Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...