ ದೇಸಿ ಪೆನ್ನಿಗೆ ಬೇಡಿಕೆಯೇ ಇಲ್ಲ.

ಮನೆಯಲ್ಲಿ ತಯಾರಿಸದ ಪೆನ್ನಿಗೆ ಯಾವುದೇ ರಾಸಾಯನಿಕೆ ಸೇರುವುದಿಲ್ಲ. ಅತ್ಯಂತ ಸಾವಯವವಾದ ಈ ಪೆನ್ನಿಗೆ  ಸ್ವಾದಿಷ್ಟ ರುಚಿ ಇದೆ. ಹಿಂದೆ ಸುತ್ತ ಮುತ್ತ ಹಳ್ಳಿಗರೆಲ್ಲ ನಮ್ಮಲ್ಲಿಯೇ ಪೆನ್ನಿ ಖರೀದಿಸುತ್ತಿದ್ದರು. ಈಗ ನಮಗೆ ಬೇಡಿಕೆಯೇ ಇಲ್ಲ. ಮಾರ್ಚ್‌-ಜೂನ್ ಸೀಸನ್‌ನಲ್ಲಿ ದಿನಕ್ಕೆ 300 ರೂಪಾಯಿ ಸಂಪಾದನೆಯೂ ಕಷ್ಟವಾಗಿದೆ. ಹಿಂದೆಲ್ಲ ಒಂದು ಸೀಸನ್‌ನಲ್ಲಿ 50,000 ರೂಪಾಯಿ ಸಂಪಾದಿಸುತ್ತಿದ್ದೆವು ಎಂದು ಗಾಂವಕಾರ್ ಕುಟುಂಬಸ್ಥರು ಹೇಳುತ್ತಾರೆ.

ಗೋವಾದ ದೊಡ್ಡ ಪೆನ್ನಿ ಬ್ರಾಂಡ್ ಖಜೂಲೋ ಈಗ ದೇಸಿ ಪೆನ್ನಿಗಳ ಸಹಾಯಕ್ಕೆ ಮುಂದೆ ಬಂದಿದೆ. ಗಂವಕಾರ್ ತರಹದ ನೂರಾರು ಕುಟುಂಬಗಳಿಂದ ಪೆನ್ನಿಯನ್ನು ಖರೀದಿಸಿ ದೊಡ್ಡ ಮಾರುಕಟ್ಟೆಯಲ್ಲಿ ಅದನ್ನು ಖಜೂಲೊ ಕಂಪನಿಯವರು ಮಾರುತ್ತಿದ್ದಾರೆ. ಆದರೆ ಪೆನ್ನಿ ದೇಸಿ ಮಧ್ಯದ ಅಡಿಯಲ್ಲಿ ಬರುವ ಕಾರಣ ಗೋವಾದ ಆಚೆಗೆ ಅದಕ್ಕೆ ಪ್ರವೇಶವಿಲ್ಲ. ಜೊತೆಗೆ ವರ್ಷದಿಂದ ವರ್ಷಕ್ಕೆ ದೇಸಿ ಪೆನ್ನಿ ಬೇಡಿಕೆ ಇಳಿಕೆಯಾಗುತ್ತಿದೆ. ಹಿಂದೆ ಗೋವಾದ ಆಕರ್ಷಣೆಗಳಲ್ಲಿ ಕ್ಯಾಷ್ಯೂ ಪೆನ್ನಿ ಕೂಡ ಒಂದಾಗಿತ್ತು ಎಂದು ಖಜೂಲೊ ಸಂಸ್ಥೆಯ ಮಾಲೀಕರು ತಿಳಿಸುತ್ತಾರೆ.

ಸರ್ಕಾರದ ಗೇರುಹಣ್ಣು ಕೀಳುವ ಟೆಂಡರ್ ದೊಡ್ಡ ದೊಡ್ಡ ಕಂಪನಿಗಳಿಗೆ ಪಾಲಾಗುತ್ತಿರುವುದರಿಂದ ಸಣ್ಣ ಸಣ್ಣ ಕುಟುಂಬಗಳಿಗೆ ಇಂದು ಏನೂ ಸಿಗುತ್ತಿಲ್ಲ. ಜೊತೆಗೆ ದೊಡ್ಡ ದೊಡ್ಡ ಮಧ್ಯ ತಯಾರಿಕರು ಡಿಸ್ಟಿಲರಿಯಲ್ಲಿ ಪೆನ್ನಿಯನ್ನು ತಯಾರಿಸಿ ಅಗ್ಗದ ಬೆಲೆಗೆ ಮಾರುತ್ತಿದ್ದಾರೆ. ದೊಡ್ಡ ಕಂಪನಿಗಳ ಜೊತೆ ದೃಪತಿ ಗಾಂವಕಾರ್ ತರಹದವರು ಸ್ಪರ್ಧಿಸಲು ಸಾಧ್ಯವಿಲ್ಲ. ಸರ್ಕಾರ ದೇಸಿ ಪೆನ್ನಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮೂಲಕ ಪೆನ್ನಿ ತಯಾರಕ ಕುಟುಂಬಗಳ ಜೊತೆ ನಿಲ್ಲಬೇಕಿದೆ. ಗೇರು ಹಣ್ಣಿನ ಟೆಂಡರ್ ಬೆಲೆಯನ್ನು ತಗ್ಗಿಸಿ ಪೆನ್ನಿ ತಯಾರಕರ ಬದುಕು ಬೀದಿಗೆ ಬೀಳದಂತೆ ಸರ್ಕಾರ ನೋಡಿಕೊಳ್ಳಬೇಕಿದೆ. ಕೊರೋನಾ ಕಾರಣದಿಂದ ಗೋವಾ ಮತ್ತು ಪಶ್ಚಿಮ ಕರಾವಳಿಯಲ್ಲಿ ಪ್ರವಾಸೋದ್ಯಮ ನಿಂತು ಹೋಗಿದೆ. ಮತ್ತೊಮ್ಮೆ ಪ್ರವಾಸಿಗರನ್ನು ಗೋವಾದತ್ತ ಆಕರ್ಷಿಸಲು ಗೇರುಹಣ್ಣಿನ ಸಾವಯವ ಪೆನ್ನಿ ಕೂಡ ಮಹತ್ವದ ಪಾತ್ರ ವಹಿಸುತ್ತದೆ. ಸ್ವಾದಿಷ್ಟ ಮತ್ತು ಸುರಕ್ಷಿತ ವಾದ 500 ವರ್ಷ ಇತಿಹಾಸವಿರುವ ಪೋರ್ಚುಗೀಸ್ ಮೂಲದ ಪೆನ್ನಿಯ ಭವಿಷ್ಯ ಸರ್ಕಾರಗಳ ಕೈಯಲ್ಲಿ ನರಳಾಡುತ್ತಿದೆ.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...