Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...