Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...