Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...