Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...