Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಹ್ಲೋಟ್, ಪೈಲಟ್ ಒಗ್ಗಟ್ಟಿನಿಂದ ಹೋರಾಡಲು ಒಪ್ಪಿದ್ದಾರೆ: ಕಾಂಗ್ರೆಸ್

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಹ್ಲೋಟ್, ಪೈಲಟ್ ಒಗ್ಗಟ್ಟಿನಿಂದ ಹೋರಾಡಲು ಒಪ್ಪಿದ್ದಾರೆ: ಕಾಂಗ್ರೆಸ್

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ಮಾಜಿ ಉಪ ಸಚಿನ್ ಪೈಲಟ್ ನಡುವೆ ವೈಮನಸ್ಸು ಉಂಟಾಗಿತ್ತು. ಸಧ್ಯ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾಂಗ್ರೆಸ್ ಹೈಕಮಾಂಡ್, ಇಬ್ಬರನ್ನು ಕರೆದು ಮಾತನಾಡಿದ್ದಾರೆ. ಸಧ್ಯ ಸಂಧಾನ ಯಶಸ್ವಿಯಾಗಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಇಬ್ಬರು ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ತಿಳಿಸಿದೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಿ, ”ಇಬ್ಬರೂ ನಾಯಕರು ತಮ್ಮಲ್ಲಿರುವ ಎಲ್ಲ ಸಮಸ್ಯೆಗಳನ್ನು ಪಕ್ಷದ ಹೈಕಮಾಂಡ್ ಪರಿಹರಿಸಲು ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

”ಕಾಂಗ್ರೆಸ್ ಪಕ್ಷಕ್ಕೆ ರಾಜಸ್ಥಾನವು ಪ್ರಬಲ ರಾಜ್ಯವಾಗಲಿದೆ ಎಂಬುದು ಸ್ಪಷ್ಟವಾಗಿದೆ. ನಾವು ಗೆಲ್ಲಲಿದ್ದೇವೆ. ಆದ್ದರಿಂದ, ಇಬ್ಬರೂ ನಾಯಕರು ಗೆಹ್ಲೋಟ್ ಜಿ ಮತ್ತು ಸಚಿನ್ ಜಿ ಒಟ್ಟಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ” ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಿಂದಿನ ದಿನ ಅಂದರೆ ರವಿವಾರದಂದು ಉಭಯ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಪ್ರತ್ಯೇಕವಾಗಿ ಮತ್ತು ಒಟ್ಟಿಗೆ ಭೇಟಿಯಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗೆಹ್ಲೋಟ್ ಮತ್ತು ಪೈಲಟ್ ನಡುವಿನ ಕದನದಿಂದಾಗಿ ಕಾಂಗ್ರೆಸ್‌ನ ರಾಜಸ್ಥಾನ ಘಟಕದಲ್ಲಿ ರಣಕಹಳೆ ಮೊಳಗಿದೆ ಎಂದು ವ್ಯಾಖ್ಯಾನಿಸಲಾಗಿತ್ತು. ಆದರೆ ಇದೀಗ ಒಟ್ಟಿಗೆ ಚುನಾವಣೆಗೆ ಹೋಗಲು ಒಪ್ಪಿಕೊಂಡಿದ್ದಾರೆ.

ಈ ಹಿಂದೆ ಪೈಲಟ್ ನೇತೃತ್ವದ 19 ಶಾಸಕರು ಗೆಹ್ಲೋಟ್ ಅವರನ್ನು ಬದಲಿಸಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಬೇಡಿಕೆಯನ್ನು ಎತ್ತಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ, ಪೈಲಟ್‌ನ ಕಳವಳಗಳನ್ನು ಪರಿಹರಿಸಲು ಕಾಂಗ್ರೆಸ್ ಮೂರು ಸದಸ್ಯರ ಸಮಿತಿಯನ್ನು ರಚಿಸಿತು. ನಂತರ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಯಿತು.

ಇತ್ತೀಚಿನ ದಿನಗಳಲ್ಲಿ, ಗೆಹ್ಲೋಟ್ ಪೈಲಟ್‌ರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ, ಆದರೆ ನಂತರದವರು ಹಿಂದಿನ ಬಿಜೆಪಿ ಆಡಳಿತದಲ್ಲಿ ನಡೆದ ಆರೋಪದ ಭ್ರಷ್ಟಾಚಾರದ ವಿರುದ್ಧ ತಮ್ಮದೇ ಸರ್ಕಾರವನ್ನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಒಂದು ದಿನದ ಉಪವಾಸ ಮತ್ತು ಪಾದಯಾತ್ರೆ ನಡೆಸಿದರು.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಬದಲಿಗೆ ಬಿಜೆಪಿಯ ವಸುಂಧರಾ ರಾಜೇ ಅವರನ್ನು ಗೆಹ್ಲೋಟ್ ತಮ್ಮ ನಾಯಕಿ ಎಂದು ಪರಿಗಣಿಸುತ್ತಾರೆ ಎಂದು ಮೇ 10 ರಂದು ಪೈಲಟ್ ಹೇಳಿದ್ದರು. 2020ರಲ್ಲಿ ಪೈಲಟ್ ನೇತೃತ್ವದ ಶಾಸಕರು ದಂಗೆ ಎದ್ದಾಗ ರಾಜೇ ಸೇರಿದಂತೆ ಮೂವರು ಬಿಜೆಪಿ ನಾಯಕರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಹೇಳಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ ನಾಯಕರನ್ನು ಹುದ್ದೆಯಿಂದ ಸಮಾಧಾನಪಡಿಸುವುದಿಲ್ಲ: ಗೆಹ್ಲೋಟ್

ಸೋಮವಾರದ ಸಭೆಯ ಮೊದಲು, ಪೈಲಟ್ ಅವರನ್ನು ಸಮಾಧಾನಪಡಿಸಲು ಕಾಂಗ್ರೆಸ್‌ನಿಂದ ವ್ಯವಸ್ಥೆ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಗೆಹ್ಲೋಟ್ ಅವರು ಪ್ರತಿಕ್ರಿಯಿಸಿದ್ದು, ಸಮಾಧಾನಪಡಿಸಲು ಯಾವುದೇ ನಾಯಕ ಅಥವಾ ಕಾರ್ಯಕರ್ತರಿಗೆ ಯಾವುದೇ ಸ್ಥಾನವನ್ನು ನೀಡುವ ಸಂಪ್ರದಾಯವು ಕಾಂಗ್ರೆಸ್‌ನಲ್ಲಿ ಇಲ್ಲ ಎಂದು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ನಾನು ಈ ಹಿಂದೆ ಅಂತಹ ವಿಷಯವನ್ನು ಕೇಳಿಲ್ಲ … ಕಾಂಗ್ರೆಸ್‌ನಲ್ಲಿ ಅಂತಹ ಸಂಪ್ರದಾಯವಿಲ್ಲ, ಯಾವುದೇ ನಾಯಕರು ಏನನ್ನಾದರೂ ಒತ್ತಾಯಿಸುತ್ತಾರೆ ಮತ್ತು ಪಕ್ಷದ ಹೈಕಮಾಂಡ್ ಆ ಸ್ಥಾನವನ್ನು ನೀಡುತ್ತದೆ. ನಾವು ಅಂತಹ ಸೂತ್ರದ ಬಗ್ಗೆ ಕೇಳಿಲ್ಲ” ಎಂದು ಅವರು ಹೇಳಿದರು.

ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರಾಗಿ ಪೈಲಟ್ ಅವರನ್ನು ಮತ್ತೆ ನೇಮಿಸಬಹುದು ಎಂಬ ಮಾಧ್ಯಮ ವರದಿಗಳನ್ನು ಗೆಹ್ಲೋಟ್ ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....